Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಜಪಡೆ' ಹರ್ಷನ ಮೇಲೆ ಹೋಟೆಲ್ ಹುಡುಗರಿಂದ ಹಲ್ಲೆ
Recommended Video
'ವರ್ಧನ', 'ಗಜಪಡೆ', 'ರಾಜಾಹುಲಿ' ಸೇರಿದಂತೆ ಸಾಕಷ್ಟು ಸಿನಿಮಾಗಳ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಹರ್ಷ ಮೇಲೆ ಹೋಟೆಲ್ ಹುಡುಗರು ಹಲ್ಲೆ ಮಾಡಿದ್ದಾರೆ.
ನಟ ಹರ್ಷ ಸ್ನೇಹಿತನ ಮದುವೆಗಾಗಿ ಮೈಸೂರಿಗೆ ತೆರಳಿದ್ದರಂತೆ. ಸ್ನೇಹಿತರ ಜೊತೆ ಮೈಸೂರಿನಿಂದ ವಾಪಸ್ ಬರುವಾಗ ಖಾಸಗಿ ಹೋಟೆಲ್ ನಲ್ಲಿ ಊಟಕ್ಕಾಗಿ ತೆರಳಿದ್ದಾರೆ. ನಾಗಮಂಗಲದ ಬೆಳ್ಳೂರ್ ಕ್ರಾಸ್ ಬಳಿ ಇರುವ ಹೋಟೆಲ್ ನಲ್ಲಿ ಊಟಕ್ಕೆ ಹೋಗಿದ್ದಾರೆ.
ಊಟ ಸರ್ವ್ ಮಾಡುವ ವಿಚಾರಕ್ಕೆ ಆರಂಭದಲ್ಲಿ ಮಾತಿನ ಚಕಮಕಿ ಶುರುವಾಗಿದೆ. ನಂತರ ಹೋಟೆಲ್ ಹುಡುಗರು ಹಾಗು ಹರ್ಷನ ಸ್ನೇಹಿತರ ಮಧ್ಯೆ ಜೋರಾಗಿಯೇ ಗಲಾಟೆ ಆಗಿದೆ. ಮಾತು ಮಿತಿ ಮೀರಿ ಹೋಟೆಲ್ ಹುಡುಗರಿಂದ ನಟ ಹರ್ಷನ ಮೇಲೆ ದಾಳಿ ಮಾಡಿದ್ದಾರೆ.
ಹೋಟೆಲ್ ಹುಡುಗರು ಎಲ್ಲರು ಸೇರಿಕೊಂಡು ನಟ ಹರ್ಷ ಹಾಗು ಸ್ನೇಹಿತರನ್ನು ಗೃಹ ಬಂಧನದಲ್ಲಿರಿಸಿ ಟಾರ್ಚ್ರ್ ನೀಡಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ. ನಂತರ ಹರ್ಷ ತಮ್ಮ ಮನೆಯವರಿಗೆ ಫೋನ್ ಮೂಲಕ ಈ ವಿಚಾರ ತಿಳಿಸಿದ್ದಾರೆ ನಂತರ ನಾಗಮಂಗಲಕ್ಕೆ ಬಂದ ಹರ್ಷದ ತಂದೆ ಮತ್ತು ಸಹೋದರ ಅವರನ್ನು ಅಲ್ಲಿಂದ ಬಿಡಿಸಿಕೊಂಡು ಬಂದಿದ್ದಾರೆ.
ಆದರೆ ಈ ವಿಚಾರವಾಗಿ ಎಲ್ಲಿಯೂ ದೂರು ದಾಖಲಾಗಿಲ್ಲ ಎನ್ನುವುದು ಗೊಂದಲಕ್ಕೆ ಕಾರಣವಾಗಿದೆ. ಒಟ್ಟಾರೆ ಮಾತು ಮಿತಿ ಮೀರಿ ಹಲ್ಲೆ ಆಗಿರುವುದು ನಿಜ ಎನ್ನುವುದನ್ನು ಮೂಲಗಳಿಂದ ತಿಳಿದು ಬಂದಿದೆ.