Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲ್ಯ ಆಸ್ಪತ್ರೆ ಮುಂದೆ ಗದ್ದಲ, ಗಲಾಟೆ, ಪಿಕ್ ಪಾಕೆಟ್
ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ನಟ ಶಿವರಾಜ್ ಕುಮಾರ್ ದಾಖಲಾಗಿದ್ದಾರೆ. ಸುದ್ದಿ ಕೇಳಿದ ಕೂಡಲೆ, ಎಲ್ಲಾ ಮಾಧ್ಯಮ ಪ್ರತಿನಿಧಿಗಳು, ಪತ್ರಿಕಾ ಮಿತ್ರರು ಮಲ್ಯ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಹಾಗೆ, ರಾಜ್ ಕುಮಾರ್ ಕುಟುಂಬದ ಸದಸ್ಯರು, ಕನ್ನಡ ಚಿತ್ರರಂಗದ ಗಣ್ಯರು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದರಿಂದಾಗಿ ವಿಠಲ್ ಮಲ್ಯ ರೋಡ್ ನಲ್ಲಿ ಜನವೋ ಜನ. ಫುಲ್ ರೋಡ್ ಟ್ರಾಫಿಕ್ ಜ್ಯಾಮ್. [ಶಿವಣ್ಣ ಅಸ್ವಸ್ಥ : ರಾಘಣ್ಣ, ಪುನೀತ್, ಮಧು ಬಂಗಾರಪ್ಪ ಏನಂತಾರೆ?]
ನೂರಾರು ಸಂಖ್ಯೆಯಲ್ಲಿ ಶಿವಣ್ಣನ ಅಭಿಮಾನಿಗಳು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ. ಎಲ್ಲರಿಗೂ ಆಸ್ಪತ್ರೆ ಒಳಗೆ ಪ್ರವೇಶವಿಲ್ಲ. ಆದ್ದರಿಂದ ಕೆಲ ಅಭಿಮಾನಿಗಳು ಆಸ್ಪತ್ರೆ ಮುಂದೆ ಗದ್ದಲದ ವಾತಾವರಣ ಸೃಷ್ಟಿಸಿದರು. [ಶಿವಣ್ಣನಿಗೆ ಲಘು ಹೃದಯಾಘಾತ : ಅಣ್ಣಾವ್ರ ಮಗನಿಗೆ ಶಸ್ತ್ರಚಿಕಿತ್ಸೆ?]
ಇನ್ನು ಪುನೀತ್ ರಾಜ್ ಕುಮಾರ್ ರವರ ಆಪ್ತ ಸಹಾಯಕ, ನಿರ್ಮಾಪಕ ರಾಜ್ ಕುಮಾರ್ ರಿಗೂ ಪೊಲೀಸರು ಪ್ರವೇಶ ನಿರಾಕರಿಸಿದ್ದರಿಂದ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಗೊಂದಲದ ವಾತಾವರಣವನ್ನೇ ಲಾಭ ಮಾಡಿಕೊಂಡ ಓರ್ವ ವ್ಯಕ್ತಿ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೇಬಿಗೆ ಕತ್ರಿ ಹಾಕುವುದಕ್ಕೆ ಪ್ರಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ.