Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೂಟಿಂಗ್ ವೇಳೆ ಡಿಂಗ್ರಿ ನಾಗರಾಜ್ ಪುತ್ರ ನಟ ರಾಜವರ್ಧನ್ ಬೆನ್ನಿಗೆ ಗಾಯ
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿರುವುದು ನಿಮಗೆ ಗೊತ್ತಿರುವ ವಿಚಾರವೇ. ರಾಜವರ್ಧನ್ ಸದ್ಯ 'ಬಿಚ್ಚುಗತ್ತಿ' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ.
'ಬಿಚ್ಚುಗತ್ತಿ' ಚಿತ್ರದ ಶೂಟಿಂಗ್ ವೇಳೆ ಕುದುರೆಯಿಂದ ಬಿದ್ದ ರಾಜವರ್ಧನ್ ಬೆನ್ನಿಗೆ ಪೆಟ್ಟಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ರಾಜವರ್ಧನ್ ಬಚಾವ್ ಆಗಿದ್ದಾರೆ.
ಚಂದನವನದ 'ಫ್ಲೈ'ಯಿಂಗ್ ಸ್ಟಾರ್ ರಾಜವರ್ಧನ್ ಸಂದರ್ಶನ
ರಾಜವರ್ಧನ್ ರವರನ್ನ ಸದ್ಯ ಪೀಪಲ್ ಟ್ರೀ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. 15-20 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಡಿಂಗ್ರಿ ನಾಗರಾಜ್ ಪುತ್ರನಿಗೆ ಹೊಡಿತು ಚಾನ್ಸು.!
ಅಂದ್ಹಾಗೆ, ಹರಿ ಸಂತು ನಿರ್ದೇಶನದ ಸಿನಿಮಾ 'ಬಿಚ್ಚುಗತ್ತಿ'. ಅದ್ಧೂರಿ ವೆಚ್ಚದಲ್ಲಿ ಕೋಟೆ ಸೆಟ್ ನಿರ್ಮಿಸಿ ಕಳೆದ ಮೂವತ್ತು ದಿನಗಳಿಂದ ನೆಲಮಂಗಲದ ಬಳಿ ಶೂಟಿಂಗ್ ನಡೆಸಲಾಗುತ್ತಿತ್ತು. ಮುಂದಿನ ಶೆಡ್ಯೂಲ್ ಚಿತ್ರದುರ್ಗದ ಕೋಟೆಯಲ್ಲಿ ಪ್ಲಾನ್ ಮಾಡಲಾಗಿತ್ತು. ಆದ್ರೆ, ಅಷ್ಟರಲ್ಲಿ ಅವಘಡ ಸಂಭವಿಸಿದ್ದು ರಾಜವರ್ಧನ್ ಬೆಡ್ ರೆಸ್ಟ್ ನಲ್ಲಿದ್ದಾರೆ.