Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಗ' ಚಿತ್ರ ಎತ್ತಂಗಡಿ: ನಟ-ನಿರ್ಮಾಪಕ ಮಿತ್ರ ಆಸ್ಪತ್ರೆಗೆ ದಾಖಲು!
ಕಳೆದ ವಾರವಷ್ಟೇ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದ 'ರಾಗ' ಚಿತ್ರವನ್ನ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಎತ್ತಂಗಡಿ ಮಾಡುತ್ತಿರುವ ಹಿನ್ನಲೆ ನಟ, ನಿರ್ಮಾಪಕ ಮಿತ್ರ ಅವರಿಗೆ ಆಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
'ರಾಗ' ಚಿತ್ರವನ್ನ ಚಿತ್ರಮಂದಿರದಿಂದ ತೆಗೆಯುತ್ತಿರುವ ಸುದ್ದಿಯನ್ನ ಕೇಳಿದ ಮಿತ್ರ ಅವರಿಗೆ ರಕ್ತದೊತ್ತಡ ಹೆಚ್ಚಾಗಿ ಆಘಾತಕ್ಕೊಳಗಾದರು. ತಕ್ಷಣ ಅವರನ್ನ ನಾಗದೇವನಹಳ್ಳಿಯ ಶಿವಶಕ್ತಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸದ್ಯ, ಮಿತ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ತುಂಬಾ ಬೇಸರ ವ್ಯಕ್ತಪಡಿಸುತ್ತಿದ್ದಾರೆ.[ವಿಮರ್ಶೆ: ಭಾವನೆಯಲ್ಲಿ ಮುಳುಗಿಸುವ ಪ್ರೇಮ'ರಾಗ' ]
ಇನ್ನು ಈ ಕುರಿತು 'ರಾಗ' ಚಿತ್ರದ ನಿರ್ದೇಶಕ ಪಿ.ಸಿ ಶೇಖರ್ ವಿಡಿಯೋವೊಂದನ್ನ ಮಾಡಿ ಫೇಸ್ ಬುಕ್ ನಲ್ಲಿ ತಮ್ಮ ನೋವನ್ನ ಹೊರಹಾಕಿದ್ದಾರೆ. ಸುಮಾರು 65 ಚಿತ್ರಮಂದಿಗಳಲ್ಲಿ 'ರಾಗ' ಸಿನಿಮಾ ರಿಲೀಸ್ ಆಗಿತ್ತು. ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಆದ್ರೆ, ಒಂದೇ ವಾರದಲ್ಲಿ ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾವನ್ನ ತೆಗೆಯುತ್ತಿದ್ದಾರೆ ಎಂದು ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ.[ಕಲಾತ್ಮಕತೆಯಲ್ಲಿ ಅರಳಿದ ಪ್ರೇಮ'ರಾಗ'ಕ್ಕೆ ವಿಮರ್ಶಕರ ಅಭಿಪ್ರಾಯ..]
ಈ ವಾರ ದೇಶಾದ್ಯಂತ ತೆಲುಗು ಚಿತ್ರ 'ಬಾಹುಬಲಿ' ರಿಲೀಸ್ ಆಗುತ್ತಿದೆ. ಹೀಗಾಗಿ, ಕರ್ನಾಟಕದಲ್ಲಿ 'ಬಾಹುಬಲಿ' ಚಿತ್ರಕ್ಕೆ ಚಿತ್ರಮಂದಿರವನ್ನ ನೀಡಲು ಕನ್ನಡ ಚಿತ್ರಗಳನ್ನ ತೆಗೆಯಲಾಗುತ್ತಿದೆ.