Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಟಿ ಕಚೇರಿಗೆ ಬಂದಿದ್ದ ಕಿಚ್ಚ ಸುದೀಪ್ ಹೇಳಿದ್ದೇನು?
Recommended Video
ಸ್ಯಾಂಡಲ್ ವುಡ್ ನಟ ನಿರ್ಮಾಪಕರ ಮನೆ ಮೇಲೆ ನಡೆದಿದ್ದ ಐಟಿ ದಾಳಿ ಹಿನ್ನೆಲೆ ನಟ ಸುದೀಪ್ ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ಭೇಟಿ ನೀಡಿದ್ದರು.
ಐಟಿ ಅಧಿಕಾರಿಗಳು ನೀಡಿದ್ದ ನೋಟಿಸ್ ಕಾರಣ ಸುದೀಪ್ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಅನ್ನೋದಕ್ಕಿಂತ ರೀ-ಕನ್ಫರ್ಮ್ಮೇಶನ್ (re confirmation) ಗಾಗಿ ಬಂದಿದ್ದರು. ಅಂದ್ರೆ, ಐಟಿ ರೇಡ್ ನಡೆದ ದಿನ ನೀಡಿರುವ ಹೇಳಿಕೆಗಳು ಸರಿಯಾಗಿದೆಯಾ ಅಥವಾ ಹೇಳಿಕೆ ಬದಲಾಗಬೇಕಾ ಎಂಬುದನ್ನ ದೃಢಿಕರೀಸಲು ಸುದೀಪ್ ಅವರಿಗೆ ತಿಳಿಸಲಾಗಿತ್ತು, ಹಾಗಾಗಿ, ಬಂದಿದ್ದರು.
ಐಟಿ ರೈಡ್ ಬಗ್ಗೆ ಸುದೀಪ್ ಪ್ರತಿಕ್ರಿಯೆ: ಇದು ನಮ್ಮ ಪರ್ಸನಲ್ ವಿಚಾರದ ದಾಳಿ ಅಲ್ಲ
ಐಟಿ ಕಚೇರಿಯಿಂದ ವಾಪಸ್ ಆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸುದೀಪ್ ''ಕೆಲವು ಅಳಿಲು ತಪ್ಪು ಆಗಿರಬಹುದು ಅಥವಾ ದೊಡ್ಡ ತಪ್ಪು ಆಗಿರಬಹುದು. ಯಾವುದು ಉದ್ದೇಶಪೂರ್ವಕವಾಗಿಲ್ಲ. ಅದನ್ನ ಸರಿಪಡಿಸಿಕೊಳ್ಳಬಹುದು. ಅದಕ್ಕೊಂದು ಎಚ್ಚರಿಕೆ ಅಷ್ಟೇ'' ಎಂದು ಸುದೀಪ್ ಪ್ರತಿಕ್ರಿಯಿಸಿದ್ದಾರೆ.
ಐಟಿ ಅಧಿಕಾರಿಗಳು ಇವರನ್ನೇ ಟಾರ್ಗೆಟ್ ಮಾಡಲು ಕಾರಣ ಇದಿರಬಹುದೇ?
''ಐಟಿ ವಿಚಾರಣೆ ಸದ್ಯಕ್ಕೆ ಮುಗಿಯುದಿಲ್ಲ. ಇನ್ನೂ 5-6 ತಿಂಗಳು ವಿಚಾರಣೆ ನಡೆಯುತ್ತದೆ. ಐಟಿ ದಾಳಿ ನಡೆದಾಗ 'ಪೈಲ್ವಾನ್' ಶೂಟಿಂಗ್ ನಡೆಯುತ್ತಿತ್ತು. ಅದನ್ನ ಬಿಟ್ಟು ಬಂದಿದ್ದೆ. ಇವತ್ತು ಕೂಡ 'ಸೈರಾ' ಶೂಟಿಂಗ್ ಇತ್ತು. ಆದರೆ ಅವರ ಬಳಿಕ ಅವಕಾಶ ಕೇಳಿಕೊಂಡು ಬಂದಿದ್ದೇನೆ. ಸದ್ಯಕ್ಕೆ ಇವತ್ತಿನ ವಿಚಾರಣೆ ಮುಗಿಯಿತು. ಅಗತ್ಯವಿದ್ದಾಗ ನಮ್ಮ ಆಡಿಟರ್ ವಿಚಾರಣೆ ಹಾಜರಾಗ್ತಾರೆ'' ಎಂದು ಸುದೀಪ್ ಹೇಳಿದರು.
ಸ್ಯಾಂಡಲ್ ವುಡ್ ನ '8' ಶ್ರೀಮಂತ ಮನೆಗಳ ಮೇಲೆ ಐಟಿ ರೈಡ್
ಬೇರೆ ನಟರಿಗೆ ಸಂಬಂಧಿಸಿದಂತೆ ಮಾತನಾಡಿದ ಸುದೀಪ್, ''ಸಾರ್ವಜನಿಕರ ಜೀವನದಲ್ಲಿ ಇರುವುದಿಂದ ಎಲ್ಲರು ಪ್ರಶ್ನೆ ಮಾಡುತ್ತಾರೆ. ಅವರುಗಳಿಗೆ ಏನು ಸಮಸ್ಯೆ, ಕಿರಿಕಿರಿ ಆಗಿದೆ ಗೊತ್ತಿಲ್ಲ. ಅವರ ಸ್ಥಾನದಲ್ಲಿ ನಾನು ನಿಂತು ಹೇಳಲು ಸಾಧ್ಯವಿಲ್ಲ. ನನ್ನ ಪರ ಅವರು, ಅವರ ಪರ ನಾನು ಮಾತನಾಡಲು ಆಗುವುದಿಲ್ಲ'' ಎಂದರು.