ರಕ್ತದಲ್ಲಿ ಪತ್ರ ಬರೆದ ಕಾಮಿಡಿ ಕಿಂಗ್ ಶರಣ್
ಇದು ಸಿನಿಮಾ ಕಥೆಯಲ್ಲ, ಬದ್ಲಾಗಿ ನಿಜವಾಗ್ಲೂ ನಡೆದ ಘಟನೆ. ಚಂದನವನದ ಕಾಮಿಡಿ ಕಿಂಗ್ ಶರಣ್ ಅವರು ತಮ್ಮ ರಕ್ತದಲ್ಲಿ ಪತ್ರ ಬರೆದರಂತೆ. ಹೌದು ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಹೋರಾಟದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ನಟ ಶರಣ್ ತಮ್ಮ ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.
ಬೆಳಗ್ಗಿನ ಹೊತ್ತು ಸುಮಾರು 10 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ನವಲಗುಂದದಲ್ಲಿ ಹೋರಾಟಗಾರರೊಂದಿಗೆ ಧರಣಿ ಕುಳಿತಿದ್ದ ನಟ ಶರಣ್ ಅವರು ತಾವು ಉಪವಾಸ ಸತ್ಯಾಗ್ರಹ ಕೈಗೊಂಡು, ನಂತರ ತಮ್ಮ ರಕ್ತದಲ್ಲಿ ಮನವಿ ಪತ್ರ ಬರೆದು ಅಲ್ಲಿನ ತಹಶೀಲ್ದಾರರಿಗೆ ನೀಡುವ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಿದ್ದಾರೆ.[ಕಳಸಾ-ಬಂಡೂರಿಗೆ ಸ್ಯಾಂಡಲ್ ವುಡ್ ಕಿಚ್ಚು ; ಯಾರು ಏನು ಹೇಳಿದರು?]
ಈ ಮೊದಲು ಸ್ಯಾಂಡಲ್ ವುಡ್ ನ ಎಲ್ಲಾ ತಾರೆಯರು ಕಳಸಾ-ಬಂಡೂರಿ ಹೋರಾಟದಲ್ಲಿ ಭಾಗವಹಿಸಿದ್ದು, ನಟಿ ಪೂಜಾ ಗಾಂಧಿ ಅವರು ಈ ಯೋಜನೆಯ ಬಗ್ಗೆ ಸಾಕ್ಷ್ಯಚಿತ್ರವನ್ನು ಕೂಡ ನಿರ್ಮಾಣ ಮಾಡಿದ್ದಾರೆ.[ನರೇಂದ್ರ ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ ]
ಜೊತೆಗೆ ಕಾಮಿಡಿ ಕಿಂಗ್ ಶರಣ್ ಅವರು ಈ ಮೊದಲು ಕೂಡ ಈ ಹೋರಾಟದಲ್ಲಿ ಭಾಗವಹಿಸಿದ್ದು, ಇದೀಗ ಮತ್ತೊಮ್ಮೆ ಧರಣಿ ಕುಳಿತು, ರಕ್ತದಲ್ಲಿ ಪ್ರಧಾನಿ ಮೋದಿ ಅವರಿಗೆ ಮನವಿ ಪತ್ರ ಬರೆಯುವ ಮೂಲಕ ಅಲ್ಲಿನ ಜನರ ಬಗ್ಗೆ ತಮ್ಮ ತಳಮಳ ವ್ಯಕ್ತಪಡಿಸಿದ್ದಾರೆ.


Click it and Unblock the Notifications













