Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ 'ಆರೆಂಜ್'
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಪಟಾಕಿ' ಚಿತ್ರ ರಿಲೀಸ್ ಗೆ ರೆಡಿಯಾಗಿದೆ. ಯೋಗರಾಜ್ ಭಟ್ ನಿರ್ದೇಶನ 'ಮುಗುಳುನಗೆ' ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಮಧ್ಯೆ ಸಿಂಪಲ್ ಸುನಿ ಜೊತೆ 'ಚಮಕ್' ಅಂತಹ ಸಿನಿಮಾವೊಂದನ್ನ ಮಾಡಲಿದ್ದಾರಂತೆ. ಇನ್ನೂ 'ಗಾಳಿಪಟ-2' ಚಿತ್ರಕ್ಕೆ ಗಣೇಶ್ ಸಿದ್ದವಾಗುತ್ತಿದ್ದಾರೆ ಎನ್ನಲಾಗುತ್ತಿದೆ.
ಇಷ್ಟೇಲ್ಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಗಣೇಶ್ ಅವರು, ಇದೀಗ 'ಆರೆಂಜ್' ಚಿತ್ರವನ್ನ ಸೈಲಾಂಟ್ ಆಗಿ ಕೈಗೆತ್ತಿಕೊಂಡಿದ್ದಾರೆ. ಹೌದು, 'ಜೂಮ್' ಖ್ಯಾತಿಯ ಪ್ರಶಾಂತ್ ರಾಜ್ ನಿರ್ದೇಶನದಲ್ಲಿ ಗಣೇಶ್ ಹೊಸ ಚಿತ್ರವನ್ನ ಶುರು ಮಾಡಿದ್ದು, ಈ ಚಿತ್ರಕ್ಕೆ 'ಆರೆಂಜ್' ಎಂದು ಟೈಟಲ್ ಕೂಡ ಫಿಕ್ಸ್ ಆಗಿದೆ.[ಗಣೇಶ್-ಭಟ್ ಕಾಂಬಿನೇಷನ್ ನಲ್ಲಿ 'ಗಾಳಿಪಟ-2' ಬರಲಿದೆ.. ನಿರೀಕ್ಷಿಸಿ..]
ಇತ್ತೀಚೆಗಷ್ಟೇ 'ಶಿರಡಿ ಸಾಯಿಬಾಬ ಮಂದಿರ'ದಲ್ಲಿ 'ಆರೆಂಜ್' ಚಿತ್ರಕ್ಕೆ ಪೂಜೆ ಮಾಡಿಸಿದ್ದಾರೆ. ಇಂದು (ಫೆಬ್ರವರಿ 11) ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪಾ ಗಣೇಶ್ ಅವರ ವಿವಾಹ ಮಹೋತ್ಸವ ಹಿನ್ನಲೆ ಸ್ವತಃ ಗಣೇಶ್ ಅವರೇ ಈ ಸುದ್ದಿಯನ್ನ ಅನೌನ್ಸ್ ಮಾಡಿದ್ದಾರೆ.['ಮುಗುಳುನಗೆ'ಗೆ ಪಾಂಡಿಚೇರಿಯಲ್ಲಿ ಮಳೆ ಕಾಟ!]
ಅಂದ್ಹಾಗೆ, ಈ ಚಿತ್ರವನ್ನ ನಮ್ಮ ಸಿನಿಮಾ ಬ್ಯಾನರ್ ಅಡಿಯಲ್ಲಿ ನವೀನ್ ಜಿ ಎಸ್ ಅವರು ನಿರ್ಮಾಣ ಮಾಡುತ್ತಿದ್ದು, ಆದಷ್ಟೂ ಬೇಗ ಚಿತ್ರೀಕರಣವನ್ನ ಪ್ರಾರಂಭಿಸಲಿದೆ.