Don't Miss!
- Sports Hardik Pandya: ಹಾರ್ದಿಕ್ ಪಾಂಡ್ಯರಲ್ಲಿನ ನಾಯಕತ್ವದ ಗುಣಗಳು ಕಾಣೆಯಾಗಿವೆಯಾ?
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
50ರ ಗಡಿ ತಲುಪಿದ ಸಂಭ್ರಮದಲ್ಲಿ 'ಆರ್ಮುಗಂ' ರವಿಶಂಕರ್
'ಕೆಂಪೇಗೌಡ' ಚಿತ್ರದಲ್ಲಿ 'ಆರ್ಮುಗಂ'ನಾಗಿ ಘರ್ಜನೆ ಮಾಡಿದ ನಟ ರವಿಶಂಕರ್ ಅವರು ತದನಂತರ ಎಲ್ಲಾ ಸಿನಿಮಾಗಳಲ್ಲಿ ಖಳನಟನಾಗಿ ಎಲ್ಲರ ಮೆಚ್ಚುಗೆ ಗಳಿಸುತ್ತಾ, ಸದ್ಯಕ್ಕೆ ಸ್ಯಾಂಡಲ್ ವುಡ್ ನಲ್ಲಿ ಬಹುಬೇಡಿಕೆಯುಳ್ಳ ಖಳನಟನಾಗಿ ಹೊರ ಹೊಮ್ಮಿದ್ದಾರೆ.
ಇದೀಗ ಈ ಅಪರೂಪದ ಖಳನಟ ಬಂದ ಅಲ್ಪ ಸಮಯದಲ್ಲೇ ಖಳನಟನಾಗಿಯೇ ಹಾಗೂ ಕೆಲವು ಸಿನಿಮಾಗಳಲ್ಲಿ ಕಾಮಿಡಿ ಖಳನಟನಾಗಿ ಎಲ್ಲರ ಮೆಚ್ಚುಗೆ ಗಳಿಸಿ ಅಭಿಮಾನಿಗಳನ್ನು ಸಂಪಾದಿಸಿದ್ದು ಮಾತ್ರವಲ್ಲದೇ ಭರ್ತಿ 50 ಸಿನಿಮಾಗಳಲ್ಲಿ ನಟಿಸಿದ್ದಾರೆ.['ಆರ್ಮುಗಂ' ರವಿಶಂಕರ್ ಗೆ ಹ್ಯಾಪಿ ಬರ್ತ್ ಡೇ ಹೇಳಿ.!]
ಸದ್ಯಕ್ಕೆ ತೆರೆಗೆ ಬರಲು ತಯರಾಗಿರುವ 'ಜಿಗರ್ ಥಂಡ' ಚಿತ್ರ ಖಳನಟ ರವಿಶಂಕರ್ ಅವರದು 50ನೇ ಸಿನಿಮಾ. ಕಿಚ್ಚ ಸುದೀಪ್ ಅರ್ಪಿಸುವ ಈ ಚಿತ್ರ ತಮಿಳಿನ 'ಜಿಗರ್ ಥಂಡ' ಚಿತ್ರದ ರೀಮೆಕ್ ಆಗಿದೆ. ಚಿತ್ರಕ್ಕೆ ಶಿವ ಗಣೇಶ್ ಅವರು ಆಕ್ಷನ್-ಕಟ್ ಹೇಳಿದ್ದಾರೆ.
ಈ ಚಿತ್ರದಲ್ಲೂ ರವಿಶಂಕರ್ ಅವರು ಖಳನಟನ ಪಾತ್ರದಲ್ಲಿ ಮಿಂಚಿದ್ದು, ನಟ ರಾಹುಲ್ ಅವರು ನಾಯಕನಾಗಿ ಮಿಂಚಿದ್ದಾರೆ. ಇವರಿಗೆ ನಟಿ ಸಂಯುಕ್ತ ಬೆಳವಾಡಿ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಅಂದಹಾಗೆ ಈ ಸಿನಿಮಾದ ಮೂಲಕ ರವಿಶಂಕರ್ ಅವರು ಗಾಯಕರಾಗಿ ಕೂಡ ಹೊರಹೊಮ್ಮಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಮ್ಯೂಸಿಕ್ ಕಂಪೋಸಿಷನ್ ನಲ್ಲಿ 'ಇದು ಆರ್ಮುಗಂ ಕೋಟೆ ಕಣೋ' ಅನ್ನೋ ಹಾಡಿಗೆ ತಮ್ಮ ಖಡಕ್ ಧ್ವನಿ ನೀಡಿದ್ದಾರೆ.
'ಕೆಂಪೇಗೌಡ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯವಾದ ರವಿಶಂಕರ್ ಅವರು ಕಿಚ್ಚ ಸುದೀಪ್ ಅವರಿಗೆ ಪರಮಾತ್ಮ ಗೆಳೆಯ. ಇದೀಗ ಸುಮಾರು 5 ವರ್ಷಗಳಲ್ಲಿ ಭರ್ತಿ 50 ಸಿನಿಮಾ ಮಾಡಿ ಅಭಿಮಾನಿಗಳ ಮನದಲ್ಲಿ ಜಾಗ ಪಡೆದಿದ್ದಾರೆ.