Don't Miss!
- News
Breaking; ಸಾಹಿತಿ, ವಿಮರ್ಶಕ ಕೆ. ವಿ. ತಿರುಮಲೇಶ್ ನಿಧನ
- Technology
ಜಿಯೋ ಗ್ರಾಹಕರೆ, ಈ ರೀಚಾರ್ಜ್ ಪ್ಲ್ಯಾನ್ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?
- Automobiles
'ಅಲ್ಟ್ರಾವೈಲೆಟ್ F77' ಹೇಗಿದೆ ಗೋತ್ತಾ.. ಇಲ್ಲಿದೆ ವಿಮರ್ಶೆ
- Lifestyle
ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ಕುರಿತ ಆಸಕ್ತಿಕರ ಸಂಗತಿಗಳಿವು
- Sports
ನೀವೇ ನಮಗೆ ಸ್ಪೂರ್ತಿ: ಕಿರಿಯರ ಸಾಧನೆಗೆ ಹರ್ಮನ್ಪ್ರೀತ್ ಕೌರ್ ಮುಕ್ತಕಂಠದ ಶ್ಲಾಘನೆ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕನ್ನಡ ನಟರಿಂದ ತುಳು ಭಾಷೆಯ ಅಭಿಯಾನಕ್ಕೆ ಬಲ ಬಂತು
Recommended Video
ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಗಬೇಕು ಎನ್ನುವ ಕೋರಿಕೆ ಅನೇಕ ವರ್ಷಗಳಿಂದ ಇದೆ. ಈಗ ಈ ಅಭಿಯಾನ ಸೋಷಿಯಲ್ ಮೀಡಿಯಾಗೆ ಬಂದಿದೆ. ಒಂದು ವಾರ ಹಿಂದೆ ಶುರುವಾದ ಅಭಿಯಾನಕ್ಕೆ ಕನ್ನಡ ನಟರು ಬಲ ತುಂಬಿದ್ದಾರೆ.
ನಟ ಶಿವರಾಜ್ ಕುಮಾರ್, ಜಗ್ಗೇಶ್, ರಕ್ಷಿತ್ ಶೆಟ್ಟಿ, ನಿರೂಪ್ ಭಂಡಾರಿ, ನಿರ್ದೇಶಕ ರಿಷಬ್ ಶೆಟ್ಟಿ, ಸಿಂಪಲ್ ಸುನಿ, ಅನೂಪ್ ಭಂಡಾರಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. #TuluOfficial ಹಾಗೂ #TuluOfficialinKA_KL ಹ್ಯಾಶ್ ಟ್ಯಾಗ್ ಮೂಲಕ ಟ್ವೀಟ್ ಮಾಡುತ್ತಿದ್ದಾರೆ.
ಆಗಸ್ಟ್ 10 ರಂದು ಮತ್ತೊಮ್ಮೆ ತುಳು ಭಾಷೆ ಮಾನ್ಯತೆಗಾಗಿ ಟ್ವೀಟ್ ಅಭಿಯಾನ
''ತುಳು ಭಾಷೆಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ'' ಎಂದು ವಿಡಿಯೋ ಮೂಲಕ ಶಿವಣ್ಣ ಹೇಳಿದ್ದಾರೆ.
ಕರಾವಳಿ ಭಾಗದ ನಟರೇ ಆಗಿರುವ ರಕ್ಷಿತ್ ಶೆಟ್ಟಿ ''ನಮ್ಮ ಭಾಷೆ ಮತ್ತು ಸಂಸ್ಕೃತಿ ವಿಚಾರದಲ್ಲಿ ನಾನು ನಿಮ್ಮ ಜೊತೆಗೆ ಎಂದಿಗೂ ಇರುತ್ತೇನೆ. ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ, ತುಳು ಸಮುದಾಯ ಮುಂದೆ ಬಂದು ಈ ಅಭಿಯಾನ ನಡೆಸಬೇಕು'' ಎಂದು ತಿಳಿದಿದ್ದಾರೆ.
ತುಳು ಒಂದು ವರ್ಗದ ಭಾಷೆಯಾಗಿದ್ದು, ಅದಕ್ಕೆ ಅದರದ್ದೆ ಆದ ಇತಿಹಾಸ ಇದೆ. ಹೀಗಾಗಿ, ವಿಭಿನ್ನ ಸಂಸ್ಕೃತಿ ಹೊಂದಿರುವ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎನ್ನುವುದು ಅಲ್ಲಿಯ ಭಾಗದ ಜನರ ಒತ್ತಾಯವಾಗಿದೆ.