Don't Miss!
- News Ganesamoorthy Death: ಟಿಕೆಟ್ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ್ದ ಹಾಲಿ ಸಂಸದ ಸಾವು
- Sports IPL 2023: SRH ಅತ್ಯಧಿಕ ಐಪಿಎಲ್ ಮೊತ್ತ ಗಳಿಸಿದ ಹೊರತಾಗಿಯೂ RCBಯ ಈ ದಾಖಲೆ ಟಚ್ ಮಾಡಲಾಗಲಿಲ್ಲ
- Technology ಅಗ್ಗದ ಬೆಲೆಯಲ್ಲಿ 5G ಫೋನ್ ಬೇಕೆ?..ಹಾಗಿದ್ರೆ ಈ ಆಫರ್ ನಿಮಗೆ ಸೂಪರ್!
- Automobiles ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ: ಟಾಟಾ ಟಿಯಾಗೋ ಇವಿ EMI, ಆನ್ ರೋಡ್ ಬೆಲೆ ಎಷ್ಟು?
- Finance ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲಾಟ್ಗಳಿಗೆ ಹೆಚ್ಚಿನ ಬೇಡಿಕೆ, ಅಂಕಿಅಂಶ ವಿವರ
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದಂದು ದುನಿಯಾ ವಿಜಿ ಮತ್ತೊಂದು ವಿವಾದ: ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ ನಟ
Recommended Video
ಸ್ಯಾಂಡಲ್ ವುಡ್ ನ ಬ್ಲ್ಯಾಕ್ ಕೋಬ್ರ ನಟ ದುನಿಯಾ ವಿಜಯ್ 46ನೇ ವರ್ಷದ ಹುಟ್ಟಹುಬ್ಬದ ಸಂಭ್ರಮದಲ್ಲಿ ಇದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆ ಬಳಿ ಇರುವ ತಮ್ಮ ನಿವಾಸದಲ್ಲಿ, ಅಭಿಮಾನಿಗಳ ಜೊತೆ ರಾತ್ರಿ ಹುಟ್ಟುಹಬ್ಬ ಆಚರಿಸಿಕೊಂಡ ವಿಜಯ್ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬರ್ತಡೇ ಕೇಕ್ ಅನ್ನು ತಲ್ವಾರ್ ನಲ್ಲಿ ಕತ್ತರಿಸುವ ಮೂಲಕ ಹುಟ್ಟುಹಬ್ಬದ ದಿನವೂ ಎಡವಟ್ಟು ಮಾಡಿಕೊಂಡಿದ್ದಾರೆ.
ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಮತ್ತು ಪ್ರದರ್ಶಿವಂತಿಲ್ಲ. ಇದು ಆರ್ಮ್ಸ್ ಆಕ್ಟ್ ಆಡಿ ಅಪರಾಧವಾಗುತ್ತೆ. ಆದರೆ ವಿಜಿ ತಲ್ವಾರ್ ನಲ್ಲಿ ಕೇಕ್ ಕತ್ತರಿಸಿ ಅವಾಂತರ ಮಾಡಿಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ಡಿಸಿಪಿ ರೋಹಿಣಿ ಸೆಪಟ್ ತನಿಖೆ ನಡೆಸುವಂತೆ ಗಿರಿನಗರ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವಿಡಿಯೋ: ಹುಟ್ಟುಹಬ್ಬದ ದಿನ ಅಂಡರ್ ವರ್ಲ್ಡ್ ಅನಾವರಣ ಮಾಡಿದ ದುನಿಯಾ ವಿಜಯ್
ವಿಜಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಆದರೆ ಆಗಲೆ ವಿಜಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, "ನನ್ನ ಗಮನಕ್ಕೆ ಬಾರದೆ ಎಡವಟ್ಟಾಗಿದೆ, ಕ್ಷಮೆ ಇರಲಿ" ಎಂದಿದ್ದಾರೆ. ವಿಜಿ ಕೇಟ್ ಕತ್ತರಿಸುವ ಸಮಯದಲ್ಲಿ ವಿಜಯ್ ಜೊತೆ ತಾಯಿ, ಪತ್ನಿ ಕೀರ್ತಿ ಮತ್ತು ಸಲಗ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್ ಸಹ ಇದ್ದರು.
ಇನ್ನು ಹುಟ್ಟುಹಬ್ಬದ ವಿಶೇಷವಾಗಿ ಬಹುನಿರೀಕ್ಷೆಯ ಸಲಗ ಚಿತ್ರದ ಟೀಸರ್ ರಿಲೀಸ್ ಮಾಡಲಾಗಿದೆ. ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಸಿನಿಮಾವಿದು. ಈಗಾಗಲೆ ಮೊದಲ ಹಾಡು ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಸದ್ಯ ರಿಲೀಸ್ ಆಗಿರುವ ಟೀಸರ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.