Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹು ದಿನಗಳ ನಂತರ ಫೇಸ್ ಬುಕ್ ಲೈವ್ ಬಂದ ರಕ್ಷಿತ್ ಹೇಳಿದ್ದೇನು?
Recommended Video
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳ ಮುಂದೆ ಬರದೆ ವರ್ಷಗಳೆ ಆಗಿದೆ. 'ಕಿರಿಕ್ ಪಾರ್ಟಿ' ಸಿನಿಮಾ ನಂತರ ರಕ್ಷಿತ್ ಈಗ 'ಅವನೇ ಶ್ರೀಮನ್ನಾರಾಯಣ' ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಪ್ರಾರಂಭವಾಗಿ ಎರಡು ವರ್ಷದ ಮೇಲಾಗಿದೆ ಆದರು ರಕ್ಷಿತ್ ಸಿನಿಮಾದ ಬಗ್ಗೆ ಹೆಚ್ಚು ಅಪ್ ಡೇಟ್ಸ್ ಸಿಗುತ್ತಿಲ್ಲ ಎನ್ನುವುದು ಅಭಿಮಾನಿಗಳ ಬೇಸರವಾಗಿತ್ತು.
ಆದ್ರೀಗ ಸ್ವತಃ ರಕ್ಷಿತ್ ಫೇಸ್ ಬುಕ್ ಲೈವ್ ಬರುವ ಮೂಲಕ ಬಹು ನಿರೀಕ್ಷೆಯ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಬಗ್ಗೆ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರವನ್ನು ಹಂಚಿಕೊಂಡಿದ್ದಾರೆ. "ಚಿತ್ರದ ಲೈವ್ ರೆಕಾರ್ಡಿಂಗ್ ಮೆಸಿಡೋನಿಯಾದಲ್ಲಿ ನಡೆಯುತ್ತಿದೆ. ಮುಂಬೈ ಮತ್ತು ಚೆನ್ನೈನಲ್ಲಿ ರೆಕಾರ್ಡಿಂಗ್ ಮಾಡಿದ್ವಿ, ಆದರೆ ಮೊದಲ ಬಾರಿಗೆ ಮೆಸಿಡೋನಿಯಾದಲ್ಲಿ ರೆಕಾರ್ಡಿಂಗ್ ಮಾಡುತ್ತಿದ್ದೇವೆ" ಎಂದು ಹೇಳಿದ್ದರು.
ಡಿಸೆಂಬರ್ ಗೆ ರಿಲೀಸ್ ಆಗಲಿದೆ 'ಅವನೇ ಶ್ರೀಮನ್ನಾರಾಯಣ': ರಕ್ಷಿತ್ ಶೆಟ್ಟಿ
ಅಜ್ಜು ಅಂದ್ರೆ ಅಜನೀಶ್ ಮತ್ತು ರಕ್ಷಿತ್ ಇಬ್ಬರು ಮೆಸಿಡೋನಿಯಾಗೆ ಹೋಗಬೇಕಿತ್ತಂತೆ. ಪೋಸ್ಟ್ ಪ್ರೊಡಕ್ಷನ್ ಕೆಲಸದ ಹಿನ್ನಲೆ ಮೆಸಿಡೋನಿಯಾ ಹೋಗುವುದನ್ನು ನಿಲ್ಲಿಸಿ ಅಜ್ಜು ಸ್ಟುಡಿಯೋದಲ್ಲಿ ಸ್ಕೈಪ್ ಮೂಲಕ ರೆಕಾರ್ಡಿಂಗ್ ಮಾಡುತ್ತಿದ್ದಾರೆ. ಈ ರೆಕಾರ್ಡಿಂಗ್ ಪ್ರೋಸೆಸ್ ಅನ್ನು ಫೇಸ್ ಬುಕ್ ಲೈವ್ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ ರಕ್ಷಿತ್.
ಈಗಾಗಲೆ ಚೆನ್ನೈನಲ್ಲಿ ಒಂದು ವರ್ಷನ್ ರೆಕಾರ್ಡಿಂಗ್ ಮಾಡಿದ್ದಾರಂತೆ. ಆದ್ರೀಗ ಮೆಸಿಡೋನಿಯಾದಲ್ಲಿ ರೆಕಾರ್ಡಿಂಗ್ ಮಾಡುತ್ತಿದ್ದಾರೆ. ಚೆನ್ನೈ ಮತ್ತು ಮೆಸಿಡೋನಿಯಾದಲ್ಲಿ ಮಾಡಿದ ರೆಕಾರ್ಡಿಂಗ್ ಗುಣಮಟ್ಟದಲ್ಲಿ ಎಷ್ಟು ವ್ಯತ್ಯಾಸವಿರಲಿದೆ ಎಂದು ಪ್ರಯೋಗ ಮಾಡುತ್ತಿದ್ದಾರಂತೆ. ಯಾಕಂದ್ರೆ ಮೆಸಿಡೋನಿಯಾದಲ್ಲಿರುವ ರೆಕಾರ್ಡಿಂಗ್ ಸ್ಟುಡಿಯೋ ಹಾಗೆಯೆ ಬೆಂಗಳೂರಿನಲ್ಲಿಯೂ ಮಾಡಬೇಕೆನ್ನುವುದು ರಕ್ಷಿತ್ ಮತ್ತು ಅಜನೀಶ್ ಕನಸಂತೆ.
ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಎಲ್ಲವು ಅಂದುಕೊಂಡಂತೆ ಆದರೆ ಡಿಸೆಂಬರ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ಸಾಧ್ಯತೆ ಇದೆ. ಸದ್ಯ ರೆಕಾರ್ಡಿಂಗ್ ನಲ್ಲಿ ನಿರತವಾಗಿರುವ ಅವನೇ ಶ್ರೀಮನ್ನಾರಾಯಣ ಟ್ರೈಲರ್ ಮುಂದಿನ ವಾರ ರಿಲೀಸ್ ಆಗುವ ಸಾಧ್ಯತೆ ಇದೆ.