Don't Miss!
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- News ನೇಹಾ ಹತ್ಯೆ: ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ, 90 ದಿನದಲ್ಲಿ ನ್ಯಾಯ ಸಿಗಲಿದೆ: ಸುರ್ಜೇವಾಲ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಾರ್-ವಾರ್, ಮಣ್ಣು-ಮಸಿ ಅಂತ್ಹೇಳಿ ನಟರ ಮಧ್ಯೆ ಹುಳಿ ಹಿಂಡಬೇಡಿ: ಕಿಚ್ಚ
ಬಿಗ್ ಸ್ಟಾರ್ ಗಳ ಸಿನಿಮಾ ಒಂದೇ ದಿನ ತೆರೆ ಕಂಡರೆ, ಸ್ಟಾರ್-ವಾರ್ ಎಂದು ಬರೆಯುತ್ತಾರೆ. ಆದರೆ ಇದು ಸರಿಯಲ್ಲ ಎಂದು ಖುದ್ದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಹೀಗೆ ಬರೆಯುವ ಮೂಲಕ ಸಂಬಂಧಗಳನ್ನು ಹಾಳು ಮಾಡಬೇಡ
ಯಾವುದೇ ಇಬ್ಬರು ಬಿಗ್ ಸ್ಟಾರ್ ಗಳ ಸಿನಿಮಾ ಒಟ್ಟೊಟ್ಟಿಗೆ ಬರ್ತಾ ಇದೆ ಅಂತಂದ್ರೆ, ಸ್ಟಾರ್-ವಾರ್, ಅವರು ವರ್ಸಸ್ ಇವರು, ಅಂತೆಲ್ಲಾ ಉದ್ದುದ್ದಕ್ಕೂ ಎಲ್ಲರೂ ಬರೆಯುತ್ತಾರೆ. ಇದೀಗ ಸ್ಟಾರ್-ವಾರ್ ಎಂಬ ಕಾನ್ಸೆಪ್ಟ್ ಗೆ ಅಭಿನಯ ಚಕ್ರವರ್ತಿ ಅವರು ತಮ್ಮದೇ ಧಾಟಿಯಲ್ಲಿ ಉತ್ತರ ನೀಡಿದ್ದಾರೆ.
ಜೊತೆಗೆ ಸುಖಾ-ಸುಮ್ಮನೆ ಸ್ಟಾರ್-ವಾರ್ ಅನ್ನೋ ದೊಡ್ಡ-ದೊಡ್ಡ ಪದಗಳನ್ನು ಬಳಸಿ, ಆತ್ಮೀಯರಾಗಿರುವಸ್ಟಾರ್ ನಟರ ಮಧ್ಯೆ ಹುಳಿ ಹಿಂಡುವ ಕೆಲಸ ಮಾಡಬೇಡಿ, ಅಂತ ಖುದ್ದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.[ಈ ಬಾರಿ ತೆರೆ ಮೇಲೆ 'ದೀಪಾವಳಿ' ಆಚರಿಸ್ತಾರಾ ಭಾವಿ ದಂಪತಿ?]
ಅಷ್ಟಕ್ಕೂ ಸುದೀಪ್ ಅವರು ಸ್ವಲ್ಪ ಬೇಸರ ಮಾಡಿಕೊಳ್ಳಲು ಪ್ರಮುಖ ಕಾರಣ 'ಸಂತು Straight Forward' ಮತ್ತು 'ಮುಕುಂದ ಮುರಾರಿ' ಚಿತ್ರಗಳು. ಈ ಎರಡೂ ಸಿನಿಮಾ ಮುಂದಿನ ವಾರ ಒಂದೇ ದಿನ ತೆರೆ ಕಾಣುವ ಸಂಭವವಿದೆ.
'ಮುಕುಂದ ಮುರಾರಿ' ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ, ಥಿಯೇಟರ್ ಲಿಸ್ಟ್ ಕೂಡ ಹೊರಬಿದ್ದಿದೆ. ಜೊತೆಗೆ 'ಸಂತು Straight Forward' ಚಿತ್ರದ ಥಿಯೇಟರ್ ಲಿಸ್ಟ್ ಗಳು ಹೊರಬಂದಿವೆ. ಆದ್ದರಿಂದ ಎರಡೂ ಸಿನಿಮಾಗಳು ಒಟ್ಟೊಟ್ಟಿಗೆ ತೆರೆ ಕಾಣುವುದು ಬಹುತೇಕ ಪಕ್ಕಾ.['ಸಂತು' ಅಲಿಯಾಸ್ ಯಶ್ ಕಡೆಯಿಂದ ಅಭಿಮಾನಿಗಳಿಗೆ ಸರ್ ಪ್ರೈಸ್]
ಈ ಎರಡೂ ಸಿನಿಮಾಗಳಲ್ಲಿ ಬಿಗ್ ಸ್ಟಾರ್ ನಟಿಸಿದ್ದಾರೆ. 'ಮುಕುಂದ ಮುರಾರಿ' ಚಿತ್ರದಲ್ಲಿ ಸುದೀಪ್ ಮತ್ತು ಉಪೇಂದ್ರ ನಟಿಸಿದ್ದು, ಯಶ್-ರಾಧಿಕಾ ಪಂಡಿತ್ 'ಸಂತು Straight Forward' ಚಿತ್ರದಲ್ಲಿ ನಟಿಸಿದ್ದಾರೆ. ಇದಕ್ಕೆ ಸ್ಟಾರ್-ವಾರ್ ಎಂದವರಿಗೆ, ಸುದೀಪ್ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.[ದೀಪಾವಳಿಗೆ 'ಮುಕುಂದ ಮುರಾರಿ'ಯ ದರ್ಶನ]
"ಇಬ್ಬರು ಸ್ಟಾರ್ ನಟರ ಚಿತ್ರ ಏಕಕಾಲದಲ್ಲಿ ಬಿಡುಗಡೆ ಆಗುವುದರಿಂದ ಸ್ಟಾರ್-ವಾರ್ ಆಗುತ್ತದೆ ಎಂಬುದಕ್ಕೆ ಅರ್ಥವಿಲ್ಲ. ಅಲ್ಲದೇ ಇಂತಹ ಹೇಳಿಕೆಗಳನ್ನು ನೀಡಿ, ನಟರ ನಡುವಿನ ಉತ್ತಮ ಸಂಬಂಧದಲ್ಲಿ ಬಿರುಕು ಮೂಡಿಸಬೇಡಿ" ಎಂದು ಕಿಚ್ಚ ಸುದೀಪ್ ವಿನಮ್ರವಾಗಿ ಟ್ವೀಟ್ ಮಾಡಿದ್ದಾರೆ.
ಅಕ್ಟೋಬರ್ 28 ರಂದು 'ಮುಕುಂದ ಮುರಾರಿ' ಮತ್ತು ಸಂತು Straight Forward' ಇಡೀ ಕರ್ನಾಟಕದಾದ್ಯಂತ ಅದ್ಧೂರಿಯಾಗಿ ತೆರೆ ಕಾಣುತ್ತಿದೆ.