Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸ್ನೇಹಾಂಜಲಿ' ನಟ ಧ್ರುವ್ ಶರ್ಮ ನಿಧನ
ಕಿವಿ ಕೇಳದೆ ಇದ್ದರೂ, ಮಾತು ಬಾರದೆ ಇದ್ದರೂ... ಎಲ್ಲರಂತೆ ನಟನೆ ಮಾಡಿ ಭೇಷ್ ಎನಿಸಿಕೊಂಡಿದ್ದ ಬಹುಮುಖ ಪ್ರತಿಭೆ ಧ್ರುವ್ ಶರ್ಮ ಕೊನೆಯುಸಿರೆಳೆದಿದ್ದಾರೆ.
ಬಹು ಅಂಗಾಗ ವೈಫಲ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಟ ಧ್ರುವ್ ಶರ್ಮ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಧ್ರುವ್ ಶರ್ಮ ಬಿಸಿನೆಸ್ ಮೆನ್ ಹಾಗೂ ನಟ ಸುರೇಶ್ ಶರ್ಮ ರವರ ಪುತ್ರ. ಅಪ್ಪನಂತೆ ನಟನೆಯಲ್ಲಿ ಆಸಕ್ತಿ ತೋರಿದ ಧ್ರುವ್ ಶರ್ಮ, 'ಸ್ನೇಹಾಂಜಲಿ', 'ತಿಪ್ಪಜ್ಜಿ ಸರ್ಕಲ್' ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.
ಕಿವುಡು ಹಾಗೂ ಮೂಗ ಸಮಸ್ಯೆ ಇದ್ದರೂ, ಲಿಪ್ ಸಿಂಕ್ ಮೂಲಕ ಅಭಿನಯಿಸುತ್ತಿದ್ದರು ಧ್ರುವ್ ಶರ್ಮ. ಸಿನಿಮಾಗಳಲ್ಲಿ ಧ್ರುವ್ ಶರ್ಮ ರವರ ಅಭಿನಯ ಕಂಡು ಚಿತ್ರರಂಗದ ಗಣ್ಯಾತಿಗಣ್ಯರೇ ನಿಬ್ಬೆರಗಾಗಿದ್ದರು.
ನಟನೆ ಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲೂ ತನ್ನದೇ ಛಾಪು ಮೂಡಿಸಿದ್ದ ಧ್ರುವ್ ಶರ್ಮ ಇಂದು ಮುಂಜಾನೆ ಹಠಾತ್ ನಿಧನರಾಗಿದ್ದಾರೆ.
ಧ್ರುವ್ ಶರ್ಮ ರವರ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.