Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಿಸ್ಟರ್ ಅಂಡ್ ಮಿಸಸ್' ಆದ ಯಶ್-ರಾಧಿಕಾ ಪಂಡಿತ್
ಸ್ಯಾಂಡಲ್ ವುಡ್ ನ ಸ್ಮಾರ್ಟ್ ಅಂಡ್ ಹ್ಯಾಂಡ್ಸಮ್ ಹುಡುಗ 'ರಾಕಿಂಗ್ ಸ್ಟಾರ್' ಯಶ್ ಇಂದು ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. 10 ವರ್ಷಗಳಿಂದಲೂ ಆತ್ಮೀಯ ಗೆಳತಿ ಆಗಿರುವ ನಟಿ ರಾಧಿಕಾ ಪಂಡಿತ್ ರವರ ಕೈ ಹಿಡಿದಿದ್ದಾರೆ ಯಶ್.
ಇಂದು ಮಧ್ಯಾಹ್ನ 11.30 ರಿಂದ 12.30 ವರೆಗೆ ಇದ್ದ ಶುಭ ಅಭಿಜಿತ್ ಲಗ್ನದಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ಹಸೆ ಮಣೆ ಏರಿದರು. 12.30ರ ಸುಮಾರಿಗೆ ರಾಧಿಕಾ ಪಂಡಿತ್ ರವರ ಕೊರಳಿಗೆ ಯಶ್ ಮಾಂಗಲ್ಯಧಾರಣೆ ಮಾಡಿದರು. ಆ ಮೂಲಕ ಇಬ್ಬರ ಸುದೀರ್ಘ ಪ್ರೇಮಕ್ಕೆ ಅಧಿಕೃತ ಮುದ್ರೆ ಬಿದ್ದಂತಾಗಿದೆ. [ಮೆಹಂದಿ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ರಾಧಿಕಾ-ಯಶ್]
ಬೆಂಗಳೂರಿನ ಪ್ರತಿಷ್ಟಿತ ದಿ ತಾಜ್ ವೆಸ್ಟ್ ಎಂಡ್ ನಲ್ಲಿ ಯಶ್-ರಾಧಿಕಾ ಪಂಡಿತ್ ಮದುವೆ ಅದ್ಧೂರಿಯಾಗಿ ನಡೆಯಿತು. ಇಬ್ಬರ ಗಟ್ಟಿಮೇಳಕ್ಕೆ ಹೋಟೆಲ್ ನ ಹೊರಾಂಗಣದಲ್ಲಿ ಸೋಮನಾಥೇಶ್ವರ ದೇಗುಲದ ಸೆಟ್ ನಿರ್ಮಾಣ ಮಾಡಲಾಗಿತ್ತು.[ಎಕ್ಸ್ ಕ್ಲೂಸಿವ್: ತಾಜ್ ವೆಸ್ಟ್ಎಂಡ್ ನಲ್ಲಿ ಯಶ್-ರಾಧಿಕಾ 'ಧಾರೆ'ಗೆ ಶಿವಾಲಯ ನಿರ್ಮಾಣ]
ವರ ಪೂಜೆ, ಕಾಶಿ ಯಾತ್ರೆ ಮುಗಿಸಿದ ಬಳಿಕ ಮದುವೆ ಮಂಟಪಕ್ಕೆ ಯಶ್ ಆಗಮಿಸಿದರು. ಗೌರಿ ಪೂಜೆ ನೆರವೇರಿಸಿ ರಾಧಿಕಾ ಪಂಡಿತ್ ಮಂಟಪಕ್ಕೆ ಬಂದರು.[ಎಕ್ಸ್ ಕ್ಲೂಸಿವ್ : ನವ ವಧು ರಾಧಿಕಾ ಪಂಡಿತ್ ಗೌರಿ ಪೂಜೆ ವಿಡಿಯೋ]
ಶಿವ-ಪಾರ್ವತಿ, ಗಣಪತಿ ಹಾಗೂ ನಂದಿ ಮೂರ್ತಿ ಸಮ್ಮುಖದಲ್ಲಿ ಹೊಸ ಬಾಳಿಗೆ ಯಶ್ ಹಾಗೂ ರಾಧಿಕಾ ಪಂಡಿತ್ ಕಾಲಿಟ್ಟರು.
ಒಕ್ಕಲಿಗ ಹಾಗೂ ಕೊಂಕಣಿ ಸಂಪ್ರದಾಯದಂತೆ ಮದುವೆ ನಡೆಯಿತು. ನಾಳೆ ಡಿಸೆಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಡಿಸೆಂಬರ್ 11 ರಂದು ಅಭಿಮಾನಿಗಳಿಗೆ ಹಾಗೂ ಒಕ್ಕೂಟದ ಕಾರ್ಮಿಕರಿಗೆ ಔತಣ ಕೂಟ ಏರ್ಪಡಿಸಲಾಗಿದೆ.