Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಯೋಗ್ಯ' ಚಿತ್ರದ ವೇಳೆ ನಟ ಸತೀಶ್ ನೀನಾಸಂ ಕಾರು ಅಪಘಾತ !
Recommended Video
ನಟ ನೀನಾಸಂ ಸತೀಶ್ ಅವರ ಕಾರು ಅಪಘಾತವಾಗಿದೆ. 'ಅಯೋಗ್ಯ' ಸಿನಿಮಾದ ಶೂಟಿಂಗ್ ಮುಗಿಸಿ ಹೊರಡುತ್ತಿರುವ ವೇಳೆ ಈ ಘಟನೆ ನಡೆದಿದೆ. ಆದರೆ ದೇವರ ದಯೆಯಿಂದ ಯಾರಿಗೂ ಏನೂ ಆಗಿಲ್ಲ. ಅಪಘಾತವಾದ ವಿಷಯವನ್ನು ಚಿತ್ರದ ನಿರ್ದೇಶಕ ಮಹೇಶ್ ತಿಳಿಸಿದ್ದಾರೆ.
'ಅಯೋಗ್ಯ' ಸಿನಿಮಾದ ಚಿತ್ರೀಕರಣ ಮಂಡ್ಯದಲ್ಲಿ ನಡೆಯುತ್ತಿತ್ತು. ನಿನ್ನೆ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ಸತೀಶ್ ವಾಪಸ್ ಹೋಗುವ ವೇಳೆ ಅವರ ಕಾರು ಅಪಘಾತ ಆಗಿದೆ. ಕಾರಿನಲ್ಲಿ ಸತೀಶ್ ಜೊತೆಗೆ ಇದ್ದ ಕಾರ್ ಡ್ರೈವರ್, ಮೇಕಪ್ ಮ್ಯಾನ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಗಳಿಗೆ ಚಿಕ್ಕ ಪುಟ್ಟ ಗಾಯ ಆಗಿದೆ. ತಕ್ಷಣವೇ ಅವರಿಗೆ ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದೆ.
'ಅಯೋಗ್ಯ'ನ ಜೊತೆ ಸೇರಿ ಹಳ್ಳಿ ಹುಡುಗಿ ಆದ ರಚಿತಾ ರಾಮ್
'ಅಯೋಗ್ಯ' ಸತೀಶ್ ನೀನಾಸಂ ಅಭಿನಯದ ಹೊಸ ಸಿನಿಮಾ. ಈ ಚಿತ್ರದಲ್ಲಿ ರಚಿತಾ ರಾಮ್ ನಾಯಕಿ ಆಗಿದ್ದಾರೆ. ಯೋಗರಾಜ್ ಭಟ್ ಶಿಷ್ಯ ಮಹೇಶ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಚಿತ್ರೀಕರಣ ಸದ್ಯ ಜೋರಾಗಿ ನಡೆಯುತ್ತಿದೆ. ಅಂದಹಾಗೆ, ಈ ಹಿಂದೆ ಕೂಡ ಸತೀಶ್ ನೀನಾಸಂ ಅವರಿಗೆ 'ಟೈಗರ್ ಗಲ್ಲಿ' ಚಿತ್ರೀಕರಣದ ವೇಳೆ ಗಾಯಗಳು ಆಗಿತ್ತು.