Don't Miss!
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಹಸಿರು ಅಭಿಯಾನಕ್ಕೆ ಭರ್ಜರಿ ರೆಸ್ಪಾನ್ಸ್
ನೆಚ್ಟಿನ ನಟನ ಹುಟ್ಟುಹಬ್ಬ ಅಂದರೆ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ಅಭಿಮಾನಿಗಳು ಅವರವರ ಹುಟ್ಟುಹಬ್ಬ ಆಚರಿಸಿಕೊಳ್ಳದಿದ್ದರು ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ದೂರಿ ಸೆಲೆಬ್ರೆಟ್ ಮಾಡಿ ಸಂಭ್ರಮಿಸುತ್ತಾರೆ. ಸದ್ಯ ಸ್ಯಾಂಡಲ್ ವುಡ್ ನ ರಾಕಿ ಭಾಯ್ ಯಶ್ ಹುಟ್ಟುಹಬ್ಬಕ್ಕೆ ಈಗಾಗಲೆ ಭರ್ಜರಿ ತಯಾರಿ ನಡೆಯುತ್ತಿದೆ.
ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಇನ್ನು 50 ದಿನಗಳು ಇದೆ. ಈಗಾಗಲೆ ಅಭಿಮಾನಿಗಳು ಸಿದ್ಧರಾಗುತ್ತಿದ್ದಾರೆ. ಈ ಬಾರಿ ಯಶ್ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದೆ.
ಒಂದ್ಕಾಲದ ಕಿರುತೆರೆ ನಟರೇ ಇಂದು ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಗಳು.!
"BE A PART OF SOLUTION BUT NOT POLLUTION. SAVE WATER, PLANT TREES, GO GREEN" ಎನ್ನುವ ಅಭಿಯಾನದ ಮೂಲಕ ವಿಶಿಷ್ಟವಾಗಿ ಬರ್ತಡೇ ಸೆಲೆಬ್ರೆಟ್ ಮಾಡಲಾಗುತ್ತಿದೆ. ವಿಭಿನ್ನ ಅಭಿಯಾನಕ್ಕೆ ಅಭಿಮಾನಿಗಳು ಸಂಭ್ರಮದಿಂದ ಭಾಗಿಯಾಗಿದ್ದಾರೆ.
ಯಶ್ ಅಭಿಮಾನಿಗಳ ಪರಿಸರ ಕಾಳಜಿ
ಪರಿಸರ ಕಾಳಜಿ ವಿಚಾರವಾಗಿ ಯಶ್ ಅಭಿಮಾನಿಗಳು ಇಂದಿನಿಂದ ಜನವರಿ 8 ಯಶ್ ಹುಟ್ಟುಹಬ್ಬದ ವರೆಗೂ ಪರಿಸರ ಸಂರಕ್ಷಣೆ ಜೊತೆಗೆ ಗಿಡಗಳನ್ನು ನೆಟ್ಟು ಬೆಳೆಸುವ ಹೊಸ ಅಭಿಯಾನ ಕೈಗೊಂಡಿದ್ದಾರೆ. ಇದಕ್ಕಾಗಿಯೆ ಯಶ್ ಕಾಮನ್ ಡಿಪಿ ಕೂಡ ರಿಲೀಸ್ ಮಾಡಲಾಗಿದೆ.
ಅಭಿಯಾನಕ್ಕೆ ಶಾನ್ವಿ ಸಾಥ್
ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾತ್ಸವ್ ಈ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.
"ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಬಳಗದ ಆಹ್ವಾನದಂತೆ 5BOSS0 POSTER ಅಂದ್ರೆ CDP (Common Display Picture)ನ ತಮ್ಮ ಫೇಸ್ ಬುಕ್, ಟ್ವಿಟ್ಟರ್ ಮತ್ತು ಇನ್ಸ್ ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಈ ಪೋಸ್ಟರ್ ಕಾನ್ಸೆಪ್ಪ್ ನನಗೆ ಸಖತ್ ಇಷ್ಟ ಆಯ್ತು. ಪರಿಸರ ಮಾಲಿನ್ಯದ ಮೇಲೆ ಕೋಪಗೊಂಡಿರೋ ಯಶ್ ಸಾರ್ ಅವರ ಮೈ ಮನಸು ಹಸಿರು ಮಯವಾಗಿರುವಂತೆ ಡಿಸೈನ್ ಮಾಡಿರೋ ರೀತಿ ಇಂಟ್ರೆಸ್ಟಿಂಗ್ ಅನ್ನಿಸ್ತಿದೆ. ಯಶ್ ಅವರ ಅಭಿಮಾನಿಗಳ ಈ ಅಭಿಯಾನದಲ್ಲಿ ನಾನು ಭಾಗಿಯಾಗಿದ್ದೀನಿ ನೀವು ಭಾಗಿಯಾಗಿ. ಹಸಿರು ಬೆಳೆಸೋಣ. ಪರಿಸರ ಉಳಿಸೋಣ. ಜೈ ಹಿಂದ್, ಜೈ ಕರ್ನಾಟಕ ಮಾತೆ" ಎಂದು ಬರೆದುಕೊಂಡಿದ್ದಾರೆ.
ಮಕ್ಕಳ ದಿನಾಚರಣೆಯಲ್ಲಿ ಮಕ್ಕಳ ಜೊತೆ ಮಗುವಾದ ಯಶ್
ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್
ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾತ್ಸವ್ ಕಾಮನ್ ಡಿಪಿ ರಿಲೀಸ್ ಮಾಡಿ, ಅಭಿಯಾನ ಶುರು ಮಾಡುತ್ತಿದ್ದಂತೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈಗಾಗಲೆ ಅಭಿಮಾನಿಗಳು ಗಿಡಗಳನ್ನು ನೆಟ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಲ್ಲದೆ ಎಲ್ಲರೂ ಅಭಿಯಾನದಲ್ಲಿ ಭಾಗಿಯಾಗುವಂತೆ ಕೇಳಿಕೊಳ್ಳುತ್ತಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಕಿದ ಸವಾಲು ಸ್ವೀಕರಿಸಿದ ನಟ ಚಿಕ್ಕಣ್ಣ
ಬಾಂಗ್ಲದೇಶ ಅಭಿಮಾನಿಗಳಿಂದ ಸಾಥ್
ರಾಕಿ ಭಾಯ್ ಹವಾ ಕೇವಲ ಭಾರತದ ಮಾತ್ರವಲ್ಲ ವಿದೇಶದಲ್ಲೂ ಜೋರಾಗಿದೆ. ಪಕ್ಕದ ಬಾಂಗ್ಲದೇಶದಲ್ಲೂ ಯಶ್ ಅಭಿಮಾನಿಗಳು ಅಭಿಯಾನದಲ್ಲಿ ಕೈ ಜೋಡಿಸಿದ್ದಾರೆ. "ಈ ಹಸಿರು ಅಭಿಯಾನದಲ್ಲಿ ನಾವು ಕೈ ಜೋಡಿಸಲಿದ್ದೇವೆ. ಹಾಗಾಗಿ ಬಾಂಗ್ಲದಲ್ಲಿ ಬೊಗರು ಸ್ಥಳದಲ್ಲಿ ದೊಡ್ಡ ಕಾರ್ಯಕ್ರಮ ಕಡ ಏರ್ಪಡಿಸಲಿದ್ದೇವೆ" ಎಂದು ಪೋಸ್ಟರ್ ವೊಂದು ರಿಲೀಸ್ ಮಾಡಲಾಗಿದೆ. ಜೊತೆಗೆ ಗೋ ಗ್ರೀನ್ ಯಶ್ ಫ್ಯಾನ್ಸ್ ಅನ್ನು ಹೆಸರು ಭಾರಿ ಸದ್ದು ಮಾಡುತ್ತಿದೆ.