twitter
    For Quick Alerts
    ALLOW NOTIFICATIONS  
    For Daily Alerts

    ಮೈಸೂರಿನಲ್ಲಿ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಲಿರುವ ಉಪೇಂದ್ರ.!

    By Pavithra
    |

    ಸಿನಿಮಾರಂಗದಿಂದ ರಾಜಕೀಯಕ್ಕೆ ಪ್ರವೇಶ ಮಾಡಿರುವ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ(ಕೆಪಿಜೆಪಿ)ದ ಪ್ರಚಾರ ಕಾರ್ಯ ಮೈಸೂರಿನಿಂದ ಪ್ರಾರಂಭ ಮಾಡಲು ತಯಾರಿ ನಡೆಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಿನಲ್ಲಿ ಮೊದಲ ಸುದ್ದಿಗೋಷ್ಠಿ ಮಾಡುವ ಮೂಲಕ ರಾಜಕೀಯ ಅಭಿಯಾನವನ್ನು ಮೈಸೂರಿನಲ್ಲಿ ಆರಂಭಿಸಲಿದ್ದಾರೆ.

    upendra kick starts his party promotion from mysore

    ಉಪೇಂದ್ರ ತಮ್ಮ 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ'ಯ ಸುದ್ದಿಗೋಷ್ಠಿಯನ್ನು ಇದೇ ಶುಕ್ರವಾರ (ಡಿಸೆಂಬರ್ 1) ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜನೆ ಮಾಡಿದ್ದಾರೆ. ಸದ್ಯ ರಾಜಕೀಯ ಕೇಂದ್ರ ಬಿಂದುವಾಗಿರುವ ಮೈಸೂರಿನಲ್ಲಿ ಉಪ್ಪಿ ಪಕ್ಷದ ರಾಜಕೀಯ ಪ್ರಚಾರಕ್ಕೆ ಚಾಲನೆ ಸಿಗಲಿದೆ.

    ಈ ಹಿಂದೆ ಸಿನಿಮಾ ಪ್ರಚಾರಕ್ಕೆ ಹಾಗೂ ಚಿತ್ರೀಕರಣಕ್ಕಾಗಿ ಮೈಸೂರಿಗೆ ಬೇಟಿ ನೀಡುತಿದ್ದ ಉಪೇಂದ್ರ ಇದೇ ಪ್ರಥಮಬಾರಿಗೆ ಅಲ್ಲಿ ತಮ್ಮ ಪಕ್ಷದ ಬಗ್ಗೆ ಮಾತನಾಡಲಿದ್ದಾರೆ. ಇಷ್ಟು ದಿನಗಳ ಕಾಲ ಬೆಂಗಳೂರಿನಲ್ಲಿ ಜನರಿಗೆ ತಮ್ಮ ಪಕ್ಷದ ಬಗ್ಗೆ ಮಾಹಿತಿ ತಿಳಿಸಿದ್ದ ಉಪೇಂದ್ರ ಡಿಸೆಂಬರ್ ತಿಂಗಳಿನಿಂದ ಜಿಲ್ಲೆಗಳಿಗೆ ಬೇಟಿ ನೀಡಿ ಅಲ್ಲಿಯ ಜನರನ್ನು ನೇರವಾಗಿ ಬೇಟಿ ಮಾಡಿ ತಮ್ಮ ಪಕ್ಷದ ಅಜೆಂಡಾಗಳನ್ನು ತಿಳಿಸಲಿದ್ದಾರೆ.

    ಸಿಎಂ ಸಿದ್ದರಾಮಯ್ಯನವರ ತವರಿನಲ್ಲೇ ಉಪ್ಪಿ ಸುದ್ದಿಗೋಷ್ಠಿ ಮಾಡುತ್ತಿರೋದು ಯಾಕೆ..? ಸುದ್ದಿಗೋಷ್ಠಿಯಲ್ಲಿ ಏನೆಲ್ಲಾ ವಿಚಾರಗಳನ್ನು ಅವರು ಚರ್ಚೆ ಮಾಡುತ್ತಾರೆ? ಚಿತ್ರರಂಗದ ಬುದ್ದಿವಂತ ರಾಜಕೀಯದಲ್ಲಿಯೂ ಸ್ಟ್ರಾಟೆಜಿ ಮಾಡುತ್ತಾರಾ? ಹೀಗೆ ಹತ್ತು ಹಲವು ಕುತೂಹಲಗಳು ಹುಟ್ಟುಕೊಂಡಿದ್ದು, ಡಿಸೆಂಬರ್ 1ಕ್ಕೆ ಈ ಎಲ್ಲಾ ಪ್ರಶ್ನೆಗಳಿಗೂ ಖುದ್ದು ಉಪೇಂದ್ರ ಅವರೇ ಉತ್ತರಿಸಲಿದ್ದಾರೆ.

    English summary
    Upendra to his start his KPJP party campaign from Mysore. ರಾಜಕೀಯ ಕೇಂದ್ರಬಿಂದುವಾಗಿರೋ ಮೈಸೂರಿನಿಂದ ತಮ್ಮ ಪಕ್ಷದ ಪ್ರಚಾರ ಪ್ರಾರಂಭ ಮಾಡಲಿದ್ದಾರೆ ಉಪೇಂದ್ರ
    Wednesday, November 29, 2017, 17:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X