Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸುದೀಪ್
ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ಮತ್ತು ಆಪ್ತರಾಗಿದ್ದ ನಂದೀಶ್ ಕಳೆದ ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ತೀವ್ರ ನಿಗಾಘಟಕದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಂದೀಶ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಡಿಸೆಂಬರ್ 19)ಇಹಲೋಕ ತ್ಯಜಿಸಿದ್ದಾರೆ. ಈ ಬಗ್ಗೆ ನೋವು ಹಂಚಿಕೊಂಡಿದ್ದ ಸುದೀಪ್ ಇಂದು ಮೃತ ಅಭಿಮಾನಿಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಸುದೀಪ್ ಇಂದು ನಂದೀಶ್ ಮನೆಗೆ ಹೋಗುತ್ತಿದ್ದಂತೆ ನಂದೀಶ್ ತಾಯಿ ಸುದೀಪ್ ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಪಕ್ಕದಲ್ಲೆ ಇಟ್ಟಿದ್ದ ಮಗನ ಫೋಟೋ ನೋಡಿ ಬಿಕ್ಕಳಿಸಿ ಅಳುತ್ತಿದ್ದರು. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಇಡೀ ಕುಟುಂಬ ದುಃಖದಲ್ಲಿದೆ. ಕುಟುಂಬದವರಿಗೆ ಧೈರ್ಯ ಹೇಳಿದ ಸುದೀಪ್ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಅಭಿಮಾನಿ ನಿಧನಕ್ಕೆ ಕಂಬನಿ ಮಿಡಿದ ಸುದೀಪ್: ಟ್ವಿಟ್ಟರ್ ಡಿಪಿ ಬದಲಾಯಿಸಿ ಸಂತಾಪ
ಸುದೀಪ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಸಮಯದಲ್ಲಿ ಇಡೀ ನಂದೀಶ್ ಕುಟುಂಬವಿದೆ. ಅಪ್ಪಟ ಅಭಿಮಾನಿಯನ್ನು ಕಳೆದುಕೊಂಡ ದುಃಖದಲ್ಲಿ ಇರುವ ಸುದೀಪ್ ಟ್ವಿಟ್ಟರ್ ನಲ್ಲಿ ನೋವನ್ನು ಹಂಚಿಕೊಂಡಿದ್ದಾರೆ.
ದೀಪಣ್ಣ ಇಂದು ಅಪಘಾತದಲ್ಲಿ ಮಡಿದ ಅಭಿಮಾನಿ ನಂದೀಶ್ ಮನೆಗೆ ಬೇಟಿ ನೀಡಿ ಸಂಬಂಧಿಕರನ್ನು ಸಂತೈಸಿದ ಕ್ಷಣ 🙏🙏🙏@KicchaSudeep @iampriya06 pic.twitter.com/SsrCDJiNUs
— DDKSSS official (R) (@ddksssofficial) December 20, 2019
ಸುದೀಪ್ ಅಪ್ಪಟ ಅಭಿಮಾನಿ ಮಾತ್ರವಲ್ಲದೆ ಸಹೋದರನಂತೆ ಇದ್ದರು. ನಂದೀಶ್ ನಿಧನದ ಸುದ್ದಿ ಕೇಳಿ ಸುದೀಪ್ ಟ್ವಿಟ್ಟರ್ ನಲ್ಲಿ ನೋವು ಹಂಚಿಕೊಂಡಿದ್ದಾರೆ. ಅಲ್ಲದೆ ಕಿಚ್ಚ ಟ್ವಿಟ್ಟರ್ ಡಿಪಿ ಬದಲಾಯಿಸಿ ನಂದೀಶ್ ಫೋಟೋ ಡಿಪಿಗೆ ಹಾಕಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿರುವ ಕಿಚ್ಚ "ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಆನೇಕ ವರ್ಷಗಳಿಂದ ನಮ್ಮೊಂದಿಗೆ ಇದ್ದರು. ತುಂಬ ಮಿಸ್ ಮಾಡಿಕೊಳ್ಳುತ್ತೀವಿ. ಇದು ತುಂಬಲಾರದ ನಷ್ಟ. ನಿಮ್ಮ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬಕ್ಕೆ ನೀಡಲಿ" ಎಂದು ಬರೆದುಕೊಂಡಿದ್ದಾರೆ.