Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಗಣೇಶ್ ಗೆ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದೇಕೆ?
Recommended Video
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಕೋಟಿಗೊಬ್ಬ-3 ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪೈರಸಿ ಸಮಸ್ಯೆಯ ನಡುವೆಯು ಪೈಲ್ವಾನ್ ಸಕ್ಸಸ್ ನ ಖುಷಿಯಲ್ಲಿರುವ ಕಿಚ್ಚ, ಗೋಲ್ಡನ್ ಸ್ಟಾರ್ ಗಣೇಶ್ ಗೆ ಶುಭಕೋರಿದ್ದಾರೆ. ಕಿಚ್ಚನ ಮಾತುಗಳನ್ನು ಕೇಳಿ ಗಣಿ ಧನ್ಯವಾದ ತಿಳಿಸಿದ್ದಾರೆ.
ಗಣೇಶ್ ಅಭಿನಯದ ಗೀತಾ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಇದೆ ತಿಂಗಳು 27ಕ್ಕೆ ಚಿತ್ರ ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್ ನ ಬ್ಯುಸಿಯಲ್ಲಿರುವ ಗಣಿಗೆ, ಸುದೀಪ್ ಬೆಸ್ಟ್ ವಿಶಸ್ ತಿಳಿಸಿದ್ದಾರೆ. "ಚಿತ್ರದ ಟ್ರೈಲರ್ ಉತ್ತಮ ಮಾಡಿದೆ. ಚಿತ್ರದ ಕಾನ್ಸೆಪ್ಟ್ ತುಂಬ ಕುತೂಹಲಕಾರಿಯಾಗಿದೆ. ಇದೆ ತಿಂಗಳು 27ಕ್ಕೆ ತೆರೆಗೆ ಬರುತ್ತಿರುವ ಗೀತಾ ಸಿನಿಮಾಗೆ ಮತ್ತು ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ" ಎಂದು ಟ್ವೀಟ್ ಮಾಡಿದ್ದಾರೆ.
ದಶಕದ ಜೊತೆಗಾರರಿಗೆ ಧನ್ಯವಾದ ತಿಳಿಸಿದ ಸುದೀಪ್
ಕಿಚ್ಚನ ಟ್ವೀಟ್ ಗೆ ಗಣಿ ಕೂಡ ಧನ್ಯವಾದ ತಿಳಿಸಿದ್ದಾರೆ. ಈ ಮೊದಲು ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾಗೆ ಗಣೇಶ್ ಶುಭಕೋರಿದ್ದರು. ಇತ್ತೀಚಿನ ದಿನಗಳಲ್ಲಿ ಒಬ್ಬ ಸ್ಟಾರ್ ನಟನ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಮತ್ತೊಬ್ಬ ಸ್ಟಾರ್ ನಟ ಶುಭಕೋರುವುದು ಹೆಚ್ಚಾಗುತ್ತಿದೆ.
ಗೀತಾ ಸಿನಿಮಾ ಕನ್ನಡಪರ ಹೋರಾಟ ಮತ್ತು ಚಳುವಳಿಯ ಬಗ್ಗೆ ಇದೆ. ಗಣೇಶ್ ಮೊದಲ ಬಾರಿಗೆ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವಿಜಯ್ ನಾಗೇಂದ್ರ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರು ಕಾಣಿಸಿಕೊಂಡಿದ್ದಾರೆ. ಟ್ರೈಲರ್ ಮೂಲಕ ನಿರೀಕ್ಷೆ ಮೂಡಿಸಿರುವ ಗೀತಾ ಹೇಗಿರಲಿದೆ ಎನ್ನುವುದು 27ಕ್ಕೆ ಗೊತ್ತಾಗಲಿದೆ.