Don't Miss!
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೇರಿಕಾದಲ್ಲಿ ಶ್ರೀನಾಥ್ ಗೆ ಸಿಕ್ಕಿದೆ ಹೊಸ ಬಿರುದು
ಹಿರಿಯ ನಟ ಶ್ರೀನಾಥ್ ಪ್ರಣಯರಾಜ ಎಂದೇ ಜನಪ್ರಿಯತೆ ಗಳಿಸಿದ್ದಾರೆ. ಆದರೆ, ಈ ನಟನಿಗೆ ಈಗ ಹೊಸ ಬಿರುದು ಸಿಕ್ಕಿದೆ. ಅದು ಅಮೇರಿಕಾದಲ್ಲಿ ಎನ್ನುವುದು ವಿಶೇಷ.
ಅಮೇರಿಕಾದಲ್ಲಿ ನಡೆಯುತ್ತಿರುವ ಅಕ್ಕ ಸಮ್ಮೇಳನದಲ್ಲಿ ಕನ್ನಡ ಅನೇಕ ನಟರು ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ಈಗ ನಟ ಶ್ರೀನಾಥ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಕಳೆದ 50 ವರ್ಷಗಳಿಂದ ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆಯನ್ನು ಗಮನಿಸಿ 'ಅಭಿನಯ ಮಾಣಿಕ್ಯ' ಎಂಬ ಬಿರುದನ್ನು ನೀಡಲಾಗಿದೆ.
ಮೂರು ವರ್ಷದ ಹಿಂದೆ ನಟ ಶ್ರೀನಾಥ್ ರವರಿಗೆ ಏನಾಗಿತ್ತು ಗೊತ್ತಾ?
ಅಮೆರಿಕದ ಡಲ್ಲಾಸ್ ನಗರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಈ ಬಿರುದನ್ನು ಅವರಿಗೆ ನೀಡಿ ಸನ್ಮಾನಿಸಲಾಗಿದೆ. ಈ ಸುಂದರ ಕ್ಷಣಗಳಲ್ಲಿ ಅವರ ಪತ್ನಿ ಗೀತಾ ಕೂಡ ಭಾಗಿಯಾಗಿದ್ದರು.
1967ರಲ್ಲಿ ಬಂದ 'ಲಗ್ನ ಪತ್ರಿಕೆ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ಈ ನಟ ಇಂದಿಗೂ ಬಣ್ಣದ ಜಗತ್ತಿನ ನಂಟಿನಲ್ಲಿ ಇದ್ದಾರೆ. ಪುಟ್ಟಣ್ಣ ಕಣಗಾಲ್ ರೀತಿಯ ಶ್ರೇಷ್ಟ ನಿರ್ದೇಶಕರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳ ಜೊತೆಗೆ ಕಿರುತೆರೆಯ ಕಾರ್ಯಕ್ರಮ ಹಾಗೂ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.