Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನಿಗೆ ಲಘು ಹೃದಯಾಘಾತ : ಅಣ್ಣಾವ್ರ ಮಗನಿಗೆ ಶಸ್ತ್ರಚಿಕಿತ್ಸೆ?
ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್, ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಅಭಿಮಾನಿಗಳು ಊಹಿಸಿಕೊಳ್ಳುವುದಕ್ಕೂ ಸಾಧ್ಯವಾಗದ ಶಾಕಿಂಗ್ ನ್ಯೂಸ್ ಇಂದು ಹೊರಬಿದ್ದಿದೆ.
ನಟ ಶಿವರಾಜ್ ಕುಮಾರ್ ಅಸ್ವಸ್ಥಗೊಂಡಿದ್ದಾರೆ. ಶಿವಣ್ಣನ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅಣ್ಣಾವ್ರ ಮಗ ಶಿವಣ್ಣ ರವರನ್ನ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ನಟ ಶಿವರಾಜ್ ಕುಮಾರ್ ಅಸ್ವಸ್ಥ: ಮಲ್ಯ ಆಸ್ಪತ್ರೆಗೆ ದಾಖಲು]
ಮೂಲಗಳ ಪ್ರಕಾರ, ನಟ ಶಿವರಾಜ್ ಕುಮಾರ್ ಗೆ ಇಂದು ಬೆಳಗ್ಗೆ ಲಘು ಹೃದಯಾಘಾತವಾಗಿದೆ. ಹೃದಯದ ರಕ್ತನಾಳ ಬ್ಲಾಕ್ ಆಗಿರುವುದು ಆಂಜಿಯೋಗ್ರಾಮ್ ನಲ್ಲಿ ಪತ್ತೆ ಆಗಿದೆ. ರಕ್ತನಾಳ ಬ್ಲಾಕೇಜ್ ಹೆಚ್ಚಾಗಿರುವ ಕಾರಣ ಮಲ್ಯ ಆಸ್ಪತ್ರೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಮುಂದೆ ಓದಿ.....
ಶಿವಣ್ಣನಿಗೆ ಆಂಜಿಯೋಪ್ಲಾಸ್ಟ್?
ಹೃದಯ ಸಂಬಂಧಿ ಕಾಯಿಲೆಯಿಂದ ನಟ ಶಿವರಾಜ್ ಕುಮಾರ್ ಬಳಲುತ್ತಿದ್ದಾರೆ. ಇಂದು ಬೆಳಗ್ಗೆ ಶಿವಣ್ಣನಿಗೆ ಲಘು ಹೃದಯಾಘಾತವಾಗಿದೆ. ಅತಿಯಾದ ಸ್ಟ್ರೆಸ್, ಪ್ರೆಶರ್ ಮತ್ತು ಹೆರಿಡಿಟಿ ಇದಕ್ಕೆ ಕಾರಣ ಎನ್ನಲಾಗಿದೆ. ಆಂಜಿಯೋಗ್ರಾಮ್ ನಲ್ಲಿ ರಕ್ತನಾಳ ಬ್ಲಾಕ್ ಆಗಿರುವುದು ಪತ್ತೆ ಆಗಿರುವ ಕಾರಣ, ಬ್ಲಾಕೇಜ್ ತೆಗೆಯಲು ಆಂಜಿಯೋಪ್ಲಾಸ್ಟ್ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. [ಶಿವಣ್ಣನಿಗೆ ಹಾರ್ಟ್ ಅಟ್ಯಾಕ್.! ಮಲ್ಯ ವೈದ್ಯರು ಹೇಳಿದ್ದೇನು?]
ಇಂದು ಬೆಳಗ್ಗೆ ಆಗಿದ್ದೇನು?
ಎಂದಿನಂತೆ ಇಂದು ಬೆಳಗ್ಗೆ ಶಿವಣ್ಣ ವ್ಯಾಯಾಮ ಮಾಡುತ್ತಿದ್ದರು. ಆಗ ಬಲ ಭುಜ ಭಾಗದಲ್ಲಿ ಶಿವಣ್ಣನಿಗೆ ಅತಿಯಾದ ನೋವು ಕಾಣಿಸಿಕೊಂಡಿದೆ. ತಕ್ಷಣ ಪತ್ನಿ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ರನ್ನ ಹತ್ತಿರದ ಕೊಲಂಬಿಯಾ ಏಷ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ECGಯಲ್ಲಿ ವ್ಯತ್ಯಾಸ?
ಕೊಲಂಬಿಯಾ ಏಪ್ಯ ಆಸ್ಪತ್ರೆಯಲ್ಲಿ ವೈದ್ಯರು ECG ನಡೆಸಿದ್ದಾರೆ. ರಿಪೋರ್ಟ್ ನಲ್ಲಿ ಲಘು ಹೃದಯಾಘಾತ ಆಗಿರುವುದು ಪತ್ತೆ ಆದ ಬಳಿಕ ಆಂಜಿಯೋಗ್ರಾಮ್ ಚಿಕಿತ್ಸೆ ಪಡೆಯಲು ವಿಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ಶಿವಣ್ಣ ರನ್ನ ಕರೆತರಲಾಯ್ತು.
ರಕ್ತನಾಳ ಬ್ಲಾಕ್ ಆಗಿರುವುದು ಪತ್ತೆ?
ಮೂಲಗಳ ಪ್ರಕಾರ, ಮಲ್ಯ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ನಡೆಸಿದ ವೈದ್ಯರು ಶಿವಣ್ಣನ ಹೃದಯದಲ್ಲಿ ರಕ್ತನಾಳ ಬ್ಲಾಕ್ ಆಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಹೀಗಾಗಿ ಆಂಜಿಯೋಪ್ಲಾಸ್ಟ್ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ ಅಂತ ವರದಿಯಾಗಿದೆ.
ಇನ್ನೆರಡು ದಿನ ಆಸ್ಪತ್ರೆಯಲ್ಲೇ ಶಿವಣ್ಣ?
ಈಗಷ್ಟೆ ಆಂಜಿಯೋಗ್ರಾಮ್ ನಡೆಸಿರುವ ವೈದ್ಯರು, ಎರಡು ದಿನ ಬೆಡ್ ರೆಸ್ಟ್ ನಲ್ಲಿರುವಂತೆ ಸೂಚಿಸಿದ್ದಾರೆ.