ಸರಿಯಾದ ಪಾತ್ರ ಕೊಟ್ಟರೆ ತಪ್ಪದೆ ಬಾಲ್ ಬೌಂಡರಿಗೆ ತಲುಪಿಸುವೆ: ನಟ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತ, ಕಿರುತೆರೆಯಲ್ಲೂ ಕಾಣಿಸಿಕೊಳ್ಳುತ್ತಿರುವ ಜಗ್ಗೇಶ್ ಈಗ ಮತ್ತೊಂದು ಬಹು ನಿರೀಕ್ಷೆಯ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

ಸ್ಯಾಂಡಲ್ ವುಡ್ ನ ಹಿಟ್ ಕಾಂಬಿನೇಷನ್ ನಲ್ಲಿ ಒಂದಾಗಿರುವ ನವರಸನಾಯಕ ಜಗ್ಗೇಶ್ ಮತ್ತು ಗುರುಪ್ರಸಾದ್ ಜೋಡಿಯ ಹೊಸ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಇಬ್ಬರು ಮುನಿಸು ಮರೆತು ಒಂದಾಗಿದ್ದು ಮಾತ್ರವಲ್ಲದೆ ಸಿನಿಮಾ ಕೂಡ ಶುರು ಮಾಡಿದ್ದಾರೆ.

ಮಠ, ಎದ್ದೇಳು ಮಂಜುನಾಥ ಅಂತಹ ಸೂಪರ್ ಹಿಟ್ ಕಾಮಿಡಿ ಸಿನಿಮಾಗಳನ್ನು ನೀಡಿರುವ ಈ ಜೋಡಿ ಈಗ ರಂಗನಾಯಕ ಮೂಲಕ ಮತ್ತೆ ವಾಪಸ್ ಆಗಿರುವುದು ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ. ಜಗ್ಗೇಶ್ ಮತ್ತು ಗುರುಪ್ರಾಸಾದ್ ಸಿನಿಮಾಗೆ ರಂಗನಾಯಕ ಅಂತ ಟೈಟಲ್ ಫಿಕ್ಸ್ ಮಾಡಲಾಗಿದೆ. ಬಗ್ಗೆ ನವರಸ ನಾಯಕ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಸರಿಯಾದ ಪಾತ್ರ ಕೊಟ್ಟರೆ ಸಕ್ಸಸ್ ಖಂಡಿತಾ ಎಂದು ಹೇಳಿದ್ದಾರೆ.

Kannada actor Jaggesh and Guruprasad combinations Ranganayaki film shooting start

"ನವರಸನಾಯಕನ ರಂಗನಾಯಕ ಮಾಡಲು ಹೊರಟ ಗುರುಪ್ರಸಾದ್. ಸರಿಯಾದ ಪಾತ್ರ ಕೊಟ್ಟರೆ ತಪ್ಪದೆ ಬಾಲ್ ಬೌಂಡರಿಗೆ ತಲುಪಿಸುವೆ. ಹತ್ತು ಹೆರುವುದಕ್ಕಿಂತ ಮುತ್ತಿನಂತ ಒಂದು ಹೆರುವಂತೆ. ನನಗೆ ನೂರಾರು ಚಿತ್ರಕ್ಕಿಂತ ಮುತ್ತಿನಂತ ಕೆಲ ಚಿತ್ರ ಸಾಕು ಕನ್ನಡಿಗರ ಖುಷಿಪಡಿಸಲು. ಧನ್ಯವಾದಗಳು" ಎಂದು ರಂಗನಾಯಕ ಚಿತ್ರದ ಬಗ್ಗೆ ಮತ್ತು ನಿರ್ದೇಶಕರ ಬಗ್ಗೆ ಹೇಳಿಕೊಂಡಿದ್ದಾರೆ.

ಅಂದ್ಹಾಗೆ ಇಬ್ಬರನ್ನು ಒಟ್ಟಿಗೆ ಸೇರಿಸುವ ಪ್ರಯತ್ನ ಮಾಡಿತ್ತು ನಿರ್ಮಾಪಕ ವಿಖ್ಯಾತ್. ಸದ್ಯ ಚಿತ್ರೀಕರಣ ಪ್ರಾರಂಭಿಸಿರುವ ಚಿತ್ರತಂಡ ಚಿತ್ರದ ಬಗ್ಗೆ ಹೆಚ್ಚೇನು ಬಿಟ್ಟುಕೊಟ್ಟಿಲ್ಲ. ಅಲ್ಲದೆ ಕಲಾವಿದರ ಬಗ್ಗೆ ಬಹಿರಂಗ ಪಡಿಸಿಲ್ಲ ಚಿತ್ರತಂಡ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

More from Filmibeat

English summary
Kannada actor Jaggesh and Guruprasad new movie titled Ranganayaki. Ranganayaki shooting already starting.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X