Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿ ನಿಧನಕ್ಕೆ ಕಂಬನಿ ಮಿಡಿದ ಸುದೀಪ್: ಟ್ವಿಟ್ಟರ್ ಡಿಪಿ ಬದಲಾಯಿಸಿ ಸಂತಾಪ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ನಂದೀಶ್ ನಿನ್ನೆ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದೀಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದೀಶ್ ಅನೇಕ ವರ್ಷಗಳಿಂದ ಕಿಚ್ಚ ಸುದೀಪ್ ಸೇನಾ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸುದೀಪ್ ಅಪ್ಪಟ ಅಭಿಮಾನಿ ಮಾತ್ರವಲ್ಲದೆ ಸಹೋದರನಂತೆ ಇದ್ದರು. ನಂದೀಶ್ ನಿಧನದ ಸುದ್ದಿ ಕೇಳಿ ಸುದೀಪ್ ಟ್ವಿಟ್ಟರ್ ನಲ್ಲಿ ನೋವು ಹಂಚಿಕೊಂಡಿದ್ದಾರೆ. ಅಲ್ಲದೆ ಕಿಚ್ಚ ಟ್ವಿಟ್ಟರ್ ಡಿಪಿ ಬದಲಾಯಿಸಿ ನಂದೀಶ್ ಫೋಟೋ ಡಿಪಿಗೆ ಹಾಕಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಇನ್ನು ನಂದೀಶ್ ಸಹೋದರನಂತೆ ಇದ್ದರು. ಆದರೆ ಇನ್ನಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನೋವು ಹಂಚಿಕೊಂಡಿದ್ದಾರೆ.
'ದಬಾಂಗ್' ಬಳಿಕ ತಮಿಳು ಸ್ಟಾರ್ ನಟನ ಚಿತ್ರದಲ್ಲಿ ಸುದೀಪ್ ವಿಲನ್!
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿರುವ ಕಿಚ್ಚ "ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಆನೇಕ ವರ್ಷಗಳಿಂದ ನಮ್ಮೊಂದಿಗೆ ಇದ್ದರು. ತುಂಬ ಮಿಸ್ ಮಾಡಿಕೊಳ್ಳುತ್ತೀವಿ. ಇದು ತುಂಬಲಾರದ ನಷ್ಟ. ನಿಮ್ಮ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬಕ್ಕೆ ನೀಡಲಿ" ಎಂದು ಬರೆದುಕೊಂಡಿದ್ದಾರೆ.
ಸುದೀಪ್ ಅಭಿಮಾನಿಗಳು ಸಹ ಗೆಳೆಯನ ಅಗಲಿಕೆಗೆ ಸಂತಾಪ ಸೂಚಿದ್ದಾರೆ. ಇನ್ನು ಇತ್ತೀಚಿಗಷ್ಟೆ ಸುದೀಪ್ ಮತ್ತೋರ್ವ ಅಭಿಮಾನಿ ಪುನೀತ್ ಆರ್ಯ ನಿಧನರಾಗಿದ್ದರು. ತುಮಕೂರು ಮೂಲಕ ಸುದೀಪ್ ಅಪ್ಪಟ ಅಭಿಮಾನಿಯಾಗಿದ್ದ ಆರ್ಯ ಕೂಡ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಮತ್ತೋರ್ವ ಅಭಿಮಾನಿಯನ್ನು ಕಳೆದುಕೊಂಡು ದುಃಖದಲ್ಲಿ ಇದ್ದಾರೆ ಕಿಚ್ಚ.