Don't Miss!
- News Lok Sabha Elections 2024: ಮತದಾನದ ದಿನ ಏನಿರುತ್ತೆ...ಏನಿರಲ್ಲ..?
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೃತ ಅಭಿಮಾನಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸುದೀಪ್
Recommended Video
ರಸ್ತೆ ಅಫಘಾತದಲ್ಲಿ ಸಾವನ್ನಪ್ಪಿದ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ಪುನೀತ್ ಆರ್ಯ ಕುಟುಂಬಕ್ಕೆ ಸುದೀಪ್ ಆರ್ಥಿಕ ನೆರವು ನೀಡಿದ್ದಾರೆ. ನಿನ್ನ(ಜುಲೈ 28) ತುಮಕೂರಿನಲ್ಲಿ ಸಂಭವಿಸಿದ ಅಫಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಪುನೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಭಿಮಾನಿಯ ನಿಧನದ ಸುದ್ದಿ ಕೇಳುತ್ತಿದ್ದಂತೆ ಕಿಚ್ಚ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದರು. ಅಪ್ಪಟ ಅಭಿಮಾನಿಯನ್ನು ಕಳೆದುಕೊಂಡ ದುಃಖವನ್ನು ಹೊರಹಾಕಿದ್ರು. ಜೊತೆಗೆ ಮೃತ ಅಭಿಮಾನಿಯ ಕುಟುಂಬಕ್ಕೆ ಸಾಂತ್ವಾನ ಹೇಳಿ, 2,50,000 ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಅಪ್ಪಟ ಅಭಿಮಾನಿ ಆರ್ಯ ನಿಧನಕ್ಕೆ ಕಂಬನಿ ಮಿಡಿದ ಕಿಚ್ಚ ಸುದೀಪ್
ಪುನೀತ್ ಆರ್ಯ ತುಮಕೂರು ಜಿಲ್ಲೆಯ ಸುದೀಪ್ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದರು. ವಿದಿಯಾಟಕ್ಕೆ ಬಲಿಯಾಗಿ ಬದುಕನ್ನು ಅರ್ಧದಲ್ಲೆ ನಿಲ್ಲಿಸಿ ಬಾರದ ಲೋಕಕ್ಕೆ ಪಯಣ ಬೆಳೆಸಿದ ಆರ್ಯನಿಗೆ, ಸುದೀಪ್ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ನಟ ಕಬೀರ್ ದಹಾನ್ ಸಿಂಗ್ ಕೂಡ ಅಭಿಮಾನಿಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಸುದೀಪ್ ಟ್ವಿಟ್ಟರ್ ನಲ್ಲಿ "ಸುದ್ದಿ ಕೇಳಿ ಆಘಾತವಾಗಿದೆ, ಅದ್ಭುತವಾದ ಆತ್ಮ ಇನ್ಮುಂದೆ ನಮ್ಮೊಂದಿಗೆ ಇಲ್ಲ ಎನ್ನುವುದನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ನನ್ನ ಅಭಿಮಾನಿ ಮತ್ತು ಸಹೋದರನ ಹಾಗೆ ಇದ್ದರು. ತುಂಬ ದುಃಖ ಆಗುತ್ತಿದೆ. ತುಂಬ ಮಿಸ್ ಮಾಡಿಕೊಳ್ಳುತ್ತೇನೆ" ಎಂದು ಅಭಿಮಾನಿಯ ನಿಧನಕ್ಕೆ ಕಿಚ್ಚ ಕಂಬನಿ ಮಿಂಡಿದ್ದಾರೆ.