Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವ್ಯಂಗ್ಯ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ
Recommended Video
ರಾಜ್ಯದ ರಾಜಕೀಯದ ಸದ್ಯದ ಸ್ಥಿತಿಯನ್ನು ಕಂಡು ರಿಯಲ್ ಸ್ಟಾರ್ ಉಪೇಂದ್ರ ವ್ಯಂಗ್ಯವಾಡಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತೊ ಉರುಳಿತ್ತೊ ಎನ್ನುವ ಸ್ಥಿತಿಯಲ್ಲಿರುವ ಈ ಸಂದರ್ಭದಲ್ಲಿ ಉಪೇಂದ್ರ ಮತ ಚಲಾಯಿಸುವ ಒಂದು ದಿನ ಮಾತ್ರ ನಮಗೆ ಬೆಲೆ ಇರುತ್ತೆ, ಆಮೇಲೆ ನಾವು ಮೂಕ ಪ್ರೇಕ್ಷಕರು ಎಂದು ಟೀಕಿಸಿದ್ದಾರೆ.
ರಾಜಕೀಯ ಹೈ ಡ್ರಾಮಕ್ಕೆ ಯಾವತ್ತು ತೆರೆಬೀಳಲಿದೆ ಎಂದು ಇಡೀ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಸಿ ಎಂ ಕುಮಾರ ಸ್ವಾಮಿ ವಿಶ್ವಾಸಮತ ಸಬೀತು ಮಾಡ್ತಾರಾ, ಅಥವಾ ಸಾಬೀತು ಮಾಡಲಾಗದೆ ಸಿ ಎಂ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯ ರಾಜಕೀಯದ ಈಗಿನ ಸ್ಥಿತಿ ನೋಡಿ ಉಪೇಂದ್ರ ಟ್ವೀಟ್ ಮಾಡಿದ್ದಾರೆ. "ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಮತ ಚಲಾಯಿಸುವ ಒಂದು ದಿನ ಮಾತ್ರ ನಮಗೆ ಬೆಲೆ ಇರುತ್ತದೆ , ಆನಂತರ ನಾವು ಮೂಕ ಪ್ರೇಕ್ಷಕರು. ನಾಯಕರಿಂದ ಪ್ರಜೆಗಳಿಗೆ ಸಂಪೂರ್ಣ ಅಧಿಕಾರ ಹಸ್ತಾಂತರ ಮಾಡಲು ಬಹುಮತ ಬೇಕು ಅದಕ್ಕೆ ಪ್ರಜೆಗಳೇ ಪ್ರಜಾಕೀಯ ಪಕ್ಷಕ್ಕೆ ಸ್ಪರ್ದಿ ಹಾಗೂ ಕಾರ್ಯಕರ್ತರಾಗಬೇಕು. ( ಮತ್ತೊಬ್ಬ ನಾಯಕ ಮಾಡಲಿ ಎಂದು ನಾವು ಕಾಯಬಾರದು)"
ರಾಜಕೀಯವನ್ನು ಅಣಕಿಸುವ ಜೊತೆಗೆ ಪ್ರಜಾಕೀಯವನ್ನು ಬೆಂಬಲಿಸಿ ಇಲ್ಲಿ ಪ್ರಜೆಗಳೆ ಪಕ್ಷಕ್ಕೆ ಸ್ಪರ್ಧಿ ಹಾಗೂ ಕಾರ್ಯಕರ್ತರಾಗಿರುತ್ತರೆ ಎಂದು ಹೇಳಿದ್ದಾರೆ. ಉಪೇಂದ್ರ ಅವರ ಪ್ರಜಾಕೀಯ ಪಕ್ಷ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿತ್ತು. ರಿಯಲ್ ಸ್ಟಾರ್ ಈಗ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.