Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿಲ್ಪಗಾಗಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಗೋಲ್ಡನ್ ಸ್ಟಾರ್
ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆಯೇ ಸಿನಿಮಾರಂಗದಿಂದ ರಾಜಕೀಯಕ್ಕೆ ಸ್ಟಾರ್ ನಟರನ್ನ ಕರೆ ತರುವ ಕೆಲಸಗಳು ಜೋರಾಗಿ ನಡೆಯುತ್ತಿದೆ. ಈಗಾಗಲೇ ಸುದೀಪ್, ದರ್ಶನ್ ಪಾಲಿಟಿಕ್ಸ್ ಗೆ ಎಂಟ್ರಿ ಕೊಡುತ್ತಾರೆ ಅನ್ನೋದು ಹಳೆ ಸುದ್ದಿ ಆಗೋಯ್ತು.
ಹೊಸ ಸುದ್ದಿ ಅಂದರೆ ಪ್ರೇಕ್ಷಕರಿಗೆ ಚಮಕ್ ಕೊಟ್ಟು ಗೆಲುವಿನ ನಗೆ ಬೀರುತ್ತಿರುವ ಸರದಾರ ಗೋಲ್ಡನ್ ಸ್ಟಾರ್ ಗಣೇಶ್ ರಾಜಕೀಯಕ್ಕೆ ಬರುತ್ತಿದ್ದಾರೆ ಎನ್ನುವ ಬಿಸಿ ಬಿಸಿ ಸುದ್ದಿ ಗಾಂಧಿ ನಗರದ ತುಂಬೆಲ್ಲಾ ಹರಿದಾಡುತ್ತಿದೆ.
ಕೆನಡಾ -ಯು.ಎಸ್ ಸುತ್ತಲು ಹೊರಟರು ರಶ್ಮಿಕಾ ಮತ್ತು ಗಣೇಶ್
ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದ ಗೋಲ್ಡನ್ ಸ್ಟಾರ್ ಚಿತ್ರೀಕರಣದ ನಡುವೆ ಬಿಡುವಿದ್ದಾಗ ಸಾಮಾಜಿಕ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ರಾಜಕೀಯದ ಕಣಕ್ಕಿಳಿಯುವ ಬಗ್ಗೆ ಗೋಲ್ಡನ್ ಸ್ಟಾರ್ ಸುಳಿವು ನೀಡಿದ್ದಾರೆ. ಹಾಗಾದರೆ ಗಣೇಶ್ ಯಾವ ಪಕ್ಷದಿಂದ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ? ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತಾರೆ? ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ ಮುಂದೆ ಓದಿ..
ರಾಜಕೀಯಕ್ಕೆ ಗೋಲ್ಡನ್ ಸ್ಟಾರ್ ಎಂಟ್ರಿ
ರಾಜಕೀಯ ಕಣಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಎಂಟ್ರಿ ಕೊಡಲಿದ್ದಾರೆ. ಹಾಗಂತ ಗಣೇಶ್ ಸ್ಪರ್ದಿ ಆಗಿ ಎಲೆಕ್ಷನ್ ಗೆ ನಿಲ್ಲುತ್ತಿಲ್ಲ. ತಮ್ಮ ಪತ್ನಿಗೆ ಟಿಕೇಟ್ ಸಿಕ್ಕರೆ ಶಿಲ್ಪ ಗಣೇಶ್ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಪತ್ನಿ ಸಾಥ್ ನೀಡಲಿರೋ ಗಣೇಶ್
ಗಣೇಶ್ ಅವರ ಪ್ರತಿ ಏಳಿಗೆಯಲ್ಲೂ ಕೈ ಜೋಡಿಸಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೇಟ್ ಆಕಾಂಕ್ಷಿ ಆಗಿದ್ದಾರೆ. ಶಿಲ್ಪ ಅವರಿಗೆ ಟಿಕೇಟ್ ಸಿಕ್ಕರೆ ಅವರ ಪರವಾಗಿ ಗಣೇಶ್ ಪ್ರಚಾರ ಮಾಡಲಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ
ಶಿಲ್ಪಾ ಗಣೇಶ್ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವುದರ ಜೊತೆಯಲ್ಲಿ ರಾಜಕೀಯದಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದಾರೆ. ಬಿ ಜೆ ಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆಯಾಗಿ ಸಾಕಷ್ಟು ಕೆಲಸ ಮಾಡಿರುವ ಶಿಲ್ಪಾ ಗಣೇಶ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ.
ಶಿಲ್ಪಾ ಎದುರು ಮುನಿರತ್ನ
ಶಿಲ್ಪ ಗಣೇಶ್ ರಾಜ ರಾಜೇಶ್ವರಿ ನಗರದಿಂದ ಚುನಾವಣೆಗೆ ಸ್ಪರ್ಧಿಸಿದರೆ ಶಿಲ್ಪ ಎದುರಾಗಿ ಚಿತ್ರರಂಗದ ಹೆಸರಾಂತ ನಿರ್ಮಾಪಕ ಮುನಿರತ್ನ ಸ್ಪರ್ಧೆಗಿಳಿಯಲಿದ್ದಾರೆ. ಅಷ್ಟೇ ಅಲ್ಲದೆ ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಕೂಡ ರಾಜ ರಾಜೇಶ್ವರಿ ನಗರದ ಟಿಕೇಟ್ ಆಕಾಂಕ್ಷಿ ಆಗಿದ್ದಾರೆ.