Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಭಾರತದ ಶಕ್ತಿಶಾಲಿ ರಾಜಕೀಯ ನಾಯಕರಲ್ಲಿ ಕರುಣಾನಿಧಿ ಒಬ್ಬರು'' - ಶಿವರಾಜ್ ಕುಮಾರ್
Recommended Video
ತಮಿಳು ನಾಡಿನ ಜನನಾಯಕ ಹಾಗೂ ಕಾಲಿವುಡ್ ಚಿತ್ರರಂಗ ಕಂಡ ಅದ್ಬುತ ಸಾಹಿತಿ ಕರುಣಾನಿಧಿ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಕನ್ನಡದ ಹಿರಿಯ ನಟಿ ಲೀಲಾವತಿ, ಹಿರಿಯ ನಟ, ನಿರ್ಮಾಪಕ ದ್ವಾರಕೀಶ್, ನಟ ಸುದೀಪ್ ಸೇರಿದಂತೆ ಅನೇಕರು ಈಗಾಗಲೇ ಸಂತಾಪ ಸೂಚಿಸಿದ್ದಾರೆ. ಈಗ ನಟ ಶಿವರಾಜ್ ಕುಮಾರ್ ಕೂಡ ಕರುಣಾನಿಧಿ ಅವರನ್ನು ನೆನೆಪು ಮಾಡಿಕೊಂಡಿದ್ದಾರೆ.
ಕಷ್ಟದಲ್ಲಿದ್ದ ನಟಿ ಲೀಲಾವತಿಗೆ ಕರುಣಾನಿಧಿ 'ಮಹಾನ್' ವ್ಯಕ್ತಿಯಾಗಿದ್ದೇಕೆ.?
ಕರುಣಾನಿಧಿ ಅವರ ಬಗ್ಗೆ ನೋವಿನಿಂದ ಮಾತನಾಡಿದ ಶಿವಣ್ಣ ''ನಾನು ಚಿಕ್ಕ ಹುಡುಗ ಆಗಿದ್ದಾಗಿನಿಂದ ಅವರನ್ನು ನೋಡುಕೊಂಡು ಬೆಳೆದಿದ್ದೆ. ಈ ವಿಷಯ ಕೇಳಿ ನಮಗೆ ತುಂಬ ನೋವಾಗಿದೆ. ಅವರ ಕುಟುಂಬ ನಮ್ಮ ಕುಟಂಬಕ್ಕೆ ಚೆನ್ನಾಗಿ ಪರಿಚಯ ಇದೆ. ಅವರು ಅವರು ಒಳ್ಳೆಯ ರೈಟರ್ ಆಗಿದ್ದು, ಸಿನಿಮಾ ಹಾಗೂ ರಾಜಕೀಯ ಎರಡು ಕ್ಷೇತ್ರದಲ್ಲಿ ಜ್ಞಾನ ಹೊಂದಿದ್ದರು. ಭಾರತದ ಶಕ್ತಿಶಾಲಿ ರಾಜಕೀಯ ನಾಯಕರಲ್ಲಿ ಅವರು ಒಬ್ಬರು'' ಎಂದು ಕರುಣಾನಿಧಿ ಅವರ ಬಗ್ಗೆ ಶಿವಣ್ಣ ನೋವಿನ ನುಡಿಯನ್ನು ಹೇಳಿಕೊಂಡಿದ್ದಾರೆ.
'ಕರುಣಾನಿಧಿ'ಯ ನಿಧನಕ್ಕೆ ಸಂತಾಪ ಸೂಚಿಸಿದ ಚಿತ್ರರಂಗ
ಜೊತೆಗೆ ರಾಜ್ ಕುಮಾರ್ ಹಾಗೂ ಕರುಣಾನಿಧಿ ಅವರ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್ ''ಐದು ಬಾರಿ ಮುಖ್ಯ ಮಂತ್ರಿ ಆಗುವುದು ಎಂದರೆ ತುಂಬ ದೊಡ್ಡ ಸಾಧನೆ. ಅಪ್ಪಾಜಿ ಅಪಹರಣ ಆದ ಸಂಧರ್ಭದಲ್ಲಿ ಅವರೇ ಸಿಎಂ ಆಗಿದ್ದರು. ಅಪ್ಪಾಜಿ ಬಗ್ಗೆ ಅವರಿಗೆ ತುಂಬ ಗೌರವ ಇತ್ತು. ಇಂದು ಭಾರತ ಒಬ್ಬ ಒಳ್ಳೆಯ ರಾಜಕೀಯ ವ್ಯಕ್ತಿಯನ್ನು ಕಳೆದುಕೊಂಡಿದೆ. ಜನರಿಗೆ ಒಳ್ಳೆಯದು ಮಾಡಬೇಕು ಎನ್ನುವುದು ಅವರಿಗೆ ಇತ್ತು. ಅವರ ಸರಳತೆ ನನಗೆ ತುಂಬ ಇಷ್ಟ ಆಗುತ್ತಿತ್ತು'' ಎಂದು ಕಂಬಿನಿ ಮಿಡಿದಿದ್ದಾರೆ.
ಅಂದಹಾಗೆ, ತಮಿಳುನಾಡಿನ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಆಗಿದ್ದ ಕರುಣಾನಿಧಿ ಅವರು ನಿನ್ನೆ (ಆಗಸ್ಟ್ 7) ನಿಧನರಾದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 94 ವರ್ಷದ ಡಿಎಂಕೆ ಪಕ್ಷದ ಅಧಿನಾಯಕ ಈಗ ನೆನಪು ಮಾತ್ರ.