Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ನಟರಿಂದ ತುಳು ಭಾಷೆಯ ಅಭಿಯಾನಕ್ಕೆ ಬಲ ಬಂತು
Recommended Video
ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಗಬೇಕು ಎನ್ನುವ ಕೋರಿಕೆ ಅನೇಕ ವರ್ಷಗಳಿಂದ ಇದೆ. ಈಗ ಈ ಅಭಿಯಾನ ಸೋಷಿಯಲ್ ಮೀಡಿಯಾಗೆ ಬಂದಿದೆ. ಒಂದು ವಾರ ಹಿಂದೆ ಶುರುವಾದ ಅಭಿಯಾನಕ್ಕೆ ಕನ್ನಡ ನಟರು ಬಲ ತುಂಬಿದ್ದಾರೆ.
ನಟ ಶಿವರಾಜ್ ಕುಮಾರ್, ಜಗ್ಗೇಶ್, ರಕ್ಷಿತ್ ಶೆಟ್ಟಿ, ನಿರೂಪ್ ಭಂಡಾರಿ, ನಿರ್ದೇಶಕ ರಿಷಬ್ ಶೆಟ್ಟಿ, ಸಿಂಪಲ್ ಸುನಿ, ಅನೂಪ್ ಭಂಡಾರಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. #TuluOfficial ಹಾಗೂ #TuluOfficialinKA_KL ಹ್ಯಾಶ್ ಟ್ಯಾಗ್ ಮೂಲಕ ಟ್ವೀಟ್ ಮಾಡುತ್ತಿದ್ದಾರೆ.
ಆಗಸ್ಟ್ 10 ರಂದು ಮತ್ತೊಮ್ಮೆ ತುಳು ಭಾಷೆ ಮಾನ್ಯತೆಗಾಗಿ ಟ್ವೀಟ್ ಅಭಿಯಾನ
''ತುಳು ಭಾಷೆಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ'' ಎಂದು ವಿಡಿಯೋ ಮೂಲಕ ಶಿವಣ್ಣ ಹೇಳಿದ್ದಾರೆ.
ಕರಾವಳಿ ಭಾಗದ ನಟರೇ ಆಗಿರುವ ರಕ್ಷಿತ್ ಶೆಟ್ಟಿ ''ನಮ್ಮ ಭಾಷೆ ಮತ್ತು ಸಂಸ್ಕೃತಿ ವಿಚಾರದಲ್ಲಿ ನಾನು ನಿಮ್ಮ ಜೊತೆಗೆ ಎಂದಿಗೂ ಇರುತ್ತೇನೆ. ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ, ತುಳು ಸಮುದಾಯ ಮುಂದೆ ಬಂದು ಈ ಅಭಿಯಾನ ನಡೆಸಬೇಕು'' ಎಂದು ತಿಳಿದಿದ್ದಾರೆ.
ತುಳು ಒಂದು ವರ್ಗದ ಭಾಷೆಯಾಗಿದ್ದು, ಅದಕ್ಕೆ ಅದರದ್ದೆ ಆದ ಇತಿಹಾಸ ಇದೆ. ಹೀಗಾಗಿ, ವಿಭಿನ್ನ ಸಂಸ್ಕೃತಿ ಹೊಂದಿರುವ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎನ್ನುವುದು ಅಲ್ಲಿಯ ಭಾಗದ ಜನರ ಒತ್ತಾಯವಾಗಿದೆ.