Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೊಂದು ಹನಿಯು ಅತ್ಯಮೂಲ್ಯ.. ನೀರನ್ನು ಕಾಳಜಿಯಿಂದ ಬಳಸಿ: ಯಶ್
ಬರದ ನಾಡಿನ ಜನತೆಗೆ ಕುಡಿಯುವ ನೀರಿನ ನೆರವಿಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ 'ಯಶೋಮಾರ್ಗ ಫೌಂಡೇಶನ್' ಮೂಲಕ ಸ್ಪಂದಿಸುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ನಟನೆಯ ಜೊತೆ ಸದಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಯಶ್ ಈಗ ಜನರಿಗೆ ನೀರಿನ ಅಭಾವದ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.[ದಾಹ ತೀರಿಸಿ ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದ ಯಶ್]
ರೈತರ ಪರ ಸದಾ ನಿಂತಿರುವ ಯಶ್, ಈಗಲು 'ಯಶೋಮಾರ್ಗ ಫೌಂಡೇಶನ್' ಮೂಲಕ ನೀರಿಲ್ಲದ ಊರುಗಳಿಗೆ ನೀರು ಪೂರೈಕೆ ಮಾಡುವ ಕಾರ್ಯ ಮಾಡುತ್ತಿದ್ದಾರೆ. ಅದರ ಜೊತೆಗೆ ಈಗ ಜನರಲ್ಲಿ ನೀರಿನ ಅಭಾವದ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.
ಸೇವ್ ವಾಟರ್
"ಹತ್ತು ವರ್ಷಗಳಲ್ಲಿ ಎಂದೂ ಕಂಡಿರದ ಬರ ಪರಿಸ್ಥಿತಿಯನ್ನು ಇಂದು ನಾವು ಎದುರಿಸುತ್ತಿದ್ದೇವೆ. ನೀವು ಉಳಿಸುವ ಪ್ರತಿ ನೀರಿನ ಹನಿಯೂ ಬಾಯಾರಿದವರ ದಾಹ ತಣಿಸಲಿದೆ" ಎಂದು ಯಶ್ ನೀರಿನ ಅಭಾವದ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಹೀಗೆ ಬರೆದಿದ್ದಾರೆ.[ಬರಪೀಡಿತ ಜನರ ದಾಹ ನೀಗಿಸಲು ಯಶ್ ಕೈ ಹಿಡಿದ 'ಅಕಿರ' ತಂಡ]
ನೀರನ್ನು ಕಾಳಜಿಯಿಂದ ಬಳಸಿ
ನೀರನ್ನು ಬಳಸುವ ಬಗ್ಗೆ ಅರಿವು ಮೂಡಿಸಲು ಮುಂದಾಗಿರುವ ಯಶ್ "ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ.. ಮುಂದಿನ ಮಳೆಗಾಲದವರೆಗೂ ಯಾವುದೇ ಕಾರಣಕ್ಕೂ ಹೆಚ್ಚದೇ ಇರುವ ಕಾರಣ, ಇದೇ ನಮ್ಮ ಜೀವಜಲ.. ಈ ನೀರನ್ನೇ ಕಾಳಜಿಯಿಂದ ಬಳಸಿ..' ಎಂಬ ಕರೆಕೊಟ್ಟಿದ್ದಾರೆ.['ಅನಿಲ್-ಉದಯ್' ಕುಟುಂಬಕ್ಕೆ ನೆರವಾದ 'ಯಶೋಮಾರ್ಗ']
ಜಲಾಶಯಗಳ ನೀರಿನ ಮಟ್ಟ ವರದಿ ನೀಡಿದ ಯಶ್
ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಹೆಚ್ಚಾಗಿದ್ದು, ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಲಾಶಯಗಳ ನೀರಿನ ಮಟ್ಟದ ವರದಿಯನ್ನು ಪ್ರಕಟಿಸಿದ್ದಾರೆ.
ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದ ಯಶ್
ಯಶ್ ಕಳೆದ ವರ್ಷದ ಆರಂಭದಲ್ಲಿ 'ಯಶೋಮಾರ್ಗ' ಫೌಂಡೇಶನ್ ಮೂಲಕ ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆಯ 25 ಹಳ್ಳಿಗಳಿಗೆ, ಬಿಜಾಪುರದ 25 ಹಳ್ಳಿಗಳಿಗೆ ಕುಡಿಯುವ ನೀರಿನ ಪೂರೈಕೆ ಮಾಡಿ, ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದಿದ್ದರು.