Don't Miss!
- Sports
ಕೋಟಿ ಕೊಟ್ರೂ ಡಕ್ಔಟ್ ಆಗಿದ್ದೀಯಾ ಎಂದು ಐಪಿಎಲ್ ತಂಡದ ಮಾಲೀಕ ಕೆನ್ನೆಗೆ ಹೊಡೆದಿದ್ರು: ರಾಸ್ ಟೇಲರ್!
- News
Breaking: ಕರ್ನಾಟಕದಲ್ಲಿ 2ನೇ ದಿನವೂ ಕೊರೊನಾದಿಂದ 5 ಮಂದಿ ಸಾವು!
- Lifestyle
ಸ್ವಾತಂತ್ರ್ಯದ ಅಮೃತ ಮಹೋತ್ಸಕ್ಕೆ ಸ್ಪೆಷಲ್ ರೆಸಿಪಿ: ತಿರಂಗಾ ಹಲ್ವಾ
- Automobiles
ಇವಿ ಬಸ್ ಸೇವೆಗಾಗಿ 1 ಬಿಲಿಯನ್ ಡಾಲರ್ ಮೌಲ್ಯದ ಸ್ವಿಚ್ ಮೊಬಿಲಿಟಿ ನಿರ್ಮಾಣದ 5 ಸಾವಿರ ಇವಿ ಬಸ್ ನಿಯೋಜನೆ
- Technology
ಬ್ಲೂ ಬೋಲ್ಡ್ N2 ಸ್ಮಾರ್ಟ್ಫೋನ್ ಬಿಡುಗಡೆ! ಏನೆಲ್ಲಾ ಫೀಚರ್ಸ್ ಲಭ್ಯ!
- Finance
ಕೇರಳ ಲಾಟರಿ: 'ಕಾರುಣ್ಯ KR 562' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ
- Education
CSG Karnataka Recruitment 2022 : 128 ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
ಹೊಸ ಚಿತ್ರ 'ಕರುಣಾ-ನಿಧಿ'. ಇದು ಯಾರ ಕಥೆ..?
ಕನ್ನಡ ನಟ ಮೋಹನ್ ನಟಿಸಿ, ನಿರ್ಮಿಸಿ, ನಿರ್ದೇಶಿಸಿದ್ದ 'ಮಳೆ ನಿಲ್ಲುವವರೆಗೆ' ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅಬ್ಬರ ಸೃಷ್ಟಿಸಲಿಲ್ಲ. ಆದರೂ ಚಿಂತೆ ಇಲ್ಲ. ನಟ ಮೋಹನ್ ಹೊಸ ಸಿನಿಮಾ ಮಾಡುವ ಮನಸ್ಸು ಮಾಡಿದ್ದಾರೆ.
ಹಾಗೆ ಮೋಹನ್ ಕಾಣಿಸಿಕೊಳ್ಳುತ್ತಿರುವ ಹೊಸ ಚಿತ್ರದ ಹೆಸರು 'ಕರುಣಾ-ನಿಧಿ'. ಹೆಸರು ಕೇಳಿದ ಕೂಡಲೆ ಇದು ತಮಿಳುನಾಡು ಮಾಜಿ ಮುಖ್ಯಮಂತ್ರಿಯ ಜೀವನಚರಿತ್ರೆ ಆಧರಿಸಿದ ಸಿನಿಮಾನಾ ಅಂತ ಪ್ರಶ್ನೆ ಕೇಳ್ಬೇಡಿ.
ತಮಿಳುನಾಡು ಮಾಜಿ ಸಿ.ಎಂ ಕರುಣಾನಿಧಿಗೂ, 'ಕರುಣಾ-ನಿಧಿ' ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಕರುಣಾ ಮತ್ತು ನಿಧಿ ಅನ್ನುವ ಇಬ್ಬರು ವ್ಯಕ್ತಿಗಳ ನಡುವಿನ ಕಥೆ 'ಕರುಣಾ-ನಿಧಿ'. [ನಿರ್ದೇಶಕ, ಬರಹಗಾರ ಎಜಿ ಶೇಷಾದ್ರಿ ಸಂದರ್ಶನ]
ಅಂದ್ಹಾಗೆ, ಮೋಹನ್ ಇಲ್ಲಿ ಬರೀ ನಟನಾಗಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಕಿರುತೆರೆಯ ಪ್ರಸಿದ್ಧ ಬರಹಗಾರ ಹಾಗು ನಿರ್ದೇಶಕ ಎ.ಜಿ.ಶೇಷಾದ್ರಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಶೀರ್ಷಿಕೆ ಮಾತ್ರದಿಂದಲೇ ಸೌಂಡ್ ಮಾಡುವುದಕ್ಕೆ ಶುರುಮಾಡಿರುವ 'ಕರುಣಾ-ನಿಧಿ' ಚಿತ್ರದ ಬಗ್ಗೆ ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಇಷ್ಟು. ಹೆಚ್ಚಿನ ಮಾಹಿತಿಗೆ 'ಫಿಲ್ಮಿಬೀಟ್ ಕನ್ನಡ' ಓದುತ್ತಿರಿ.