Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಡುಹಗಲೆ 'ಬೀದಿ ಕಾಳಗ'ಕ್ಕಿಳಿದ ನಟ ಕೋಮಲ್
Recommended Video
ಕನ್ನಡದ ಖ್ಯಾತ ನಟ, ರಾಜಕಾರಣಿ ಜಗ್ಗೇಶ್ ತಮ್ಮ ಕೋಮಲ್ ಕುಮಾರ್ ಮೇಲೆ ಹಾಡುಹಗಲೇ ಹಲ್ಲೆ ನಡೆದ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ. ಕೋಮಲ್ ಕೂಡ ಜನಪ್ರಿಯ ನಾಯಕರಾಗಿದ್ದು 'ಕೆಂಪೇಗೌಡ ೨' ಅವರ ಇತ್ತೀಚಿನ ಚಿತ್ರವಾಗಿದೆ.
'ಫಿಲ್ಮಿ ಬೀಟ್ ಕನ್ನಡ'ಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಮಂತ್ರಿ ಮಾಲ್ ಮುಂಭಾಗ ನಡೆದ ಗಲಾಟೆಯೊಂದರಲ್ಲಿ ಕೋಮಲ್ ಮೇಲೆ ಹಲ್ಲೆ ನಡೆದಿದೆ. "ವಾಹನ ಅಪಘಾತದ ವಿಚಾರದಲ್ಲಿ ಸಣ್ಣ ಗಲಾಟೆ ನಡೆದಿದೆ. ಗಲಾಟೆ ತಾರಕ್ಕೇರಿ ಕೋಮಲ್ ಮೇಲೆ ಹಲ್ಲೆ ನಡೆಸಲಾಗಿದೆ. ಸದ್ಯ ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ,'' ಎಂದು ಮಲ್ಲೇಶ್ವರ ಪೊಲೀಸ್ ಠಾಣೆ ಮೂಲಗಳು ಖಚಿತಪಡಿಸಿವೆ.
ಕಾರಿಗೆ ಡಿಕ್ಕಿ ಹೊಡೆದಿದ್ದಕ್ಕೆ ಜಗಳ
ಮಲ್ಲೇಶ್ವರ ಬಳಿ ಹೋಗುತ್ತಿದ್ದ ನಟ ಕೋಮಲ್ ಕಾರಿಗೆ ಟ್ರಾಫಿಕ್ ನಲ್ಲಿ ಮತ್ತೊಂದು ಕೋರು ಟಚ್ ಆಗಿದೆ. ಸಹಜವಾಗಿ ಕಾರಿನಿಂದ ಇಳಿದ ಕೋಮಲ್, ವಾಹನದ ಚಾಲಕನ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಇಬ್ಬರು ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗಿದೆ. ಇದರಿಂದ ತೀವ್ರ ಆಕ್ರೋಶಕ್ಕೆ ಒಳಗಾದ ಕೋಮಲ್ ಆ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ.
ಕೋಮಲ್ ಗೆ ಹಿಗ್ಗಾಮುಗ್ಗಾ ಥಳಿತ
ಕೋಮಲ್ ಅವರಿಂದ ಹೊಡೆತ ತಿಂದ ಆ ವ್ಯಕ್ತಿ ಬಳಿಕ ಕೋಮಲ್ ವಿರುದ್ದ ತಿರುಗಿ ಬಿದಿದ್ದಾನೆ. ವ್ಯಕ್ತಿಯ ಜೊತೆ ಅವರ ಸ್ನೇಹಿತರು ಕೂಡ ಜೊತೆಯಲ್ಲಿ ಇದ್ದರು. ಎಲ್ಲರು ಕೋಮಲ್ ಅವರಿಗೆ ರಕ್ತ ಬರುವಂತೆ ಥಳಿಸಿದ್ದಾನೆ. ಸ್ಥಳದಲ್ಲಿ ಪೊಲೀಸರು ಇದ್ದರು ಎಂಬ ಮಾಹಿತಿ ಇದೆ. ಪೊಲೀಸರ ಎದುರೆ ನಡುಬೀದಿಯಲ್ಲಿ ನಟ ಕೋಮಲ್ ಗೆ ಎಲ್ಲರು ಹೊಡೆಯುತ್ತಿದ್ದಿದ್ದನ್ನು ನೋಡಿ ಜನರು ಗಾಬರಿಯಾಗಿದ್ದಾರೆ. ಹೊಡೆತ ತಿಂದು ಕೆಳಗೆ ಬಿದ್ದ ಕೋಮಲ್ ಅವರನ್ನ ಸ್ಥಳಿಯರು ರಕ್ಷಿಸಿದ್ದಾರೆ.
ಕೋಮಲ್ ಪೊಲೀಸರ ವಶಕ್ಕೆ
ಈ ಸಂಬಂಧ ಮಲ್ಲೇಶ್ವರ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ಸ್ಥಳಕ್ಕೆ ದಾವಿಸಿ ವ್ಯಕ್ತಿ ಮತ್ತು ಕೋಮಲ್ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ನಂತರ ವಿಚಾರ ತಿಳಿದ ಅಣ್ಣ ನಟ ಜಗ್ಗೇಶ್ ಕೂಡ ಪೊಲೀಸ್ ಸ್ಟೇಷನ್ ಗೆ ಧಾವಿಸಿದ್ದಾರೆ.
ದೂರು ಸಾಧ್ಯತೆ.!
ಸದ್ಯ ಕೋಮಲ್ ಮತ್ತು ಆ ವ್ಯಕ್ತಿಯನ್ನ ಮಲ್ಲೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಇಬ್ಬರಲ್ಲಿ ತಪ್ಪು ಯಾರದ್ದು, ಯಾಕೆ ಆ ಗಲಾಟೆ ಆಯಿತು ಎಂಬುದರ ವಿಚಾರಣೆ ನಡೆಯುತ್ತಿದೆ. ಕೋಮಲ್ ಅಥವಾ ಆ ವ್ಯಕ್ತಿ ವಿಚಾರಣೆ ಬಳಿಕ ದೂರು ದಾಖಲಾಗುವ ಸಾಧ್ಯತೆ ಇದೆ. ನಂತರ ಕೋಮಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.