Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಿಲನ' ಖ್ಯಾತಿಯ ಹಿರಿಯ ನಟ ಸುರೇಶ್ ಮಂಗಳೂರು ಇನ್ನಿಲ್ಲ
ಹಲವಾರು ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕರಾವಳಿಯ ಪ್ರತಿಭೆ ಹಿರಿಯ ನಟ ಸುರೇಶ್ ಮಂಗಳೂರು ಅವರು ಕಿಡ್ನಿ ವೈಫಲ್ಯದಿಂದ ಮಂಗಳವಾರ (ಮೇ 17) ನಮ್ಮನ್ನಗಲಿದ್ದಾರೆ.
ವಿನು ಬಳೆಂಜ ಅವರ 'ಪ್ರೀತಿ ಇಲ್ಲದ ಮೇಲೆ' ಧಾರಾವಾಹಿಯಲ್ಲಿ ಗುರುತಿಸಿಕೊಂಡ ನಟ ಸುರೇಶ್ ಮಂಗಳೂರು ಅವರು ತದನಂತರ ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.
'ಮಾತಾಡ್ ಮಾತಾಡ್ ಮಲ್ಲಿಗೆ' ಚಿತ್ರದ ಮೂಲಕ ಮೊಟ್ಟ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ತದನಂತರ 'ತಾಜ್ ಮಹಲ್' ಚಿತ್ರದಲ್ಲಿ ನಾಯಕ ಅಜೇಯ್ ರಾವ್ ಅವರ ತಂದೆಯ ಪಾತ್ರದಲ್ಲಿ, 'ಚಾರ್ ಮಿನಾರ್' ಚಿತ್ರದಲ್ಲಿ ನಟ ಲವ್ಲಿ ಸ್ಟಾರ್ ಪ್ರೇಮ್ ತಂದೆಯಾಗಿ, 'ಮಿಲನ' ಚಿತ್ರದಲ್ಲಿ ನಟಿ ಪಾರ್ವತಿ ಮೆನನ್ ತಂದೆಯಾಗಿ, 'ಮೈಲಾರಿ' ಚಿತ್ರದಲ್ಲಿ ಶಿವಣ್ಣ ಅವರ ತಂದೆಯ ಪಾತ್ರದಲ್ಲಿ ಮಿಂಚಿ ಎಲ್ಲರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಂಪಲ್ ಆಗಿ ನಟಿಸುವ ಇವರ ಅದ್ಭುತ ನಟನೆಗೆ ಪ್ರೇಕ್ಷಕರು ಮಾರು ಹೋಗುತ್ತಿದ್ದರು. ಇವರು ಬರೀ ಕನ್ನಡ ಚಿತ್ರಗಳಲ್ಲಿ ಮಾತ್ರವಲ್ಲದೇ, ಕೆಲವು ತುಳು ಸಿನಿಮಾಗಳಲ್ಲಿ ಹಾಗೂ ತೆಲುಗು ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಇಂತಹ ಮನೋಜ್ಞ ನಟನನ್ನು ಕಳೆದುಕೊಂಡ ನಮ್ಮ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.