Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಅವರ 'ರಾಜಕುಮಾರ'ದಲ್ಲಿ ಎರಡು ಕಥೆ ಇದೆಯಂತೆ
ಯಶ್ ಮತ್ತು ರಾಧಿಕಾ ಜೋಡಿಯಾಗಿ ಕಾಣಿಸಿಕೊಂಡಿದ್ದ 'ಮಿ.ಅಂಡ್ ಮಿಸಸ್' ರಾಮಾಚಾರಿ ಎಂಬ ಸಿನಿಮಾವನ್ನು ಸ್ಯಾಂಡಲ್ ವುಡ್ ಗೆ ಕೊಟ್ಟು ಭರವಸೆಯ ನಿರ್ದೇಶಕ ಎನಿಸಿಕೊಂಡ ಸಂತೋಷ್ ಆನಂದ್ ರಾಮ್ ಅವರ 'ರಾಜಕುಮಾರ' ಸಿನಿಮಾ ಸಖತ್ ಸದ್ದು ಮಾಡುತ್ತಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಪ್ರಿಯಾ ಆನಂದ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ 'ರಾಜಕುಮಾರ' ಚಿತ್ರದಲ್ಲಿ ಒಂದಲ್ಲಾ ಎರಡೆರಡು ಕಥೆ ಇದೆಯಂತೆ.[ಪುನೀತ್ ರ 'ರಾಜಕುಮಾರ' ಚಿತ್ರದ ಬಗ್ಗೆ ಜಗ್ಗೇಶ್ ಹೇಳಿದ್ದೇನು?]
ಸಾಮಾನ್ಯವಾಗಿ ಯಾವುದೇ ಸಿನಿಮಾದಲ್ಲಿ ಮಧ್ಯಂತರ ಆದಾಗ ಕಥೆಗೆ ಟ್ವಿಸ್ಟ್ ಇಟ್ಟು ಪ್ರೇಕ್ಷಕರಿಗೆ ಗೊಂದಲ ಮೂಡಿಸಿದರೆ, 'ರಾಜಕುಮಾರ' ಚಿತ್ರದಲ್ಲಿ ಮಾತ್ರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಚಿತ್ರದ ಮೊದಲರ್ಧ ಭಾಗದಲ್ಲಿ ಒಂದು ಕಥೆಯಾದರೆ, ಎರಡನೇ ಭಾಗದಲ್ಲಿ ಇನ್ನೊಂದು ಕಥೆ ಸೃಷ್ಟಿಸಿ ಪ್ರೇಕ್ಷಕರ ಮನಸ್ಸನ್ನು ಗೊಂದಲದ ಗೂಡಾಗಿಸಲಿದ್ದಾರೆ.[ಸದ್ದಿಲ್ಲದೆ ಮುಹೂರ್ತ ಆಚರಿಸಿಕೊಂಡ ಪುನೀತ್ ರ 'ರಾಜಕುಮಾರ']
ಚಿತ್ರದ ಮೊದಲರ್ದ ಮತ್ತು ದ್ವಿತೀಯಾರ್ಧದಲ್ಲಿ ಬೇರೆ ಬೇರೆ ಕಥೆಗಳು ತೆರೆದುಕೊಳ್ಳುತ್ತದೆ. ಆ ಎರಡೂ ಕಥೆಗಳನ್ನು ಪುನೀತ್ ಅವರ ಪಾತ್ರ ಒಂದುಗೂಡಿಸುತ್ತದೆ. ಪೂರ್ತಿ ಸಿನಿಮಾ ನೋಡಿದವರಿಗೆ ಮಾತ್ರ ಅಸಲಿ ವಿಷಯ ಗೊತ್ತಾಗುತ್ತದೆ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ತಿಳಿಸಿದ್ದಾರೆ.['ರಾಜಕುಮಾರ'ನ ಜೊತೆ ಡ್ಯುಯೆಟ್ ಹಾಡೋ ರಾಣಿ ಯಾರು ಗೊತ್ತಾ?]
ಅಂದಹಾಗೆ 'ಮಿ.ಅಂಡ್.ಮಿಸಸ್ ರಾಮಾಚಾರಿ' ಚಿತ್ರಕ್ಕೂ ಮುಂಚೆಯೇ 'ರಾಜಕುಮಾರ' ಚಿತ್ರ ತಯಾರಾಗಿತ್ತಂತೆ. ಆದರೆ ಮೊದಲ ಪ್ರಯತ್ನದಲ್ಲಿ ಕೈ ಸುಟ್ಟುಕೊಳ್ಳುವುದು ಬೇಡ ಅಂತ ತಮ್ಮ 2ನೇ ಚಿತ್ರದಲ್ಲಿ ಪುನೀತ್ ಅವರ ಜೊತೆ ಸೇರಿಕೊಂಡು ವಿಭಿನ್ನ ಸಾಹಸಕ್ಕೆ ಕೈ ಹಾಕಿದ್ದಾರೆ.['ರಾಜಕುಮಾರ' ಪುನೀತ್ ರವರ ಯುವರಾಣಿ 'ಇವರೇ'..!]
ಕಳೆದ ಶುಕ್ರವಾರ (ಮಾರ್ಚ್ 11) ದಂದು ಮುಹೂರ್ತ ನೆರವೇರಿಸಿಕೊಂಡ 'ರಾಜಕುಮಾರ' ಸಿನಿಮಾ ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಆರಂಭಿಸಲಿದೆ. ವಿದೇಶದಲ್ಲಿ ಸೇರಿದಂತೆ ಗೋವಾ, ಮೈಸೂರು ಹಾಗೂ ವಾರಣಾಸಿಯಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳು ನಟ ಶರತ್ ಕುಮಾರ್ ಅವರು ಪುನೀತ್ ಅವರ ತಂದೆಯ ಪಾತ್ರದಲ್ಲಿ ಮಿಂಚಲಿದ್ದಾರೆ.