Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಲೆ ಧರಿಸಿ ಅಯ್ಯಪ್ಪ ವ್ರತಧಾರಿಯಾದ ಹ್ಯಾಟ್ರಿಕ್ ಹೀರೋ
ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಿನ್ನೆ (ಜನವರಿ 27) ಯಿಂದ ಅಯ್ಯಪ್ಪ ವ್ರತಧಾರಿಯಾಗಿದ್ದಾರೆ. ಬೆಂಗಳೂರಿನ ದೇಗುಲ ಒಂದರಲ್ಲಿ ಶಿವಣ್ಣ ಅವರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಅಯ್ಯಪ್ಪ ಮಾಲೆ ಧರಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ಜೊತೆಗಿದ್ದರು.
ಕಳೆದ ಕೆಲವು ವರ್ಷಗಳಿಂದ ನಟ ಶಿವರಾಜ್ ಕುಮಾರ್ ಅವರು ಶಬರಿಮಲೆಗೆ ಅಯ್ಯಪ್ಪ ದರ್ಶನಕ್ಕೆ ಹೋಗುತ್ತಿದ್ದಾರೆ. ಪ್ರತೀ ಬಾರಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ಸಹೋದರರಾದ ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಜೊತೆಯಾಗುತ್ತಿದ್ದರು.[ರಿಲೀಸ್ ಗೂ ಮುನ್ನವೇ ಶಿವಣ್ಣ ಚಿತ್ರದ ಡಬ್ಬಿಂಗ್ ರೈಟ್ಸ್ ಸೇಲ್]
ಆದರೆ ಈ ಬಾರಿ ನಟ ನಟ ಕಮ್ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರು ಮಾಲೆ ಧರಿಸಿಲ್ಲ. ಇನ್ನು ಪವರ್ ಸ್ಟಾರ್ ಪುನೀತ್ ಅವರು 'ಚಕ್ರವ್ಯೂಹ' ಸಿನಿಮಾದಲ್ಲಿ ಬ್ಯುಸಿಯಾಗಿರೋದ್ರಿಂದ ಅವರಿಗೂ ಈ ಬಾರಿ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶಿವಣ್ಣ ಅವರು ಒಬ್ಬರೇ ಶಬರಿಮಲೆ ದರುಶನಕ್ಕೆ ಹೋಗುತ್ತಿದ್ದಾರೆ.['ಬಂಗಾರದ ಮನುಷ್ಯ'ನ ಅವತಾರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ]
ಅಂದಹಾಗೆ ಶಿವರಾಜ್ ಕುಮಾರ್ ಅವರು ಕೆಲ ದಿನಗಳ ಹಿಂದೆಯೇ ಮಾಲೆ ಹಾಕಬೇಕಾಗಿತ್ತು ಆದರೆ 'ಐಐಎಫ್ಎ' ಕಾರ್ಯಕ್ರಮದಲ್ಲಿ ಭಾಗವಹಿಸಲು ಹೈದ್ರಾಬಾದ್ ಗೆ ತೆರಳಿದ್ದರಿಂದ ನಿನ್ನೆ ಮಾಲೆ ಧರಿಸಿದ್ದಾರೆ. ಫೆಬ್ರವರಿ 11ರ ವರೆಗೂ ವ್ರತದಲ್ಲಿದ್ದು, ಫೆಬ್ರವರಿ 12 ರಂದು ಶಬರಿಮಲೆಗೆ ತೆರಳಲಿದ್ದಾರೆ.