Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಡಿದ ಅಮಲಿನಲ್ಲಿ ಪೊಲೀಸರ ಜೊತೆ ನಟ ಹರ್ಷ ಕಿರಿಕ್
ಕುಡಿದ ಮತ್ತಿನಲ್ಲಿ ಸ್ಯಾಂಡಲ್ ವುಡ್ ನಟ ಹರ್ಷ ತಡರಾತ್ರಿ ನಗರದ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಾಲಹಳ್ಳಿ ಮುಖ್ಯ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಹರ್ಷ, ಸ್ನೇಹಿತರ ಜೊತೆ ಸೇರಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ರಾತ್ರಿ ಬೀಟ್ ನಲ್ಲಿದ್ದ ಪೊಲೀಸರು ಅಲ್ಲಿಗೆ ಎಂಟ್ರಿ ಕೊಟ್ಟಿದ್ದಾರೆ.
ಕುಡಿದು ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ ಪೊಲೀಸರ ವಿರುದ್ಧ ನಟ ಹರ್ಷ ಮತ್ತು ಸ್ನೇಹಿತರು ತಿರುಗಿಬಿದ್ದಾರೆ. ಪೊಲೀಸರಿಗೆ ಅವಾಜ್ ಹಾಕಿದಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ತೆಲುಗು ಬಿಗ್ಬಾಸ್ ಸ್ಪರ್ಧಿ ಉಡುಪಿಯಲ್ಲಿ ಬಂಧನ: ಕಾರಣವೇನು?
ಕೂಡಲೆ ನಟ ಹರ್ಷ ಮತ್ತು ಸ್ನೇಹಿತರನ್ನು ಬಾಗಲಕೋಟೆ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆತಂದು ಇನ್ನೊಮ್ಮೆ ಈ ರೀತಿ ಮಾಡದಂತೆ ವಾರ್ನಿಂಗ್ ಮಾಡಿ ಕಳಿಸಿದ್ದಾರೆ. ನಟ ಹರ್ಷ, ಯಶ್ ಅಭಿನಯದ 'ರಾಜಾಹುಲಿ' ಸಿನಿಮಾ ಮೂಲಕ ಖ್ಯಾತಿಗಳಿದ್ದಾರೆ. ವರ್ದನ, ಗಜಪಡೆ ಸಿನಿಮಾಗಳಲ್ಲಿಯೂ ಹರ್ಷ ನಟಿಸಿದ್ದಾರೆ.
Recommended Video
ಈ ಹಿಂದೆಯೂ ಒಮ್ಮೆ ಹರ್ಷ ಮತ್ತು ಸ್ನೇಹಿತರು ಡಾಬಾವೊಂದರಲ್ಲಿ ಕಿರಿಕ್ ಮಾಡಿಕೊಂಡಿದ್ದರು. ನಾಗಮಂಗಲ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಸ್ನೇಹಿತರ ಜೊತೆ ಡಾಬಾಗೆ ಊಟಕ್ಕೆ ಹೋದ ಸಮಯದಲ್ಲಿ ಕ್ಷುಲಕ ಕಾರಣಕ್ಕೆ ಸರ್ವರ್ ಗಳ ಜೊತೆ ಗಲಾಟೆ ಮಾಡಿಕೊಂಡಿದ್ದರು. ಬಳಿಕ ಡಾಬಾ ಸರ್ವರ್ ಗಳು ಹರ್ಷ ಮತ್ತು ಸ್ನೇಹಿತರನ್ನು ಗೃಹ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿತ್ತು.