Don't Miss!
- Sports KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
- Lifestyle ಬೇಸಿಗೆಯಲ್ಲಿ ಇಡ್ಲಿ, ದೋಸೆಯ ಹಿಟ್ಟು ಹುಳಿ ಬಂದರೆ ಹುಳಿ ಕಡಿಮೆಯಾಗಲು ಏನು ಮಾಡಬೇಕು?
- News Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿ.ಎಂ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ನೀಡಿದ ನಟ ಶಿವರಾಜ್ ಕುಮಾರ್
Recommended Video
''ಕೊಡಗಿನ ಜನತೆಗೆ ನೆರವು ನೀಡಿ.. ಯಾವುದೇ ಭೇದಭಾವ ಇಲ್ಲದೆ ಎಲ್ಲರಿಗೂ ಸಹಾಯ ಮಾಡಿ..'' ಎಂದು ಮೂರು ದಿನಗಳ ಹಿಂದೆಯಷ್ಟೇ ನಟ ಶಿವರಾಜ್ ಕುಮಾರ್ ವಿಡಿಯೋ ಮೂಲಕ ಕನ್ನಡಿಗರ ಬಳಿ ಕೇಳಿಕೊಂಡಿದ್ದರು.
ಇದೀಗ ಸ್ವತಃ ನಟ ಶಿವರಾಜ್ ಕುಮಾರ್ ಕೊಡಗಿನ ಜನತೆಗೆ ಸಹಾಯ ಆಗಲಿ ಎಂದು ಹತ್ತು ಲಕ್ಷ ರೂಪಾಯಿ ನೀಡಲು ಮುಂದಾಗಿದ್ದಾರೆ. ಸಿ.ಎಂ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ನೀಡಲು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿರ್ಧಾರ ಮಾಡಿದ್ದಾರೆ.
ಕೊಡಗಿಗೆ ನೆರವಾಗಿ ಎಂದು ಮನವಿ ಮಾಡಿದ ಶಿವರಾಜ್ ಕುಮಾರ್
ಇಂದು ಸಂಜೆ ಹೊತ್ತಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚೆಕ್ ಹಸ್ತಾಂತರ ಮಾಡಲಿದ್ದಾರೆ.
ಕೊಡಗಿನವರ ನೆರವಿಗೆ ಧಾವಿಸಿದ ಕನ್ನಡ ಚಿತ್ರರಂಗದ ತಾರೆಯರು
ಈಗಾಗಲೇ ನಟ ಯಶ್ ತಮ್ಮ 'ಯಶೋಮಾರ್ಗ' ಫೌಂಡೇಶನ್ ಮೂಲಕ ಕೊಡಗಿನ ಜನತೆಗೆ ಅಗತ್ಯ ವಸ್ತುಗಳನ್ನು ನೀಡಿ ಸಹಾಯ ಮಾಡಿದ್ದಾರೆ. ಇನ್ನೂ ನಟ ಜಗ್ಗೇಶ್ ಹಾಗೂ ಸಂಯುಕ್ತ ಹೊರನಾಡು ಕೂಡ ಟ್ರಕ್ ಗಳ ಮುಖಾಂತರ ಕೊಡಗಿನ ಜನರಿಗೆ ಪ್ರತಿನಿತ್ಯ ಬಳಸುವ ವಸ್ತುಗಳನ್ನ ಪೂರೈಕೆ ಮಾಡುತ್ತಿದ್ದಾರೆ.
ಕೊಡಗಿಗಾಗಿ ಮಿಡಿದ ಪ್ರಕಾಶ್ ರೈ: ಹಣದ ಜೊತೆ ವಿಶೇಷ ಯೋಜನೆಗಳ ಭರವಸೆ
ಹಾಗೇ, ನಟ ಪ್ರಕಾಶ್ ರೈ ಕೊಡಗು ಜನತೆಗೆ 5 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಘೋಷಿಸಿದ್ದಾರೆ. ಒಟ್ನಲ್ಲಿ ಕೊಡಗಿನವರಿಗೆ ಸಹಾಯ ಮಾಡಲು ಒಬ್ಬೊಬ್ಬರೇ ಮುಂದೆ ಬರುತ್ತಿದ್ದಾರೆ. ವರುಣನ ಅಬ್ಬರ ಕಮ್ಮಿ ಆಗಿ, ಮತ್ತೆ ಸಹಜ ಸ್ಥಿತಿಯತ್ತ ಕೊಡಗು ಬೇಗ ಬರಲಿ ಅನ್ನೋದೇ ಎಲ್ಲರ ಪ್ರಾರ್ಥನೆ.