Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಜ್ರಕಾಯ' ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ
ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಇದೀಗ ನಟ ಶಿವಣ್ಣ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದಿದೆ.
ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಚೇತರಿಸಿಕೊಂಡಿದ್ದು, ಇವತ್ತು (ಅಕ್ಟೋಬರ್ 8) 10.30 ರಿಂದ 11.30ರ ಒಳಗಡೆ ಡಿಸ್ಚಾರ್ಜ್ ಆಗಲಿದ್ದಾರೆ. ಆದರೂ ಒಂದು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. [ಸೆಂಚುರಿ ಸ್ಟಾರ್ ಶಿವಣ್ಣನ ಅನಾರೋಗ್ಯಕ್ಕೆ ನಿಜವಾದ ಕಾರಣವೇನು?]
ಶಿವಣ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ನಿನ್ನೆಯೇ ಅವರನ್ನು ಐಸಿಯುನಿಂದ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಇವತ್ತು ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಿದ್ದಾರೆ.
ನಿನ್ನೆ ಆಸ್ಪತ್ರೆಯ ಐಸಿಯುನಲ್ಲಿ ಕೆಲ ಹೊತ್ತು ವಾಕಿಂಗ್ ಮಾಡಿದ ಶಿವಣ್ಜ ಅವರು ಮಾಧ್ಯಮ ಪ್ರತಿನಿಧಿಗಳನ್ನು ತಮ್ಮ ಕೊಠಡಿಗೆ ಕರೆಸಿಕೊಂಡು ಕೆಲ ಹೊತ್ತು ಔಪಚಾರಿಕವಾಗಿ ಮಾತನಾಡಿ 'ಮಗಳ ಮದುವೆ ಕಾರ್ಯ ಸಂಬಂಧ ಸುತ್ತಾಟದಿಂದ ತೀವ್ರ ಬಳಲಿಕೆಯಾಗಿತ್ತು, ಜೊತೆಗೆ ಶೂಟಿಂಗ್ ಹಾಗೂ ಒಂದು ವಾರದ ಹಿಂದೆ ಜಿಮ್ ನಲ್ಲಿ ವರ್ಕ್ ಔಟ್ ಮಾಡಲು ಶುರು ಮಾಡಿದ್ದೆ. ಇದೆಲ್ಲದರಿಂದ ಅಸ್ವಸ್ಥಗೊಂಡಂತಾಗಿತ್ತು, ಈಗ ಎಲ್ಲಾ ಸರಿ ಹೋಗಿದೆ ವಾರದ ನಂತರ ಶೂಟಿಂಗ್ ನಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಶಿವಣ್ಣ ತಿಳಿಸಿದ್ದಾರೆ.[ಶಿವಣ್ಣ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಕಿಚ್ಚ]
ಇನ್ನು ನಿನ್ನೆ ದಿನ ಕೂಡ ಸ್ಯಾಂಡಲ್ ವುಡ್ ತಾರೆಯರು ಹಾಗೂ ರಾಜಕೀಯ ನಾಯಕರಾದ ಎಸ್.ಎಂ ಕೃಷ್ಣ ಹಾಗೂ ನಟಿ ಉಮಾಶ್ರೀ ಅವರು ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ್ದರು. ಇತ್ತ ಶಿವಣ್ಣ ಬೇಗ ಗುಣಮುಖರಾಗಲಿ ಎಂದು ಅಭಿಮಾನಿ ಭಕ್ತರು ದೇವರಿಗೆ ಪೂಜೆ-ಪುನಸ್ಕಾರ ನಡೆಸುತ್ತಿದ್ದಾರೆ.[ಮಲ್ಯ ಆಸ್ಪತ್ರೆ ಮುಂದೆ ಗದ್ದಲ, ಗಲಾಟೆ, ಪಿಕ್ ಪಾಕೆಟ್]
ಒಟ್ನಲ್ಲಿ ಶಿವಣ್ಣ ಅವರು ಬಹಳ ಬೇಗ ಚೇತರಿಸಿಕೊಂಡಿದ್ದು, ಕಂಡು ಶಿವಣ್ಣ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.