Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದು ಯಾಕೆ?
Recommended Video
ನಟ ಸುದೀಪ್ ಇತ್ತೀಚಿಗಷ್ಟೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಚುನಾವಣೆ ಹೊತ್ತಿನಲ್ಲಿ ಇವರಿಬ್ಬರ ಬೇಟಿ ತುಂಬ ಕುತೂಹಲ ಮತ್ತು ಚರ್ಚೆ ಉಂಟು ಮಾಡಿತ್ತು. ಆದರೆ ಕುಮಾರಸ್ವಾಮಿ ನಂತರ ಸುದೀಪ್ ಇದೀಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬೇಟಿ ಮಾಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ 'T-10' ಕ್ರಿಕೆಟ್ ಟೂರ್ನಿ
ಇಂದು (ಗುರುವಾರ) ಬೆಳ್ಳಗೆ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಗೆ ಸುದೀಪ್ ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜೊತೆಗೆ ಕೆಲ ಕಾಲ ಮಾತನಾಡಿದರು. ಇನ್ನು ಕರ್ನಾಟಕದಲ್ಲಿ ಎಲೆಕ್ಷೆನ್ ಹತ್ತಿರ ಇರುವ ಈ ಸಮಯದಲ್ಲಿ ಸುದೀಪ್ ರಾಜಕಾರಣಿಗಳನ್ನು ಯಾಕೆ ಭೇಟಿ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಮೂಡಿಸಿದೆ. ಜೊತೆಗೆ ಸುದೀಪ್ ರಾಜಕೀಯಕ್ಕೆ ಬರುತ್ತಾರಾ ಅಥವಾ ಅವರು ಈ ಬಾರಿಯ ಚುನಾವಣೆಗೆ ಯಾವ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಾರೆ ಎನ್ನುವ ಕುತೂಹಲ ಸಹ ಹೆಚ್ಚಾಗಿದೆ. ಆದರೆ ಸುದೀಪ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೇಟಿ ಮಾಡಿರುವ ಹಿಂದೆ ಯಾವುದೇ ರಾಜಕೀಯ ಕಾರಣಗಳು ಇಲ್ಲ.
ನಟ ಸುದೀಪ್ ಸಾರಥ್ಯದಲ್ಲಿ ಬರುತ್ತಿರುವ 'ಕೆ ಸಿ ಸಿ' (ಕನ್ನಡ ಚಲನಚಿತ್ರ ಕಪ್) ಕ್ರಿಕೆಟ್ ಪಂದ್ಯದ ಉದ್ಗಾಟನೆಯ ಕಾರ್ಯಕ್ರಮ ಏಪ್ರಿಲ್ 7 ರಂದು ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರಲು ಸಿಎಂ ಸಿದ್ಧರಾಮಯ್ಯ ಅವರನ್ನು ಸುದೀಪ್ ಆಹ್ವಾನಿಸಿದ್ದಾರೆ. ಅಂದಹಾಗೆ, 'ಕೆ ಸಿ ಸಿ' ಕ್ರಿಕೆಟ್ ಪಂದ್ಯ ಈ ವರ್ಷದಿಂದ ಶುರು ಆಗಿದೆ. ಕನ್ನಡ ಚಿತ್ರರಂಗದ ಕಲಾವಿದರು ಮತ್ತು ಪತ್ರಕರ್ತರ ನಡುವೆ ಪಂದ್ಯಗಳು ನಡೆಯುತ್ತದೆ. ಒಟ್ಟು ಆರು ತಂಡಗಳು ಈ ಟೂರ್ನಿ ಯಲ್ಲಿ ಭಾಗಿಯಾಗಲಿದ್ದು, ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ನಿರ್ದೇಶಕ ನಂದಕಿಶೋರ್, ಇಂದ್ರಜೀತ್ ಲಂಕೇಶ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದು 'ಟಿ 10' ಪಂದ್ಯವಾಗಿದ್ದು, ಪ್ರತಿ ತಂಡಕ್ಕೆ 10 ಓವರ್ ನೀಡಲಾಗುವುದು.