Don't Miss!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ಚಿತ್ರದಲ್ಲಿ ಪುನೀತ್, ಉಪೇಂದ್ರ, ಸುದೀಪ್ ಅಭಿನಯ
ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿನಯ ಚಕ್ರವರ್ತಿ ಹಾಗೂ ರಿಯಲ್ ಸ್ಟಾರ್ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ ಅನ್ನುವ ಸುದ್ದಿಗಳು ಬಹಳ ದಿನಗಳಿಂದ ಹರಿದಾಡುತ್ತಲೇ ಇತ್ತು. ಚಿತ್ರ ನಿರ್ದೇಶಕರಾಗಲಿ ಅಥವಾ ನಿರ್ಮಾಪಕರಾಗಲಿ ಈ ಸುದ್ದಿಯ ಬಗ್ಗೆ ಯಾರು ಮಾತನಾಡಿರಲಿಲ್ಲ. ಆದರೆ ಈಗ ಈ ಗಾಸಿಪ್ ಸುದ್ದಿಗೆ ಪುಷ್ಠಿ ಸಿಕ್ಕಿದೆ.
ಸಿನಿಮಾರಂಗ ಸೇರಿದಂತೆ ರಾಜಕೀಯ ರಂಗದಲ್ಲೂ ಗುರುತಿಸಿಕೊಂಡಿರುವ ನಿರ್ಮಾಪಕ ಮುನಿರತ್ನ ಈ ಮೂವರು ಸ್ಟಾರ್ ನಟರನ್ನ ಒಂದೇ ಚಿತ್ರದಲ್ಲಿ ತರುವಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಹೌದು ಕುರುಕ್ಷೇತ್ರ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿರುವ ಮುನಿರತ್ನ ಸುದೀಪ್, ಪುನೀತ್ ಹಾಗೂ ಉಪೇಂದ್ರ ಅವರಿಗಾಗಿ ಕಥೆ ರೆಡಿಯಾಗಿದ್ದು ಚಿತ್ರದಲ್ಲಿ ಮೂರು ಜನರು ಅಭಿನಯಿಸಿದರೆ ತುಂಬಾ ಚೆನ್ನಾಗಿರುತ್ತೆ ಎಂದಿದ್ದಾರೆ.
'ಚಾಣಾಕ್ಷ ಚಂದ್ರಗುಪ್ತ' ಅನ್ನುವ ಟೈಟಲ್ ನಲ್ಲಿ ಚಿತ್ರ ನಿರ್ಮಾಣ ಮಾಡಲು ನಿರ್ಮಾಪಕ ಮುನಿರತ್ನ ತಯಾರಿ ಮಾಡಿಕೊಂಡಿದ್ದಾರಂತೆ. ಕುರುಕ್ಷೇತ್ರ ಚಿತ್ರದ ನಂತರ ಇಂಥದೊಂದು ಸಿನಿಮಾ ಮಾಡಲೇ ಬೇಕು ಎಂದು ನಿರ್ಧರಿಸಿದ್ದಾರೆ.
ಚಂದ್ರಗುಪ್ತನ ಪಾತ್ರದಲ್ಲಿ ಪುನೀತ್ ರಾಜ್ ಕುಮಾರ್, ಚಾಣಾಕ್ಷ ಪಾತ್ರದಲ್ಲಿ ನಟ ಉಪೇಂದ್ರ ಹಾಗೂ ಅಲೆಗ್ಜಾಂಡರ್ ಆಗಿ ಸುದೀಪ್ ನಟಿಸಬೇಕು ಎನ್ನುವ ಆಸೆಯನ್ನೂ ಒಂದಿದ್ದಾರೆ.
ಸದ್ಯ ಕತೆಯನ್ನ ತಯಾರಿ ಮಾಡಿಕೊಳ್ಳುತ್ತಿದ್ದು ಚಿತ್ರದ ಬಗ್ಗೆ ಜೂನ್ ಅಥವಾ ಜುಲೈನಲ್ಲಿ ಸುದ್ದಿ ಕೊಡಲಿದ್ದಾರಂತೆ. ಸಿನಿಮಾವನ್ನ ಯಾರು ನಿರ್ದೇಶನ ಮಾಡುತ್ತಾರೆ ಅನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಆದರೆ 'ಚಾಣಾಕ್ಷ ಚಂದ್ರಗುಪ್ತ' ಹೆಸರಿನಲ್ಲಿ ಚಿತ್ರ ಸೆಟ್ಟೇರುವು ಗ್ಯಾರೆಂಟಿ ಅನ್ನೋದನ್ನ ತಿಳಿಸಿದ್ದಾರೆ ಮುನಿರತ್ನ.
ಒಟ್ಟಾರೆ ಬಹಳ ದಿನದಿಂದ ಮೂರು ಸ್ಟಾರ್ ಗಳನ್ನ ಒಟ್ಟಿಗೆ ತೆರೆ ಮೇಲೆ ನೋಡಬೇಕು ಎಂದು ಆಸೆ ಪಟ್ಟಿದ್ದ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ ಮುನಿರತ್ನ.