Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪದ್ಯ ಓದುವ ಸವಾಲ್ ಎಸೆದ ರಾಕಿಂಗ್ ಸ್ಟಾರ್ ಯಶ್
Recommended Video
ಸವಾಲ್ ಎಸೆಯುವ ವಿಚಾರದಲ್ಲಿ ಸ್ಟಾರ್ ನಟರು ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚಿಗೆ ಫಿಟ್ ನೆಸ್ ಚಾಲೆಂಜ್, ಬಾಟಲ್ ಕ್ಯಾಪ್ ಚಾಲೆಂಜ್ ಹೀಗೆ ಸಾಕಷ್ಟು ಚಾಲೆಂಜ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಕಿಂಗ್ ಸ್ಟಾರ್ ಕಡೆಯಿಂದ ಈಗ ಹೊಸ ಚಾಲೆಂಜ್ ಶುರುವಾಗಿದೆ.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಪದ್ಯ ಅಥವಾ ಕವನ ಓದುವ ಸವಾಲಿನ ಅಭಿಯಾನದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಿದ್ದಾರೆ. ಹಿರಿಯ ಪತ್ರಕರ್ತರೊಬ್ಬರು ಹಾಕಿದ ಸವಾಲ್ ಸ್ವೀಕರಿಸಿ ಯಶ್ ಪದ್ಯ ಓದಿದ್ದಾರೆ. ಯಶ್ ಅವರಿಗೆ ತುಂಬ ಇಷ್ಟವಾದ ಕುವೆಂಪು ಅವರ ಪದ್ಯ ಓದಿದ್ದಾರೆ.
ರಾಷ್ಟ್ರ ಕವಿ ಕುವೆಂಪು ಅವರ ವಿಶ್ವ ಮಾನವ ಸಂದೇಶ ಸಾರಿರುವ ಅನಿಕೇತನ ಪದ್ಯವನ್ನು ಓದಿ ತಮ್ಮ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ಸವಾಲ್ ಸ್ವೀಕರಿಸುವಂತೆ. ಯಶ್ ಗುರುಗಳಾದ ನಾಗಾಭರಣ, ಸಾಹಿತಿಗಳಾದ ಡಾ.ವಿ ನಾಗೇಂದ್ರ ಪ್ರಸಾದ್, ಗೌಸ್ ಪೀಸ್ ಮತ್ತು ಕಾಮಿಡಿ ನಟರಾದ ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಅರುಮುಗಂ ರವಿಶಂಕರ್ ಅವರಿಗೆ ಪದ್ಯ ಓದುವ ಸವಾಲ್ ನೀಡಿದ್ದಾರೆ.
ನವೆಂಬರ್ ತಿಂಗಳು ಅಂದರೆ ಕನ್ನಡದ ಹಬ್ಬ. ಕನ್ನಡಿಗರು ಹೆಮ್ಮೆಯಿಂದ ಆಚರಿಸುವ ಹಬ್ಬ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಮತ್ತಷ್ಟು ವಿಶಿಷ್ಟವಾಗಿ ಆಚರಿಸಲು ಸ್ಯಾಂಡಲ್ ವುಡ್ ಸ್ಟಾರ್ ಸಿದ್ಧರಾಗಿದ್ದಾರೆ. ಇಷ್ಟವಾದ ಪದ್ಯವನ್ನು ಓದಿ ಇನ್ನೊಬ್ಬರಿಗೆ ಸವಾಲ್ ಎಸೆಯುವ ಅಭಿಯಾನ ಇದಾಗಿದೆ. ಕನ್ನಡದ ಈ ಸವಾಲ್ ಎಸೆಯುವ ಅಭಿಯಾನ ಎಷ್ಟರ ಮಟ್ಟಿಗೆ ಸದ್ದು ಮಾಡಲಿದೆ ಎನ್ನುವ ಕುತೂಹಲ ಮೂಡಿಸಿದೆ.