twitter
    For Quick Alerts
    ALLOW NOTIFICATIONS  
    For Daily Alerts

    ಮೃತ ಅಭಿಮಾನಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸುದೀಪ್

    |

    Recommended Video

    ಮೃತ ಅಭಿಮಾನಿ ಕುಟುಂಬಕ್ಕೆ ಸಹಾಯಹಸ್ತ ಚಾಚಿದ ಸುದೀಪ್

    ರಸ್ತೆ ಅಫಘಾತದಲ್ಲಿ ಸಾವನ್ನಪ್ಪಿದ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ಪುನೀತ್ ಆರ್ಯ ಕುಟುಂಬಕ್ಕೆ ಸುದೀಪ್ ಆರ್ಥಿಕ ನೆರವು ನೀಡಿದ್ದಾರೆ. ನಿನ್ನ(ಜುಲೈ 28) ತುಮಕೂರಿನಲ್ಲಿ ಸಂಭವಿಸಿದ ಅಫಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಪುನೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಅಭಿಮಾನಿಯ ನಿಧನದ ಸುದ್ದಿ ಕೇಳುತ್ತಿದ್ದಂತೆ ಕಿಚ್ಚ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದರು. ಅಪ್ಪಟ ಅಭಿಮಾನಿಯನ್ನು ಕಳೆದುಕೊಂಡ ದುಃಖವನ್ನು ಹೊರಹಾಕಿದ್ರು. ಜೊತೆಗೆ ಮೃತ ಅಭಿಮಾನಿಯ ಕುಟುಂಬಕ್ಕೆ ಸಾಂತ್ವಾನ ಹೇಳಿ, 2,50,000 ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

    ಅಪ್ಪಟ ಅಭಿಮಾನಿ ಆರ್ಯ ನಿಧನಕ್ಕೆ ಕಂಬನಿ ಮಿಡಿದ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ಆರ್ಯ ನಿಧನಕ್ಕೆ ಕಂಬನಿ ಮಿಡಿದ ಕಿಚ್ಚ ಸುದೀಪ್

    ಪುನೀತ್ ಆರ್ಯ ತುಮಕೂರು ಜಿಲ್ಲೆಯ ಸುದೀಪ್ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದರು. ವಿದಿಯಾಟಕ್ಕೆ ಬಲಿಯಾಗಿ ಬದುಕನ್ನು ಅರ್ಧದಲ್ಲೆ ನಿಲ್ಲಿಸಿ ಬಾರದ ಲೋಕಕ್ಕೆ ಪಯಣ ಬೆಳೆಸಿದ ಆರ್ಯನಿಗೆ, ಸುದೀಪ್ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ನಟ ಕಬೀರ್ ದಹಾನ್ ಸಿಂಗ್ ಕೂಡ ಅಭಿಮಾನಿಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

    Kannada Actor Sudeep Gave Money To His Fan Puneeth Arya Family

    ಈ ಬಗ್ಗೆ ಸುದೀಪ್ ಟ್ವಿಟ್ಟರ್ ನಲ್ಲಿ "ಸುದ್ದಿ ಕೇಳಿ ಆಘಾತವಾಗಿದೆ, ಅದ್ಭುತವಾದ ಆತ್ಮ ಇನ್ಮುಂದೆ ನಮ್ಮೊಂದಿಗೆ ಇಲ್ಲ ಎನ್ನುವುದನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ನನ್ನ ಅಭಿಮಾನಿ ಮತ್ತು ಸಹೋದರನ ಹಾಗೆ ಇದ್ದರು. ತುಂಬ ದುಃಖ ಆಗುತ್ತಿದೆ. ತುಂಬ ಮಿಸ್ ಮಾಡಿಕೊಳ್ಳುತ್ತೇನೆ" ಎಂದು ಅಭಿಮಾನಿಯ ನಿಧನಕ್ಕೆ ಕಿಚ್ಚ ಕಂಬನಿ ಮಿಂಡಿದ್ದಾರೆ.

    English summary
    Kannada actor Sudeep gave money to his fan Puneeth Arya Family. Puneeth died in the accident.
    Monday, July 29, 2019, 12:06
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X