Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಕ್ಷಸಿ ಆಡಿಯೋ ಬಿಡುಗಡೆ ಮಾಡಿದ ಅಪ್ಪು ಮತ್ತು ವಿಶಾಲ್
ಖ್ಯಾತ ತಮಿಳು ನಟ ವಿಶಾಲ್ ಹಾಗೂ ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಕ್ಟೋಬರ್ 4 ರಂದು ಬಸವೇಶ್ವರ ನಗರದ ಡಾ.ಬಿ. ಆರ್ ಅಂಬೇಡ್ಕರ್ ಸ್ಟೇಡಿಯಂ ನಲ್ಲಿ ನಟಿ ಸಿಂಧು ಲೋಕನಾಥ್ ಹಾಗೂ ನವರಸನ್ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿರುವ 'ರಾಕ್ಷಸಿ' ಚಿತ್ರದ ಆಡಿಯೋ ಹಾಗೂ ಟ್ರೈಲರ್ ಬಿಡುಗಡೆ ಮಾಡಿದರು.
ಫೇಮಸ್ ಡೈರೆಕ್ಟರ್ ಎ ಆರ್ ಮುರುಗದಾಸ್ ಅವರ ಶಿಷ್ಯ ಅಶ್ರಫ್ ಅವರು 'ರಾಕ್ಷಸಿ' ಚಿತ್ರಕ್ಕೆ ಆಕ್ಷನ್- ಕಟ್ ಹೇಳಿದ್ದಾರೆ. ಸುಮಾರು ವರ್ಷಗಳಿಂದ ಎ ಆರ್ ಮುರುಗದಾಸ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಅಶ್ರಫ್ ಅವರಿಗೆ ಕನ್ನಡದಲ್ಲಿ ಇದು ಚೊಚ್ಚಲ ಚಿತ್ರ.
ನಿರ್ದೇಶಕ ಮೈಸಾಕಿನ್ ಆಕ್ಷನ್-ಕಟ್ ಹೇಳಿದ್ದ ತಮಿಳು 'ಪಿಸಾಸು' (2014) ಚಿತ್ರದ ರಿಮೇಕ್ ಚಿತ್ರವಾದ 'ರಾಕ್ಷಸಿ' ಈಗಾಗಲೇ ಶೂಟಿಂಗ್ ಮುಗಿಸಿದೆ. ಇನ್ನು ಈ ಮೊದಲು ಚಿತ್ರದ ಶೂಟಿಂಗ್ ಸೆಟ್ ಗೆ ನಟ ವಿಶಾಲ್ ಅವರು ಭೇಟಿ ನೀಡಿ ನಿರ್ದೇಶಕರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.
ಇದೀಗ ನಟ ವಿಶಾಲ್ ಅವರು ಚಿತ್ರದ ಆಡಿಯೋ ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ಆಗಮಿಸಿ ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದ್ದಾರೆ.
ನಟ ವಿಶಾಲ್ ಅವರ ತಂದೆಯವರಿಗೆ ಬೆಂಗಳೂರಿನ ಕಡೆ ಹೆಚ್ಚಿನ ಕನೆಕ್ಷನ್ ಜೊತೆಗೆ ವಿಶಾಲ್ ಅವರ ತಂದೆ 'ರಾಕ್ಷಸಿ' ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ನಿರ್ದೇಶಕ ಅಶ್ರಫ್ ಅವರು ತಮಿಳು ಚಿತ್ರರಂಗದಿಂದ ಚಿರಪರಿಚಿರಾಗಿರುವುದರಿಂದ ವಿಶಾಲ್ ಅವರು 'ರಾಕ್ಷಸಿ' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಶ್ರೀ ಲಕ್ಷ್ಮಿ ವೃಷಾದ್ರಿ ಪ್ರೊಡಕ್ಷನ್ಸ್ ಅರ್ಪಿಸುವ 'ರಾಕ್ಷಸಿ' ಚಿತ್ರ ತಂದೆ ಮಗಳ ಬಾಂಧವ್ಯದ ಕಥಾಹಂದರವನ್ನು ಹೊಂದಿದೆ. ಶಿವು ಅವರ ಸಾಹಸ ಇರುವ ಚಿತ್ರಕ್ಕೆ ವಿಶಾಲ್ ಅವರ ಸಂಕಲನವಿದೆ.
ಇನ್ನುಳಿದಂತೆ ತಾರಾಗಣದಲ್ಲಿ ನವರಸನ್, ಸಿಂಧು ಲೋಕನಾಥ್, ಜಿ.ಕೆ ರೆಡ್ಡಿ, ಕುರಿ ಪ್ರತಾಪ್, ಕೆಂಪೇಗೌಡ, ಸುಜಿತ್, ಕೃಷ್ಣಮೂರ್ತಿ ಹಾಗೂ ಕೌತಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ.