Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಜುನ್ ಸರ್ಜಾ ಕ್ಷಮೆ ಕೇಳುವುದು ದೊಡ್ಡತನ ಎಂದ ಪ್ರಕಾಶ್ ರೈ
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಕನ್ನಡ ನಟಿ ಶ್ರುತಿ ಹರಿಹರನ್ ಮಾಡಿದ ಆರೋಪಕ್ಕೆ ಸ್ಯಾಂಡಲ್ ವುಡ್ ನಲ್ಲಿ ಸುನಾಮಿಯೇ ಸೃಷ್ಟಿಯಾಗಿದೆ. ಚಿತ್ರರಂಗದ ಬಹುತೇಕರು ಅರ್ಜುನ್ ಸರ್ಜಾ ಪರವಾಗಿ ನಿಂತಿದ್ದಾರೆ. ಶ್ರುತಿ ಹರಿಹರನ್ ವಿರುದ್ಧ ನೆಟ್ಟಿಗರು ಕೆಂಡಕಾರುತ್ತಿದ್ದಾರೆ.
ನಟಿ ಶ್ರುತಿ ಹರಿಹರನ್ ವಿರುದ್ಧ ನಿರ್ಮಾಪಕ ಮುನಿರತ್ನ ಹಾಗೂ ಸಾ.ರಾ.ಗೋವಿಂದು ಕಣ್ಣು ಕೆಂಪಗೆ ಮಾಡಿಕೊಂಡಿದ್ದಾರೆ. ಎಲ್ಲೆಡೆ ಪರ-ವಿರೋಧ, ಸರಿ-ತಪ್ಪು ಚರ್ಚೆ ನಡೆಯುತ್ತಿರುವಾಗಲೇ, ನಟಿ ಶ್ರುತಿ ಹರಿಹರನ್ ಪರವಾಗಿ ಬಹುಭಾಷಾ ನಟ ಪ್ರಕಾಶ್ ರೈ (ಪ್ರಕಾಶ್ ರಾಜ್) ದನಿಯೆತ್ತಿದ್ದಾರೆ.
''ಶ್ರುತಿ ಹರಿಹರನ್ ನೋವನ್ನ ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ. ಅವರ ನೋವಿಗಾಗಿ ಅರ್ಜುನ್ ಸರ್ಜಾ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ'' ಎಂದಿದ್ದಾರೆ ನಟ ಪ್ರಕಾಶ್ ರಾಜ್. ಮುಂದೆ ಓದಿರಿ...
ಪ್ರತಿಭಾವಂತ ನಟಿ
''ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ.. ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ರವರು ಕನ್ನಡದ ಹೆಮ್ಮೆ.. ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶ್ರುತಿಯವರ ಆರೋಪದ ಹಿನ್ನೆಲೆಯಲ್ಲಿ.. ಆ ಹೆಣ್ಣು ಅನುಭವಿಸಿದ ಅಸಹಾಯಕತೆ...ಅವಮಾನ...ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥಮಾಡಿಕೊಳ್ಳಬೇಕಾಗಿದೆ'' - ಪ್ರಕಾಶ್ ರಾಜ್, ನಟ
'ರೆಸಾರ್ಟ್ ಗೆ ಹೋಗೋಣ ಬಾ' ಎಂದು ಕರೆದರು : ಸರ್ಜಾ ಮೇಲೆ ಶ್ರುತಿ ಬಾಂಬ್!
ದೊಡ್ಡತನದ ಲಕ್ಷಣ
''ಅರ್ಜುನ್ ರವರು ಈ ಆರೋಪವನ್ನು ಅಲ್ಲಗಳೆದರೂ.. ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟುಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ'' - ಪ್ರಕಾಶ್ ರಾಜ್, ನಟ
'ನಾಚಿಕೆ ಆಗಬೇಕು' : ಶ್ರುತಿ ವಿರುದ್ಧ ಅರ್ಜುನ್ ಸರ್ಜಾ ಕೆಂಡಾಮಂಡಲ!
ದೌರ್ಜನ್ಯಕ್ಕೆ ಕೊನೆ ಕಾಣಲಿ
''ಅರಿತೋ ಅರಿಯದೆಯೋ ನಾವು ಗಂಡಸರು ಹುಟ್ಟಿನಿಂದಲೇ ಹೆಣ್ಣಿನ ಬೇಕು ಬೇಡಗಳ ಬಗ್ಗೆ ಸೂಕ್ಷಮತೆಯನ್ನು ಕಳೆದುಕೊಂಡಿರುವುದು ನಿಜ. ಹೆಣ್ಣು ಮಕ್ಕಳೂ ತಮ್ಮ ಹಕ್ಕನ್ನು ಅರಿಯದೆ ಇರುವುದೂ ಅಷ್ಟೇ ನಿಜ...ಪ್ರಸ್ತುತ ಹೆಣ್ಣುಮಕ್ಕಳ ಈ 'ಮಿ ಟೂ' ಅಭಿಯಾನ ಮುಂದಿನ ದಿನಗಳಲ್ಲಾದರೂ ನಮ್ಮ ಸಮಾಜದಲ್ಲಿ ಅವರ ಮೇಲಿನ ಶತಮಾನಗಳ ದೌರ್ಜನ್ಯಕ್ಕೆ.. ಅವಮಾನಗಳಿಗೆ... ಅಸಹಾಯಕತೆಗೆ...ಕೊನೆಯನ್ನು ಕಾಣಲಿ'' - ಪ್ರಕಾಶ್ ರಾಜ್, ನಟ
'ವಿಸ್ಮಯ' ಸೆಟ್ ನಲ್ಲಿ ಆಗಿದ್ದೇನು: ನಿರ್ದೇಶಕ ಅರುಣ್ ವೈದ್ಯನಾಥನ್ ಏನಂತಾರೆ.?
ಶ್ರುತಿ ಹರಿಹರನ್ ಪರವಾಗಿ ನಿಂತ ಪ್ರಕಾಶ್ ರಾಜ್
''ನಾನು ಶ್ರುತಿ ಹರಿಹರನ್ ರವರ ಪರವಾಗಿ.. ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ'' - ಪ್ರಕಾಶ್ ರಾಜ್, ನಟ