Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಿತ್ರಮಂದಿರಕ್ಕೆ ಮತ್ತೆ ಬನ್ನಿ ಸಂಭ್ರಮಿಸೋಣ' ಎಂದು ಆಹ್ವಾನಿಸಿದ ಸ್ಟಾರ್ ನಟರು
''ನೂರು ವರುಷಗಳ ಇತಿಹಾಸವಿರುವ ಸಿನಿಮಾ ಇಂದಲ್ಲ ನಾಳೆ ತೆರೆ ಕಾಣಲೇಬೇಕು.....ಚಿತ್ರಮಂದರಿಗಳು ವಿಜೃಂಬಿಸಲೇಬೇಕು...'' ಎನ್ನುತ್ತಿರುವ ಚಿತ್ರರಂಗ ಜನರನ್ನು ಥಿಯೇಟರ್ ಕಡೆಗೆ ಸೆಳೆಯುವ ಪ್ರಯತ್ನ ಮಾಡ್ತಿದೆ.
ಕೊರೊನಾ ವೈರಸ್ ಕಾರಣದಿಂದ ಆರೇಳು ತಿಂಗಳು ಚಿತ್ರಮಂದಿರಗಳು ಮುಚ್ಚಿದ್ದವು. ಸುಮಾರು ದಿನಗಳ ನಂತರ ಮತ್ತೆ ತೆರೆದಿದೆ. ಆದ್ರೆ, ಪ್ರೇಕ್ಷಕರ ಕೊರತೆ ಎದುರಾಗಿದೆ. ಕೊರೊನಾ ಭಯದಿಂದ ಮೊದಲಿನಂತೆ ಜನರು ಬರ್ತಿಲ್ಲ, ಹೌಸ್ಪುಲ್ ಪ್ರದರ್ಶನ ಕಾಣ್ತಿಲ್ಲ, ಆದ್ದರಿಂದ ಹೊಸ ಸಿನಿಮಾಗಳನ್ನು ರಿಲೀಸ್ ಮಾಡಲು ನಿರ್ಮಾಪಕರು ಹಿಂದೇಟು ಹಾಕುತ್ತಿದ್ದಾರೆ.
ಬೇಡಿಕೆ ಈಡೇರಿಸುವ ವರೆಗೆ ಚಿತ್ರಪ್ರದರ್ಶನ ಇಲ್ಲ: ಚಿತ್ರ ಪ್ರದರ್ಶಕರ ಮಂಡಳಿ
ಇದೀಗ, ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಕರೆತರುವ ಪ್ರಯತ್ನಕ್ಕೆ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. 'ಚಿತ್ರಮಂದಿರಕ್ಕೆ ಮತ್ತೆ ಬನ್ನಿ ಸಂಭ್ರಮಿಸೋಣ' ಎಂಬ ಹೆಸರಿನಲ್ಲಿ ಸ್ಯಾಂಡಲ್ ವುಡ್ ಸ್ಟಾರ್ಗಳು ಅಭಿಮಾನ ಆರಂಭಿಸಿದ್ದಾರೆ.
ಈ ಕುರಿತು ಕೆಆರ್ಜಿ ಸ್ಟುಡಿಯೋಸ್ ವಿಡಿಯೋವೊಂದನ್ನು ನಿರ್ಮಿಸಿದ್ದು, ಶಿವರಾಜ್ ಕುಮಾರ್, ದುನಿಯಾ ವಿಜಯ್, ಪುನೀತ್ ರಾಜ್ ಕುಮಾರ್, ಧನಂಜಯ್, ಶ್ರೀಮುರಳಿ ಹಾಗೂ ಗಣೇಶ್ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಲಾಕ್ಡೌನ್ ಮುಗಿದ ನಂತರ ಥಿಯೇಟರ್ ಮಾಲೀಕರು ಚಿತ್ರಮಂದಿರ ಪುನರಾರಂಭಿಸುತ್ತಾರೆ. ಲಾಕ್ಡೌನ್ಗೂ ಮೊದಲು ಇದ್ದಂತೆ ಪರಿಸ್ಥಿತಿ ಮತ್ತೆ ಸಾಧ್ಯನಾ? ಪ್ರೇಕ್ಷಕರು, ಆ ಸಂಭ್ರಮ, ಪಟಾಕಿ, ಕುಣಿತ ಎಲ್ಲವೂ ನೋಡಲು ಸಾಧ್ಯನಾ ಎಂದು ಆ ಮಾಲೀಕ ಪ್ರಶ್ನಿಸಿಕೊಳ್ಳುತ್ತಾನೆ. ಮೊದಲಿನಂತೆ ಪ್ರೇಕ್ಷಕರು ಬರ್ತಾರೆ ಎನ್ನುವ ಆತ್ಮವಿಶ್ವಾಸವನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ.