Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೇಷಾದ್ರಿ ವಿರುದ್ಧ 'ನವರಸ ನಾಯಕ'ನ ಟ್ವಿಟ್ಟರ್ ಪ್ರಹಾರ
'ಖಳ ನಟ'ರಿಗೆ ಪ್ರತ್ಯೇಕ ಪ್ರಶಸ್ತಿ ನೀಡಬಾರದು ಅಂತ 'ರಾಜ್ಯ' ಮತ್ತು 'ರಾಷ್ಟ್ರ ಪ್ರಶಸ್ತಿ' ಪುರಸ್ಕೃತ ನಿರ್ದೇಶಕ ಪಿ.ಶೇಷಾದ್ರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆಷ್ಟೇ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದ ಅವ್ಯವಸ್ಥೆ ಬಗ್ಗೆ ಕಿಡಿಕಾರಿರುವ ಶೇಷಾದ್ರಿ, ಇದೇ ಸಮಾರಂಭದಲ್ಲಿ ಸರ್ಕಾರದ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಲ್ಲಿಸಿದ 'ಉತ್ತಮ ವಿಲನ್' ಪ್ರಶಸ್ತಿ ಪ್ರಸ್ತಾವನೆಗೆ ಅಡ್ಡಗಾಲು ಹಾಕಿದ್ದಾರೆ. [ಚಾಲೆಂಜಿಂಗ್ ಸ್ಟಾರ್ ಗೆ ಚಾಲೆಂಜ್ ಹಾಕಿದ ಪಿ.ಶೇಷಾದ್ರಿ]
ಆ ಮಾಹಿತಿ ಜಗಜ್ಜಾಹೀರಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವಾದ ವಾಗ್ವಾದ ಜೋರಾಗಿ ನಡೆಯುತ್ತಿದೆ. ಅದಕ್ಕೀಗ ದನಿ ಸೇರಿಸಿರುವ ನವರಸ ನಾಯಕ ಜಗ್ಗೇಶ್ ಕೊಂಚ ಏರುದನಿಯಲ್ಲೇ ನಿರ್ದೇಶಕ ಪಿ.ಶೇಷಾದ್ರಿ ಅವರಿಗೆ ಟಾಂಗ್ ನೀಡಿದ್ದಾರೆ.
director
p.sheshadhri
kalnatarige
prashasti
beda
antha
govt
ge
letter
bardiddare,evarige
mathra
prashasti
beku
others
ge
bedva?
continue
—
jaggesh
(@jaggesh2)
March
11,
2015
''ನಿರ್ದೇಶಕ ಪಿ.ಶೇಷಾದ್ರಿ ಖಳನಟರಿಗೆ ಪ್ರಶಸ್ತಿ ಬೇಡ ಅಂತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇವರಿಗೆ ಮಾತ್ರ ಪ್ರಶಸ್ತಿ ಬೇಕು, ಬೇರೆಯವರಿಗೆ ಬೇಡ್ವಾ..?'' ಅಂತ ಜಗ್ಗೇಶ್ ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನಿಗಳ ಮುಂದೆ ಪ್ರಶ್ನೆ ಇಟ್ಟಿದ್ದಾರೆ.
nimge
matra
red
carpet
bereyavarige
bedva,darshan
madisda
antha
avana
hesaritkondu
one
more
bitti
prachara
bekitha
nimmantorige,stop
nusence
—
jaggesh
(@jaggesh2)
March
11,
2015
''ನಿಮಗೆ ಮಾತ್ರ ರೆಡ್ ಕಾರ್ಪೆಟ್. ಬೇರೆಯವರಿಗೆ ಬೇಡ್ವಾ? ದರ್ಶನ್ ಮಾಡಿಸಿದ್ದು ಅಂತ ಅವರ ಹೆಸರಿಟ್ಟುಕೊಂಡು ಮತ್ತೊಂದು ಬಿಟ್ಟಿ ಪ್ರಚಾರ ಬೇಕಾ ನಿಮ್ಮಂಥವರಿಗೆ. ಈ ನ್ಯೂ ಸೆನ್ಸ್ ನಿಲ್ಲಿಸಿ'' ಅಂತ ಜಗ್ಗೇಶ್ ಕಿಡಿಕಾರಿದ್ದಾರೆ.
ಆ ಮೂಲಕ ಖಳನಟರ ಪರ ನಿಂತಿರುವ ಜಗ್ಗೇಶ್, ದರ್ಶನ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಶೇಷಾದ್ರಿ ಮುನ್ನುಡಿ ಬರೆದಿರುವ ಈ ವಿವಾದಕ್ಕೆ ಕನ್ನಡ ಚಿತ್ರರಂಗದ ಕಡೆಯಿಂದ ಮೊದಲಿಗೆ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೆ ಇನ್ನೆಷ್ಟು ಜನ ಜೈಕಾರ ಹಾಕುತ್ತಾರೋ ನೋಡಬೇಕು. (ಫಿಲ್ಮಿಬೀಟ್ ಕನ್ನಡ)