Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ ಹಬ್ಬದಂದು 'ಪಾರ್ವತಿ' ದತ್ತು ಪಡೆದ ನಟ ಶಿವರಾಜ್ ಕುಮಾರ್
ಗಣೇಶ ಹಬ್ಬದ ಸಂಭ್ರಮದಲ್ಲಿರುವ ಕನ್ನಡ ನಟ ಶಿವರಾಜ್ ಕುಮಾರ್ 'ಪಾರ್ವತಿ' ಎಂಬ ಆನೆಯನ್ನು ದತ್ತು ಪಡೆದುಕೊಂಡಿದ್ದಾರೆ. 75 ಸಾವಿರ ರೂಪಾಯಿ ಪಾವತಿಸಿ ಒಂದು ವರ್ಷ ಅವಧಿಗೆ ದತ್ತು ಪಡೆದಿದ್ದಾರೆ.
Recommended Video
ಈ ವಿಚಾರವನ್ನು ಖುದ್ದು ಮೈಸೂರು ಮೃಗಾಲಯದ ಆಡಳಿತ ಮಂಡಳಿ ಅಧಿಕೃತವಾಗಿ ತಿಳಿಸಿದೆ. 'ಪ್ರಸಿದ್ಧ ಕನ್ನಡ ಚಲನಚಿತ್ರ ತಾರೆ ಡಾ.ಶಿವರಾಜ್ ಕುಮಾರ್ ಅವರು 20/08/2020 ರಿಂದ 19/08/2021 ರವರೆಗೆ "ಪಾರ್ವತಿ" ಎಂಬ ಆನೆ ಮರಿಯನ್ನು 75,000 ರೂ ಪಾವತಿಸಿ ದತ್ತು ಪಡೆದಿದ್ದಾರೆ. ಮೈಸೂರು ಮೃಗಾಲಯ ಮತ್ತು ಕರ್ನಾಟಕದ ಮೃಗಾಲಯ ಪ್ರಾಧಿಕಾರ ಡಾ.ಶಿವರಾಜ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.
'ಧೈರ್ಯವಾಗಿ ಶೂಟಿಂಗ್ ಶುರು ಮಾಡಿ', ಮತ್ತೆ ಅಖಾಡಕ್ಕಿಳಿದ ಶಿವಣ್ಣ
ಅಂದ್ಹಾಗೆ, ಐರಾವತಿ ಎಂಬ ಆನೆ ಜನ್ಮ ನೀಡಿದ್ದ ಹೆಣ್ಣಾನೆಗೆ 2017ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಪಾರ್ವತಿ ಎಂದು ಹೆಸರಿಟ್ಟಿದ್ದರು. ಅದೇ ಆನೆಯನ್ನು ಶಿವರಾಜ್ ಕುಮಾರ್ ದತ್ತು ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನುಳಿದಂತೆ ಕೊರೊನಾ ವೈರಸ್ನಿಂದ ಇಷ್ಟು ಸಮಯ ಮನೆಯಲ್ಲಿ ದಿನ ಕಳೆದ ಶಿವರಾಜ್ ಕುಮಾರ್ ಇಂದಿನಿಂದ ಭಜರಂಗಿ-2 ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದಾರೆ. ಉಳಿದ ಚಿತ್ರತಂಡಗಳು ಸಹ ಧೈರ್ಯದಿಂದ ಶೂಟಿಂಗ್ ಶುರು ಮಾಡಬೇಕೆಂದು ಶಿವಣ್ಣ ವಿನಂತಿಸಿಕೊಂಡಿದ್ದಾರೆ.