Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಏಕಾಂಗಿ' ಎಲ್ಲಾ ಬಿಟ್ಟಾಕಿ, ನಿಮ್ ಸ್ಟೈಲ್ ಸಿನಿಮಾ ಮಾಡಿ: ಸುದೀಪ್
Recommended Video
ಸ್ಯಾಂಡಲ್ ವುಡ್ ಮಾಣಿಕ್ಯ ಕಿಚ್ಚ ಸುದೀಪ್ ಮತ್ತು ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತೆ ಒಂದಾಗಿ ತೆರೆ ಮೇಲೆ ಬರುತ್ತಿದ್ದಾರೆ. ಮಾಣಿಕ್ಯ, ಹೆಬ್ಬುಲಿಯಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ಈ ಜೋಡಿ ಈಗ ರವಿ ಬೋಪಣ್ಣ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.
'ಪೈಲ್ವಾನ್' ವೇದಿಕೆಯಲ್ಲಿ ಕಿಚ್ಚನ 'ಅಪ್ಪು'ಗೆ: ಸುದೀಪ್ ಗಾಗಿ ಹಾಡಿದ ಪುನೀತ್
ರವಿಚಂದ್ರನ್ ನಿರ್ದೇಶನದ ಮತ್ತು ಅಭಿನಯದ ರವಿ ಬೋಪಣ್ಣ ಚಿತ್ರದಲ್ಲಿ ಸುದೀಪ್ ವಕೀಲನಾಗಿ ಬಣ್ಣಹಚ್ಚಿದ್ದಾರೆ. ರವಿಚಂದ್ರನ್ ನಿರ್ದೇಶನದಲ್ಲಿ ಅಭಿನಯಿಸುವುದೇ ಪುಣ್ಯ ಎಂದಿರುವ ಸುದೀಪ್, ಚಿತ್ರೀಕರಣದ ನಡುವೆ ಮಾಧ್ಯಮದ ಜೊತೆ ಒಂದಿಷ್ಟು ಇಂಟ್ರಸ್ಟಿಂಗ್ ಸಂಗತಿಯನ್ನು ಹಂಚಿಕೊಂಡಿದ್ದಾರೆ.
ಅವರ ಮಕ್ಕಳಿಗೆ ಸಿಗದ ಅದೃಷ್ಟ ಸಿಕ್ಕಿದೆ
"ರವಿ ಸರ್ ಮಕ್ಕಳಿಗೆ ಸಿಗದೆ ಇರುವ ಅದೃಷ್ಟ ನನಗೆ ಸಿಕ್ಕಿದೆ. ಆಡಿಯೋದಲ್ಲಿ ದುಡ್ಡು ಮಾಡಬಹುದು, ಗ್ಲಾಮರ್ ಅಂದ್ರೆ ಏನು, ಚಿಕ್ಕ ಹಾಡನ್ನು ಹೀಗೂ ಮಾಡಬಹುದು ಎನ್ನುವುದನ್ನು ತೋರಿಸಿದವರು ಅವರು. ಅನೇಕರಿಗೆ ರವಿ ಸರ್ ಸ್ಫೂರ್ತಿ ಆಗಿದ್ದಾರೆ. ಅವರ ನಿರ್ದೇಶನದಲ್ಲಿ ಕೆಲಸ ಮಾಡುವುದು ನನ್ನ ಪುಣ್ಯ" ಎಂದು ಹೇಳಿದ್ದಾರೆ.
ಸುದೀಪ್ ಜೊತೆ ಕನ್ನಡದಲ್ಲೂ ಮಾತನಾಡಲಿದ್ದಾರೆ ಸಲ್ಮಾನ್ ಖಾನ್
ನ್ಯಾಯ ಕೇಳೋಣ ಅಂತ ಅನಿಸುತ್ತೆ
ಕೆಲವು ಟೈಂನಲ್ಲಿ ನ್ಯಾಯ ಕೇಳೋನ ಅಂತ ಅನಿಸುತ್ತೆ. ಸರಿಯಾಗಿ ಅಂತಹ ಪಾತ್ರ ಕೊಟ್ಟಿದ್ದಾರೆ. ಎಂದು ತಮಾಷೆ ಮಾಡುತ್ತ ವರ್ಷಗಳ ಬಳಿಕ ಕರಿ ಕೋಟು ಧರಿಸಿದ ಬಗ್ಗೆ ಹೇಳಿಕೊಂಡಿದ್ದಾರೆ. "ಇದು ರವಿ ಸರ್ ಕನಸು. ಅವರು ಹೇಗೆ ತೋರಿಸಬೇಕು ಅಂತ ಅಂದಕೊಂಡಿದ್ದಾರೊ ನಾನು ಹಾಗೆ ಮಾಡುತ್ತೇನೆ". ಎಂದು ಸುದೀಪ್ ಹೇಳಿದ್ದಾರೆ.
ಏಕಾಂಗಿ ಎಲ್ಲಾ ಬಿಟ್ಟಾಗಿ
"ರವಿ ಸರ್ ಮತ್ತೆ ಹಳೆಯ ರವಿ ಸರ್ ಆಗಬೇಕು ಎನ್ನುವುದು ನಮ್ಮೆಲರ ಉದ್ದೇಶ. ಅವರನ್ನು ಹಿಂದಿನ ರವಿ ಸರ್ ತರ ನೋಡಲು ಬಯಸುತ್ತೇನೆ. ನಿಮ್ಮತರ ಸ್ಟೈಲ್ ನಲ್ಲಿ ಸಿನಿಮಾ ಮಾಡಿ. ಏಕಾಂಗಿ ಎಲ್ಲಾ ಬಿಟ್ಟಾಗಿ" ಎಂದು ರವಿಚಂದ್ರನ್ ಗೆ ಸುದೀಪ್ ಹೇಳಿದ್ದಾರೆ. ಗ್ಲಾಮರ್ ಮಾಡಿಕೊಂಡು ಹಾಡುಗಳನ್ನು ಹಾಕಿಕೊಂಡು ಸಿನಿಮಾ ಮಾಡಿ. ರವಿ ಸರ್ ಏನಕ್ಕೆ ಖ್ಯಾತಿ ಅಂತ ಗೊತ್ತಲ್ಲ ಎಂದು ಕಾಲೆಳೆಯುತ್ತ ಮತ್ತೆ ರೋಮ್ಯಾಂಟಿಕ್ ಸಿನಿಮಾಗಳನ್ನು ಮಾಡಿ ಎಂದು ಸುದೀಪ್ ಹೇಳಿದ್ದಾರೆ.
'ಯಜಮಾನ್ರಿಗೊಂದು ರಂಗನಮನ': ಶುಭ ಕೋರಿದ ಸುದೀಪ್
ರವಿ ಸರ್ ತುಂಬ ರೋಮ್ಯಾಂಟಿಕ್
ರವಿ ಸರ್ ಸ್ಟೈಲ್ ನಲ್ಲಿ ನೀವು ಸಿನಿಮಾ ಮಾಡುತ್ತೀರಾ? ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸುದೀಪ್ ಅವರ ಥರ ಸ್ಟೈಲ್ ನಲ್ಲಿ ಸಿನಿಮಾ ಮಾಡಿದ್ರೆ ಖಂಡಿತ ಫೇಲ್ ಆಗ್ತೀನಿ. ರವಿ ಸರ್ ತುಂಬಾ ರೋಮ್ಯಾಟಿಂಕ್, ಆದ್ರೆ ನಾವು ಹಾಗಲ್ಲ. ದೃಶ್ಯಕ್ಕೆ ಏನು ಬೇಕೊ ಅದನ್ನು ಮಾಡೇ ಮಾಡ್ತಾರೆ. ಅವರು ಮನಸು ಮಾಡಿದ್ರೆ ಈಗಲು ಅಂತಹ ಸಿನಿಮಾಗಳನ್ನು ಮಾಡಬಹುದು. ಮಾಡುತ್ತಾರೆ" ಎಂದು ರವಿಚಂದ್ರನ್ ಬಗ್ಗೆ ಹೇಳಿದ್ದಾರೆ.