Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ನಿರ್ದೇಶಕರ ಮನಗೆದ್ದ ಹ್ಯಾಟ್ರಿಕ್ ಹೀರೋ ಶಿವಣ್ಣ
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಈಗಿನ ಕಾಲದ ಯುವ ನಿರ್ದೇಶಕರಿಗೂ ಒಗ್ಗಿಕೊಳ್ಳುವಂತಹ ಸ್ಟಾರ್ ನಟ ಅಂತೆ. ಹೌದು ಹೀಗಂತ ಹೇಳಿರೋದು ಶಿವಣ್ಣ ಅವರ 'ಸನ್ ಆಫ್ ಬಂಗಾರದ ಮನುಷ್ಯ' ಸಿನಿಮಾ ಮಾಡುತ್ತಿರುವ ನಿರ್ದೇಶಕ ಯೋಗಿ ಜಿ ರಾಜ್ ಅವರು.
ಸೆಂಚುರಿ ಸ್ಟಾರ್ ಶಿವಣ್ಣ ಅವರು ಸದ್ಯಕ್ಕೆ 'ಶ್ರೀಕಂಠ' ಚಿತ್ರದ ಚಿತ್ರೀಕರಣದ ಜೊತೆಗೆ ಟಾಕಿ ಪೋರ್ಷನ್ ಕೂಡ ಮುಗಿಸಿದ್ದು, ನಿರ್ದೇಶಕ ಯೋಗಿ ಜಿ ರಾಜ್ ಅವರ 'ಸನ್ ಆಫ್ ಬಂಗಾರದ ಮನುಷ್ಯ' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.['ಬಂಗಾರದ ಮನುಷ್ಯ'ನ ಅವತಾರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ]
'ಶಿವಣ್ಣ ಅವರು ಪಾದರಸದಂತೆ ಕೆಲಸ ಮಾಡುತ್ತಾರೆ, ಸ್ಟಾರ್ ನಟ ಎಂಬ ಬಿಗುಮಾನವಿಲ್ಲದೆ ಯುವ ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಅಭಿನಯಿಸುತ್ತಾರೆ. ಅವರ ಸಮಯ ಪ್ರಜ್ಞೆ ಸ್ವಭಾವ ನಿಜಕ್ಕೂ ಅದ್ಭುತ' ಎನ್ನುತ್ತಾರೆ ನಿರ್ದೇಶಕ ಯೋಗಿ ಜಿ ರಾಜ್ ಅವರು.[ಸಂಕ್ರಾಂತಿಗೆ ಭರ್ಜರಿಯಾಗಿ ಸೆಟ್ಟೇರಿದ ಜಯಣ್ಣ ನಿರ್ಮಾಣದ 2 ಚಿತ್ರಗಳು]
ಅಂದಹಾಗೆ ಚಿತ್ರಕ್ಕೆ 'ಸನ್ ಆಫ್ ಬಂಗಾರದ ಮನುಷ್ಯ' ಎಂದು ಶೀರ್ಷಿಕೆಗೂ, ಡಾ.ರಾಜ್ ಕುಮಾರ್ ಅವರ ಹಿಂದಿನ ಬಂಗಾರದ ಮನುಷ್ಯ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಬದಲಾಗಿ ಈ ಚಿತ್ರದಲ್ಲಿ ತಂದೆ-ಮಗನ ನಡುವಿನ ಬಾಂಧವ್ಯವನ್ನು ವಿವರಿಸಲಾಗಿದೆಯಂತೆ.
ಈಗಾಗಲೇ ಚಿತ್ರದ ಮೊದಲ ಶೆಡ್ಯೂಲ್ ಮುಗಿದಿದ್ದು, ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಶಿವಣ್ಣ ಅವರ ಜೊತೆ ನಾಯಕಿ ನಟಿಯಾಗಿ ಕಾಣಿಸಿಕೊಳ್ಳಲಿರುವ ದಕ್ಷಿಣ ಭಾರತದ ನಟಿ ವಿದ್ಯಾ ಪ್ರದೀಪ್ ಅವರು ಸೆಟ್ ಗೆ ಹಾಜರಾಗಿದ್ದಾರೆ.['ಬಂಗಾರದ ಮನುಷ್ಯ'ನ ಜೋಡಿಯಾಗೋ ಚೆಂದುಳ್ಳಿ ಚೆಲುವೆ ಈಕೆ]
ಇನ್ನು ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರು ನಟಿಸುತ್ತಿರೋ 'ರಾಯಿಸ್' ಚಿತ್ರದ ಆಕ್ಷನ್ ಸೀನ್ ಗಳನ್ನು ಮುಗಿಸಿರುವ ಸ್ಟಂಟ್ ಮಾಸ್ಟರ್ ರವಿವರ್ಮಾ ಅವರು ಶಿವಣ್ಣ ಅವರಿಗೆ ಸ್ಟಂಟ್ ಕೊರಿಯೋಗ್ರಫಿ ಮಾಡಲಿದ್ದಾರೆ.[ಶಿವಣ್ಣ30 ವಿಶೇಷ: ಶಿವಣ್ಣ ಅವರ 20 ಉತ್ತಮ ಚಿತ್ರಗಳ List]
ಜಯಣ್ಣ ಕಂಬೈನ್ಸ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮೂರನೇ ಶೆಡ್ಯೂಲ್ ನ ಶೂಟಿಂಗ್ ಗಾಗಿ ಮೇ 23 ರಂದು ಚಿತ್ರತಂಡ ವಿದೇಶಕ್ಕೆ ಹಾರಲಿದೆ. ಮಿಲನ್ ಮತ್ತು ಸ್ವಿಜರ್ಲ್ಯಾಂಡ್ ನಲ್ಲಿ ಚಿತ್ರದ ಹಾಡುಗಳ ಚಿತ್ರೀಕರಣ ನಡೆಯಲಿದೆ.