Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೇರಿಕಾದಲ್ಲಿ ಶ್ರೀನಾಥ್ ಗೆ ಸಿಕ್ಕಿದೆ ಹೊಸ ಬಿರುದು
ಹಿರಿಯ ನಟ ಶ್ರೀನಾಥ್ ಪ್ರಣಯರಾಜ ಎಂದೇ ಜನಪ್ರಿಯತೆ ಗಳಿಸಿದ್ದಾರೆ. ಆದರೆ, ಈ ನಟನಿಗೆ ಈಗ ಹೊಸ ಬಿರುದು ಸಿಕ್ಕಿದೆ. ಅದು ಅಮೇರಿಕಾದಲ್ಲಿ ಎನ್ನುವುದು ವಿಶೇಷ.
ಅಮೇರಿಕಾದಲ್ಲಿ ನಡೆಯುತ್ತಿರುವ ಅಕ್ಕ ಸಮ್ಮೇಳನದಲ್ಲಿ ಕನ್ನಡ ಅನೇಕ ನಟರು ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ಈಗ ನಟ ಶ್ರೀನಾಥ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಕಳೆದ 50 ವರ್ಷಗಳಿಂದ ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆಯನ್ನು ಗಮನಿಸಿ 'ಅಭಿನಯ ಮಾಣಿಕ್ಯ' ಎಂಬ ಬಿರುದನ್ನು ನೀಡಲಾಗಿದೆ.
ಮೂರು ವರ್ಷದ ಹಿಂದೆ ನಟ ಶ್ರೀನಾಥ್ ರವರಿಗೆ ಏನಾಗಿತ್ತು ಗೊತ್ತಾ?
ಅಮೆರಿಕದ ಡಲ್ಲಾಸ್ ನಗರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಈ ಬಿರುದನ್ನು ಅವರಿಗೆ ನೀಡಿ ಸನ್ಮಾನಿಸಲಾಗಿದೆ. ಈ ಸುಂದರ ಕ್ಷಣಗಳಲ್ಲಿ ಅವರ ಪತ್ನಿ ಗೀತಾ ಕೂಡ ಭಾಗಿಯಾಗಿದ್ದರು.
1967ರಲ್ಲಿ ಬಂದ 'ಲಗ್ನ ಪತ್ರಿಕೆ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ಈ ನಟ ಇಂದಿಗೂ ಬಣ್ಣದ ಜಗತ್ತಿನ ನಂಟಿನಲ್ಲಿ ಇದ್ದಾರೆ. ಪುಟ್ಟಣ್ಣ ಕಣಗಾಲ್ ರೀತಿಯ ಶ್ರೇಷ್ಟ ನಿರ್ದೇಶಕರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳ ಜೊತೆಗೆ ಕಿರುತೆರೆಯ ಕಾರ್ಯಕ್ರಮ ಹಾಗೂ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.