Don't Miss!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೈಜ ಘಟನೆ ಆಧಾರಿತ ಚಿತ್ರಕ್ಕೆ ನಾಯಕನಾದ ನಿಖಿಲ್ ಕುಮಾರ್
Recommended Video
ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರ್ ಮುಂದಿನ ಸಿನಿಮಾದ ತಯಾರಿಯಲ್ಲಿದ್ದಾರೆ. 'ಸೀತಾರಾಮ ಕಲ್ಯಾಣ' ಸಿನಿಮಾದ ನಂತರ ನಿಖಿಲ್ ಯಾರ ನಿರ್ದೇಶನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. 'ಪೈಲ್ವಾನ್' ನಿರ್ದೇಶಕರ ಜೊತೆ ಸೇರಿಕೊಳ್ಳುವ ಮೂಲಕ ಇದ್ದ ಕುತೂಹಲಕ್ಕೆ ತೆರೆ ಎಳೆದಿದ್ದರು. ಆದರೆ ಯಾವ ಸಿನಿಮಾ, ಯಾವಾಗ ಸೆಟ್ಟೇರಲಿದೆ ಎನ್ನುವ ಮಾಹಿತಿ ಬಹಿರಂಗವಾಗಿರಲಿಲ್ಲ.
ಸದ್ಯ ಬಂದ ಮಾಹಿತಿ ಪ್ರಕಾರ ನಿರ್ದೇಶಕ ಕೃಷ್ಣ ನೈಜ ಘಟನೆ ಆಧಾರಿತ ಕಥೆಯನ್ನು ಕೈಗೆತ್ತಿಕೊಂಡಿದ್ದಾರಂತೆ. ಆದರೆ ಯಾವ ತರಹದ ಸಿನಿಮಾ ಎನ್ನುವ ಮಾಹಿತಿ ಬಹಿರಂಗವಾಗಿಲ್ಲ. ಕೃಷ್ಣ ಇದುವರೆಗು ಮಾಡಿದ ಸಿನಿಮಾಗಳಿಗಿಂದ ತುಂಬ ವಿಭಿನ್ನವಾದ ಸಿನಿಮಾ ಇದಾಗಿದೆಯಂತೆ. ಚಿತ್ರದಲ್ಲಿ ನಿಖಿಲ್ ಗೆಟಪ್ ಕೂಡ ಸಂಪೂರ್ಣವಾಗಿ ಬದಲಾಗಲಿದೆಯಂತೆ. ವಿಭಿನ್ನವಾದ ಲುಕ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈಗಾಗಲೆ ನಿಖಿಲ್ ಪಾತ್ರಕ್ಕೆ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರಂತೆ.
'ಪೈಲ್ವಾನ್' ಸಿನಿಮಾಗೆ ಹಣಕಾಸಿನ ಸಹಾಯ ಮಾಡಿದ್ದರು ಈ ಇಬ್ಬರು ನಟರು
ಇನ್ನು ವಿಶೇಷ ಅಂದರೆ ಚಿತ್ರ ಮುಂದಿನ ವರ್ಷ ಜನವರಿಯಲ್ಲಿ ಸೆಟ್ಟೇರಲಿದೆಯಂತೆ. ಸದ್ಯ ಚಿತ್ರತಂಡ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ನಿಖಿಲ್ ಮತ್ತು ನಿರ್ದೇಶಕ ಕೃಷ್ಣ ಬಿಟ್ಟರೆ ಚಿತ್ರದ ಉಳಿದ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.
ಕೃಷ್ಣ ಮತ್ತು ನಿಖಿಲ್ ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. ಈ ಮೊದಲು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ '2.0' ಸಿನಿಮಾ ಲೈಕಾ ಸಂಸ್ಥೆಯಡಿ ನಿರ್ಮಾಣವಾಗಿದೆ, ಇನ್ನು ಕಮಲ್ ಹಾಸನ್ ಅಭಿನಯದ 'ಇಂಡಿಯನ್-2 'ಸಿನಿಮಾ ಲೈಕಾ ಬ್ಯಾನರ್ ನಲ್ಲಿ ತಯಾರಾಗುತ್ತಿದೆ. ಸದ್ಯ ಕೃಷ್ಣ ಮತ್ತು ನಿಖಿಲ್ ಸಿನಿಮಾದ ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.